ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಡಿ ದುರುಪಯೋಗ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Last Updated 22 ಜುಲೈ 2022, 6:51 IST
ಅಕ್ಷರ ಗಾತ್ರ

ಬಾಗಲಕೋಟೆ: ಜಾರಿ ನಿರ್ದೇಶನಾಲಯ ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಕರೆದಿರುವುದನ್ನು ಖಂಡಿಸಿ ಕಾಂಗ್ರೆಸ್‌ ಮುಖಂಡರು ಬಾಗಲಕೋಟೆಯಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.

ಮಾಜಿ ಸಚಿವ ಎಚ್.ವೈ. ಮೇಟಿ ಮಾತನಾಡಿ, ಸೋನಿಯಾಗಾಂಧಿ ಅವರ‌ ಹೆಸರಿಗೆ ಕಳಂಕ ತರಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಡಾಲರ್ ಎದುರು ರೂಪಾಯಿ ಮೌಲ್ಯ ಕಳೆದುಕೊಂಡಿದೆ. ಜನರ ನಡುವೆ ವೈಷಮ್ಯ ತಂದಿಡುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು

ಮಾಜಿ ಶಾಸಕ ಜೆ.ಟಿ ಪಾಟೀಲ ಮಾತನಾಡಿ, ದೇಶಕ್ಕಾಗಿ ಇಬ್ಬರು ಸದಸ್ಯರನ್ನು ಕಳೆದುಕೊಂಡ ಕುಟುಂಬ ರಾಹುಲ್ ಗಾಂಧಿ ಅವರ ಕುಟುಂಬವಾಗಿದೆ ಎಂದರು.

ಮಹಿಳಾ‌ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ, ರಾಹುಲ್ ಕಲೂತಿ ಮಾತನಾಡಿದರು.

ಮಾಜಿ ಸಚಿವ ಶಿವಾನಂದ ಪಾಟೀಲ, ಎಸ್.ಜಿ. ನಂಜಯ್ಯನಮಠ, ಅಜಯಕುಮಾರ ಸರನಾಯಕ, ನಾಗರಾಜ ಹದ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT