<p><strong>ಬಾಗಲಕೋಟೆ:</strong> ಕನ್ನಡಪರ ಮಾತಾಡುವವರನ್ನು ರೋಲ್ಕಾಲ್ ಹೋರಾಟಗಾರರು ಎಂದು ಕರೆದಿರುವ ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣ ಸಾ ಭಾಂಡಗೆ ಮೊದಲು ತಮ್ಮ ಇತಿಹಾಸ ನೋಡಿಕೊಳ್ಳಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಬದನೂರ ಛೇಡಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉದ್ಧಟತನದ ಮಾತಿಗೆ ನಾರಾಯಣ ಸಾ ಭಾಂಡಗೆ ಸಂಘಟನೆಗಳ ಕ್ಷಮೆ ಯಾಚಿಸಲಿ. ಇಲ್ಲದಿದ್ದರೆ ಅವರ ಹಿನ್ನೆಲೆ ಹಾಗೂ ಬಂಡವಾಳ ನಾವೇ ಬಯಲು ಮಾಡಬೇಕಾಗುತ್ತದೆ. ಬೆಳಗಾವಿಯ ಮಾಜಿ ಮೇಯರ್ ವಿಜಯ ಮೋರೆಗೆ ಆದ ಗತಿ ನಿಮಗೂ ಆಗಲಿದೆ ಎಂದು ಎಚ್ಚರಿಸಿದರು.</p>.<p>ನಾರಾಯಣ ಸಾ ಭಾಂಡಗೆ ತಾವು ಪ್ರತಿನಿಧಿಸುವ ಕ್ಷತ್ರೀಯ ಸಮಾಜ ಮರಾಠ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆಯೇ ಎಂಬುದನ್ನು ನೋಡಿಕೊಳ್ಳಲಿ. ತಮ್ಮ ಸಮುದಾಯಕ್ಕೆ ನ್ಯಾಯ ಕಲ್ಪಿಸಲು ಆಗದವರು ಕನ್ನಡಪರ ಹೋರಾಟಗಾರರ ಬಗ್ಗೆ ಮಾತನಾಡಿದರೆ ಸಹಿಸುವುದಿಲ್ಲ ಎಂದರು.</p>.<p>ಬಿಜೆಪಿ ವರಿಷ್ಠರನ್ನು ಮೆಚ್ಚಿಸಲು ಈ ರೀತಿ ಮಾತಾಡುವ ಬದಲು ಕ್ಷತ್ರೀಯ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಲು ಹೋರಾಟ ಮಾಡಲಿ. ಇಲ್ಲವೇ ಕ್ಷತ್ರೀಯ ಮಹಾಸಭಾ ಪ್ರಾಧಿಕಾರ ರಚಿಸಿ ₹100 ಕೋಟಿ ಮೀಸಲಿಡಲು ಮುಖ್ಯಮಂತ್ರಿಗೆ ಒತ್ತಾಯಿಸಲಿ ಎಂದು ಆಗ್ರಹಿಸಿದರು.</p>.<p>ಬಿಜೆಪಿಯವರಿಗೆ ನದಿ, ಗಡಿ, ಭಾಷೆಯ ಹೋರಾಟದ ಅಸ್ಮಿತೆಯೇ ಗೊತ್ತಿಲ್ಲ. ಬರೀ ಧರ್ಮ, ಸಮಾಜಗಳ ನಡುವೆ ಒಡಕು ಮೂಡಿಸಿ ಅಧಿಕಾರಕ್ಕೆ ಪಡೆಯುತ್ತಿದ್ದಾರೆ. ಪ್ರತಿ ವರ್ಷ ನವೆಂಬರ್ 1ರಂದು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸುವ ಎಂಇಎಸ್ ಸಂಘಟನೆಯನ್ನುತಾಕತ್ತಿದ್ದರೆ ನಿಷೇಧಿಸಲಿ ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಧರ್ಮಂತಿ, ರವಿ ಶಿಂಧೆ, ಮಂಜುಪವಾರ, ಮಲ್ಲು ಕಟ್ಟಿಮನಿ, ಗಣಪತಿ ಭೋವಿ, ಬಸವರಾಜ ಅಂಬಿಗೇರ, ಆತ್ಮಾರಾಮ ನೀಲನಾಯಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಕನ್ನಡಪರ ಮಾತಾಡುವವರನ್ನು ರೋಲ್ಕಾಲ್ ಹೋರಾಟಗಾರರು ಎಂದು ಕರೆದಿರುವ ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣ ಸಾ ಭಾಂಡಗೆ ಮೊದಲು ತಮ್ಮ ಇತಿಹಾಸ ನೋಡಿಕೊಳ್ಳಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಬದನೂರ ಛೇಡಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉದ್ಧಟತನದ ಮಾತಿಗೆ ನಾರಾಯಣ ಸಾ ಭಾಂಡಗೆ ಸಂಘಟನೆಗಳ ಕ್ಷಮೆ ಯಾಚಿಸಲಿ. ಇಲ್ಲದಿದ್ದರೆ ಅವರ ಹಿನ್ನೆಲೆ ಹಾಗೂ ಬಂಡವಾಳ ನಾವೇ ಬಯಲು ಮಾಡಬೇಕಾಗುತ್ತದೆ. ಬೆಳಗಾವಿಯ ಮಾಜಿ ಮೇಯರ್ ವಿಜಯ ಮೋರೆಗೆ ಆದ ಗತಿ ನಿಮಗೂ ಆಗಲಿದೆ ಎಂದು ಎಚ್ಚರಿಸಿದರು.</p>.<p>ನಾರಾಯಣ ಸಾ ಭಾಂಡಗೆ ತಾವು ಪ್ರತಿನಿಧಿಸುವ ಕ್ಷತ್ರೀಯ ಸಮಾಜ ಮರಾಠ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆಯೇ ಎಂಬುದನ್ನು ನೋಡಿಕೊಳ್ಳಲಿ. ತಮ್ಮ ಸಮುದಾಯಕ್ಕೆ ನ್ಯಾಯ ಕಲ್ಪಿಸಲು ಆಗದವರು ಕನ್ನಡಪರ ಹೋರಾಟಗಾರರ ಬಗ್ಗೆ ಮಾತನಾಡಿದರೆ ಸಹಿಸುವುದಿಲ್ಲ ಎಂದರು.</p>.<p>ಬಿಜೆಪಿ ವರಿಷ್ಠರನ್ನು ಮೆಚ್ಚಿಸಲು ಈ ರೀತಿ ಮಾತಾಡುವ ಬದಲು ಕ್ಷತ್ರೀಯ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಲು ಹೋರಾಟ ಮಾಡಲಿ. ಇಲ್ಲವೇ ಕ್ಷತ್ರೀಯ ಮಹಾಸಭಾ ಪ್ರಾಧಿಕಾರ ರಚಿಸಿ ₹100 ಕೋಟಿ ಮೀಸಲಿಡಲು ಮುಖ್ಯಮಂತ್ರಿಗೆ ಒತ್ತಾಯಿಸಲಿ ಎಂದು ಆಗ್ರಹಿಸಿದರು.</p>.<p>ಬಿಜೆಪಿಯವರಿಗೆ ನದಿ, ಗಡಿ, ಭಾಷೆಯ ಹೋರಾಟದ ಅಸ್ಮಿತೆಯೇ ಗೊತ್ತಿಲ್ಲ. ಬರೀ ಧರ್ಮ, ಸಮಾಜಗಳ ನಡುವೆ ಒಡಕು ಮೂಡಿಸಿ ಅಧಿಕಾರಕ್ಕೆ ಪಡೆಯುತ್ತಿದ್ದಾರೆ. ಪ್ರತಿ ವರ್ಷ ನವೆಂಬರ್ 1ರಂದು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸುವ ಎಂಇಎಸ್ ಸಂಘಟನೆಯನ್ನುತಾಕತ್ತಿದ್ದರೆ ನಿಷೇಧಿಸಲಿ ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಧರ್ಮಂತಿ, ರವಿ ಶಿಂಧೆ, ಮಂಜುಪವಾರ, ಮಲ್ಲು ಕಟ್ಟಿಮನಿ, ಗಣಪತಿ ಭೋವಿ, ಬಸವರಾಜ ಅಂಬಿಗೇರ, ಆತ್ಮಾರಾಮ ನೀಲನಾಯಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>