ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಅಲ್ಲಿನ ರೈತರು ನಾಶಿಕ್ನಿಂದ ಮುಂಬೈವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ 30,000ಕ್ಕಿಂತಲೂ ಹೆಚ್ಚು ರೈತರು ಭಾಗಿಯಾಗಿದ್ದು, ಶಿವಸೇನಾ, ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮತ್ತು ಆಮ್ ಆದ್ಮಿ ಪಕ್ಷ ಈ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.