‘ಶ್ರೀಗಳ ಸಂಚಾರಕ್ಕೆ ಅಡೆ–ತಡೆ ಮಾಡಿ ಕಾನೂನು ಕೈಗೆ ತೆಗೆದುಕೊಂಡಿದ್ದು, ಚಪ್ಪಲಿ ಎಸೆತ, ಸಂಘಟಿತರಾಗಿ ಪ್ರತಿಭಟನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ. ಗುರುಲಿಂಗೇಶ್ವರ ಮಠದ ಪೀಠಾಧಿಪತಿ ನೇಮಕ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ನ್ಯಾಯಾಲಯ ಸದ್ಯಕ್ಕೆ ನೀಡಿರುವ ಆದೇಶದಂತೆ ಎಲ್ಲರೂ ನಡೆದುಕೊಳ್ಳಬೇಕಾಗುತ್ತದೆ. ಯಾರಾದರೂ ಇದಕ್ಕೂ ಮೀರಿ ನಡೆದುಕೊಂಡು ಅಶಾಂತಿ ಉಂಟು ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಸುದ್ದಿಗಾರರಿಗೆ ತಿಳಿಸಿದರು.