ಪಂಚಮಸಾಲಿ ಸಮಾಜ ಸೇರಿದಂತೆ ಲಿಂಗಾಯತ ಸಮುದಾಯದ 42 ಉಪ ಪಂಗಡಗಳನ್ನು 2ಎಗೆ ಪ್ರವರ್ಗಕ್ಕೆ ಸೇರಿಸುವ ಬೇಡಿಕೆಗೆ 2012ರಲ್ಲಿ ಆಗಿನ ಸರ್ಕಾರ ಸ್ಪಂದಿಸಿತ್ತು. ಆಗ ಸಚಿವ ಸಿ.ಎಂ.ಉದಾಸಿ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ ವರದಿ ನೀಡಿದ್ದರೂ ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಸರ್ಕಾರ ಕೂಡಲೇ ಸಿ.ಎಂ.ಉದಾಸಿ ಸಮಿತಿ ವರದಿಯನ್ನು ಜಾರಿಗೊಳಿಸಲಿ ಎಂದು ಆಗ್ರಹಿಸಿದರು.