<p>ಬಾಗಲಕೋಟೆ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲಿಯುವ ಎಲ್ಲ ವಿದ್ಯಾರ್ಥಿಗಳಿಗೆ ಕೌಶಲ ಮತ್ತು ಗುಣಮಟ್ಟದ ಬೋಧನೆ ದೊರೆಯಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಧಾರವಾಡ ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕ ಪ್ರೊ.ಪ್ರಕಾಶ ಹೊಸಮನಿ ಹೇಳಿದರು. </p>.<p>ಇಲ್ಲಿನ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶನಿವಾರ ಭೇಟಿ ನೀಡಿ, ಬೋಧಕರೊಂದಿಗೆ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆ ಕುರಿತು ಚರ್ಚಿಸಿದರು.</p>.<p>ವಿದ್ಯಾರ್ಥಿಗಳ ಕಲಿಕಾ ಮಟ್ಟವು ಉನ್ನತ ಶ್ರೇಣಿಯಲ್ಲಿರಬೇಕು. ಅವರು ಸಮಾಜದಲ್ಲಿ ಸಾಧಕರಾಗಿ ಹೊರಹೊಮ್ಮಬೇಕು ಎಂದರು.</p>.<p>ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೊಂದಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಕಾಲೇಜಿನ ಸರ್ವ ಸಿಬ್ಬಂದಿಯ ಪ್ರಾಮಾಣಿಕ ಪರಿಶ್ರಮವಿದೆ ಎಂದು ತಿಳಿಸಿದರು.</p>.<p>ಕಾಲೇಜಿನ ಪರವಾಗಿ ಜಂಟಿ ನಿರ್ದೇಶಕರನ್ನು ಸನ್ಮಾನಿಸಲಾಯಿತು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಅಜೀತ್ ನಾಗರಾಳೆ, ಜಿ.ಜಿ. ಹಿರೇಮಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲಿಯುವ ಎಲ್ಲ ವಿದ್ಯಾರ್ಥಿಗಳಿಗೆ ಕೌಶಲ ಮತ್ತು ಗುಣಮಟ್ಟದ ಬೋಧನೆ ದೊರೆಯಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಧಾರವಾಡ ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕ ಪ್ರೊ.ಪ್ರಕಾಶ ಹೊಸಮನಿ ಹೇಳಿದರು. </p>.<p>ಇಲ್ಲಿನ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶನಿವಾರ ಭೇಟಿ ನೀಡಿ, ಬೋಧಕರೊಂದಿಗೆ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆ ಕುರಿತು ಚರ್ಚಿಸಿದರು.</p>.<p>ವಿದ್ಯಾರ್ಥಿಗಳ ಕಲಿಕಾ ಮಟ್ಟವು ಉನ್ನತ ಶ್ರೇಣಿಯಲ್ಲಿರಬೇಕು. ಅವರು ಸಮಾಜದಲ್ಲಿ ಸಾಧಕರಾಗಿ ಹೊರಹೊಮ್ಮಬೇಕು ಎಂದರು.</p>.<p>ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೊಂದಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಕಾಲೇಜಿನ ಸರ್ವ ಸಿಬ್ಬಂದಿಯ ಪ್ರಾಮಾಣಿಕ ಪರಿಶ್ರಮವಿದೆ ಎಂದು ತಿಳಿಸಿದರು.</p>.<p>ಕಾಲೇಜಿನ ಪರವಾಗಿ ಜಂಟಿ ನಿರ್ದೇಶಕರನ್ನು ಸನ್ಮಾನಿಸಲಾಯಿತು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಅಜೀತ್ ನಾಗರಾಳೆ, ಜಿ.ಜಿ. ಹಿರೇಮಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>