‘ಒಮ್ಮೆ ಶಾಲೆಯ ಹೆಸರಿನಲ್ಲಿ ಜಾಗ ಇಲ್ಲದ ಕಾರಣಕ್ಕೆ, ಇನ್ನೊಮ್ಮೆ ಕೆಲ ಪಟ್ಟಭದ್ರರ ಪ್ರಭಾವದಿಂದಾಗಿ ಮಂಜೂರಾಗಿದ್ದ ಅನುದಾನ ಬೇರೆಡೆಗೆ ವರ್ಗಾವಣೆಯಾಗಿದೆ. ಈ ಶಾಲೆಯನ್ನು ಬೇರೆಡೆಗೆ ಎತ್ತಂಗಡಿ ಮಾಡಿಸುವ ದುರುದ್ದೇಶವನ್ನು ಕೆಲವರು ಹೊಂದಿದ್ದು, ಕಟ್ಟಡ ಆಗದಂತೆ ನೋಡಿಕೊಂಡಿದ್ದಾರೆ. ಇದರಿಂದ ಈ ಭಾಗದಲ್ಲಿರುವ ನೂರಾರು ಬಡ ಕುಟುಂಬಗಳ ಮಕ್ಕಳಿಗೆ ತೊಂದರೆಯಾಗಿದೆ. ಈಗ ಶಾಸಕ ವಿಜಯಾನಂದ ಕಾಶಪ್ಪನವರ ಮುತುವರ್ಜಿ ವಹಿಸಿ, ಶಾಲೆಗೆ ಕಟ್ಟಡ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು’ ಎಂದು ಇಲ್ಲಿ ಓದುತ್ತಿರುವ ಮಕ್ಕಳ ಪಾಲಕರು ಮನವಿ ಮಾಡಿದ್ದಾರೆ.