<p><strong>ಬಾಗಲಕೋಟೆ</strong>: ‘ಮೂರು ದಿನಗಳಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ವ್ಯಾಪಾರ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ನವನಗರ, ವಿದ್ಯಾಗಿರಿಯಲ್ಲಿನ ನಿಷೇಧಾಜ್ಞೆ ವಾಪಸ್ ಪಡೆಯಲಾಗಿದೆ. ಬಾಗಲಕೋಟೆಯಲ್ಲಿ ಮಾತ್ರ ಫೆ.28ರವರೆಗೆ ಮುಂದುವರಿಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣದಲ್ಲಿ ಕೆಲವು ಸಂಘಟನೆಗಳವರು ಫೆ.26ರಂದು ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ತಿಳಿಸಿರುತ್ತಾರೆ. ನಿಷೇಧಾಜ್ಞೆ ಇರುವುದರಿಂದ ಯಾವುದೇ ಪ್ರತಿಭಟನೆಗೆ ಅವಕಾಶ ಇರುವುದಿಲ್ಲ’ ಎಂದರು.</p>.<p>‘ಮುಂಬರುವ ಹೋಳಿ, ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಪ್ರತಿಭಟನೆಯನ್ನು ಮಾಡದೇ ಶಾಂತಿ ಕಾಪಾಡಲು ಸಹಕರಿಸಬೇಕು. ಪ್ರತಿಭಟನೆ ಕೈಗೊಂಡು ನಗರದಲ್ಲಿ ಅಶಾಂತಿ ಸೃಷ್ಟಿಯಾದರೆ ಸಂಘಟಕರನ್ನೇ ಹೊಣೆಗಾರರನ್ನಾಗಿಸಿ ಕ್ರಮಕೈಗೊಳ್ಳಲಾಗುವುದು’ ಎಂದರು.</p>.<p>‘ಘಟನೆಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡು, ಕೆಲವರನ್ನೂ ಈಗಾಗಲೇ ಬಂಧಿಸಲಾಗಿದೆ. ಸಾಕ್ಷಿ ಆಧರಿಸಿ ತನಿಖೆ ಮುಂದುವರಿಸಲಾಗಿದೆ. ಯಾವುದೇ ಸಮುದಾಯ ನೋಡದೇ ತಪ್ಪು ಮಾಡಿದವರನ್ನು ಬಂಧಿಸಲಾಗುವುದು. ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ‘ಈಗಾಗಲೇ ಹಿಂದೂ, ಮುಸ್ಲಿಮ ಮುಖಂಡರ ಜತೆಗೆ ಸಭೆ ಮಾಡಿದ್ದೇವೆ. ಶಾಂತಿ ಕದಡುವ ಕೆಲಸ ಆಗಬಾರದು. ಆರೋಪಿಗಳನ್ನು ಬಂಧಿಸಲಾಗಿದೆ. ನಿಷ್ಪಕ್ಷಪಾತವಾಗಿ ಕ್ರಮ ಜರುಗಿಸಲಾಗಿದೆ’ ಎಂದರು. </p>.<p>‘ವ್ಯಾಪಾರಸ್ಥರ ಸಂಘದವರು ವಹಿವಾಟಿಗೆ ಧಕ್ಕೆಯಾಗುತ್ತಿದೆ ಎಂದು ಮನವಿ ಸಲ್ಲಿಸಿದ್ದಾರೆ. ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು. ಎಲ್ಲರೂ ಸಹಬಾಳ್ವೆಯಿಂದ ಇರಬೇಕು’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಮೂರು ದಿನಗಳಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ವ್ಯಾಪಾರ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ನವನಗರ, ವಿದ್ಯಾಗಿರಿಯಲ್ಲಿನ ನಿಷೇಧಾಜ್ಞೆ ವಾಪಸ್ ಪಡೆಯಲಾಗಿದೆ. ಬಾಗಲಕೋಟೆಯಲ್ಲಿ ಮಾತ್ರ ಫೆ.28ರವರೆಗೆ ಮುಂದುವರಿಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಗೋಯಲ್ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣದಲ್ಲಿ ಕೆಲವು ಸಂಘಟನೆಗಳವರು ಫೆ.26ರಂದು ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ತಿಳಿಸಿರುತ್ತಾರೆ. ನಿಷೇಧಾಜ್ಞೆ ಇರುವುದರಿಂದ ಯಾವುದೇ ಪ್ರತಿಭಟನೆಗೆ ಅವಕಾಶ ಇರುವುದಿಲ್ಲ’ ಎಂದರು.</p>.<p>‘ಮುಂಬರುವ ಹೋಳಿ, ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಪ್ರತಿಭಟನೆಯನ್ನು ಮಾಡದೇ ಶಾಂತಿ ಕಾಪಾಡಲು ಸಹಕರಿಸಬೇಕು. ಪ್ರತಿಭಟನೆ ಕೈಗೊಂಡು ನಗರದಲ್ಲಿ ಅಶಾಂತಿ ಸೃಷ್ಟಿಯಾದರೆ ಸಂಘಟಕರನ್ನೇ ಹೊಣೆಗಾರರನ್ನಾಗಿಸಿ ಕ್ರಮಕೈಗೊಳ್ಳಲಾಗುವುದು’ ಎಂದರು.</p>.<p>‘ಘಟನೆಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡು, ಕೆಲವರನ್ನೂ ಈಗಾಗಲೇ ಬಂಧಿಸಲಾಗಿದೆ. ಸಾಕ್ಷಿ ಆಧರಿಸಿ ತನಿಖೆ ಮುಂದುವರಿಸಲಾಗಿದೆ. ಯಾವುದೇ ಸಮುದಾಯ ನೋಡದೇ ತಪ್ಪು ಮಾಡಿದವರನ್ನು ಬಂಧಿಸಲಾಗುವುದು. ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ‘ಈಗಾಗಲೇ ಹಿಂದೂ, ಮುಸ್ಲಿಮ ಮುಖಂಡರ ಜತೆಗೆ ಸಭೆ ಮಾಡಿದ್ದೇವೆ. ಶಾಂತಿ ಕದಡುವ ಕೆಲಸ ಆಗಬಾರದು. ಆರೋಪಿಗಳನ್ನು ಬಂಧಿಸಲಾಗಿದೆ. ನಿಷ್ಪಕ್ಷಪಾತವಾಗಿ ಕ್ರಮ ಜರುಗಿಸಲಾಗಿದೆ’ ಎಂದರು. </p>.<p>‘ವ್ಯಾಪಾರಸ್ಥರ ಸಂಘದವರು ವಹಿವಾಟಿಗೆ ಧಕ್ಕೆಯಾಗುತ್ತಿದೆ ಎಂದು ಮನವಿ ಸಲ್ಲಿಸಿದ್ದಾರೆ. ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು. ಎಲ್ಲರೂ ಸಹಬಾಳ್ವೆಯಿಂದ ಇರಬೇಕು’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>