<p><strong>ಬಾಗಲಕೋಟೆ:</strong> ಜಿಲ್ಲೆಯಲ್ಲಿ ಬಂಜಾರ ಸಮುದಾಯದ ಸರ್ಕಾರಿ ನೌಕರರು ಕೆಲಸ ಮಾಡುವುದು ಕಷ್ಟವಾಗಿದೆ. ಅವರನ್ನು ಗುರಿಯಾಗಿಸಿ ತೊಂದರೆ ಕೊಡಲಾಗುತ್ತಿದೆ ಎಂದು ಸಮಾಜದ ಮುಖಂಡ ಬಲರಾಮ ನಾಯಕ ಆರೋಪಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರ ಸಮಾಜದ ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರೂ ಅವರನ್ನು ಸುಖಾಸುಮ್ಮನೆ ವರ್ಗಾವಣೆ ಮಾಡುವ, ಅಮಾನತುಗೊಳಿಸುವ ಕೆಲಸ ನಡೆಯುತ್ತಿದೆ. ಇಲ್ಲಸಲ್ಲದ ಕಿರುಕುಳ ನೀಡುವುದು ಜಿಲ್ಲೆಯ ಜನಪ್ರತಿನಿಧಿಗಳ ಕೆಲಸವಾಗಿದೆ ಎಂದರು.</p>.<p>ಇನ್ನು ಮುಂದೆ ಯಾರಿಗೆ ತೊಂದರೆಯಾದರೂ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಖಂಡ ಚಂದ್ರಶೇಖರ ರಾಥೋಡ ಮಾತನಾಡಿ, ಬಂಜಾರ ಸಮಾಜವನ್ನು ಎಲ್ಲಾ ಪಕ್ಷದವರು ಕಡೆಗಣಿಸುತ್ತಿದ್ದಾರೆ ಎಂದರು.</p>.<p>ವಕೀಲ ರಾಜು ಲಮಾಣಿ ಮಾತನಾಡಿ, ಜಿಲ್ಲಾ ಬಂಜಾರ ಸಮುದಾಯ ಭವನ ನಿರ್ಮಾಣಕ್ಕೆ ನವನಗರದಲ್ಲಿ ಜಮೀನು ಕೊಟ್ಟಿಲ್ಲ. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದೆ ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಹೂವಪ್ಪ ರಾಥೋಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲೆಯಲ್ಲಿ ಬಂಜಾರ ಸಮುದಾಯದ ಸರ್ಕಾರಿ ನೌಕರರು ಕೆಲಸ ಮಾಡುವುದು ಕಷ್ಟವಾಗಿದೆ. ಅವರನ್ನು ಗುರಿಯಾಗಿಸಿ ತೊಂದರೆ ಕೊಡಲಾಗುತ್ತಿದೆ ಎಂದು ಸಮಾಜದ ಮುಖಂಡ ಬಲರಾಮ ನಾಯಕ ಆರೋಪಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರ ಸಮಾಜದ ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರೂ ಅವರನ್ನು ಸುಖಾಸುಮ್ಮನೆ ವರ್ಗಾವಣೆ ಮಾಡುವ, ಅಮಾನತುಗೊಳಿಸುವ ಕೆಲಸ ನಡೆಯುತ್ತಿದೆ. ಇಲ್ಲಸಲ್ಲದ ಕಿರುಕುಳ ನೀಡುವುದು ಜಿಲ್ಲೆಯ ಜನಪ್ರತಿನಿಧಿಗಳ ಕೆಲಸವಾಗಿದೆ ಎಂದರು.</p>.<p>ಇನ್ನು ಮುಂದೆ ಯಾರಿಗೆ ತೊಂದರೆಯಾದರೂ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಖಂಡ ಚಂದ್ರಶೇಖರ ರಾಥೋಡ ಮಾತನಾಡಿ, ಬಂಜಾರ ಸಮಾಜವನ್ನು ಎಲ್ಲಾ ಪಕ್ಷದವರು ಕಡೆಗಣಿಸುತ್ತಿದ್ದಾರೆ ಎಂದರು.</p>.<p>ವಕೀಲ ರಾಜು ಲಮಾಣಿ ಮಾತನಾಡಿ, ಜಿಲ್ಲಾ ಬಂಜಾರ ಸಮುದಾಯ ಭವನ ನಿರ್ಮಾಣಕ್ಕೆ ನವನಗರದಲ್ಲಿ ಜಮೀನು ಕೊಟ್ಟಿಲ್ಲ. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದೆ ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಹೂವಪ್ಪ ರಾಥೋಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>