ಬಿತ್ತನೆಗೆ ಧಾವಂತ:ಮಳೆ ಹಿನ್ನೆಲೆಯಲ್ಲಿ ಬೀಜ, ರಸಗೊಬ್ಬರದ ಖರೀದಿ ಭರಾಟೆ ಜೋರಾಗಿದೆ.ಖರೀದಿಗೆ ನಸುಕಿನಲ್ಲಿಯೇ ಆಗಮಿಸುತ್ತಿದ್ದಾರೆ. ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಕರು ಈಗಾಗಲೇ ಸಜ್ಜೆ, ಹೆಸರು, ಗೋವಿನಜೋಳ, ಸೂರ್ಯಕಾಂತಿ ಮುಂತಾದ ಬೀಜಗಳ ಬಿತ್ತನೆಗೆ ಮುಂದಾಗಿದ್ದು ಮಳೆಯ ತೇವಾಂಶ ಅಂದಾಜಿಸಿ ಈಗಾಗಲೇ ಬಹುತೇಕ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆಯುತ್ತಿದೆ.