ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋ ಹತ್ಯೆ ಮಾಡುವವರ ಕೈ ಕಡಿಯಿರಿ: ಹಿಂದೂ ಜಾಗರಣ ವೇದಿಕೆಯ ಶ್ರೀಕಾಂತ

Published 6 ಜುಲೈ 2023, 5:59 IST
Last Updated 6 ಜುಲೈ 2023, 5:59 IST
ಅಕ್ಷರ ಗಾತ್ರ

ಗುಳೇದಗುಡ್ಡ : ‘ಗೋವು ನಮ್ಮ ತಾಯಿ. ಆದರೆ ರಾಜ್ಯದ ಎಲ್ಲೆಡೆ ಗೋವುಗಳ ಮಾರಣಹೋಮ ನಡೆಯುತ್ತಿದೆ. ಇದನ್ನು ನೋಡಿಯೂ ನಾವು ಸುಮ್ಮನೆ ಕುಳಿತುಕೊಳ್ಳದೆ ಗೋ ಹತ್ಯೆ ಮಾಡುವವರ ಕೈ ಕಡಿಯಬೇಕಾಗಿದೆ’ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಹ ಸಂಯೋಜಕ ಶ್ರೀಕಾಂತ ಹೊರಕೇರಾ ಆಕ್ರೋಶ ವ್ಯಕ್ತಪಡಿಸಿದರು.

ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆದುಕೊಳ್ಳುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಬುಧವಾರ ಪಟ್ಟಣದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

‘ರಾಮನ ಹೆಸರು ಇಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸಲ್ಮಾನರ ವೋಟಿಗಾಗಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಹಿಂದೂಗಳ ಘೋಷಣೆಗಳು ಈಗ ಬದಲಾಗಬೇಕಿದೆ. ಕಾನೂನು ಉಲ್ಲಂಘನೆ ಮಾಡಿದರೆ ನಾವು ಸುಮ್ಮನಿರಬೇಕೆ? ಗೋ ಹತ್ಯೆ ಮಾಡಿದವರನ್ನು ಹಿಡಿದುಕೊಟ್ಟರೆ ಅಂತವರ ಮೇಲೆ ಪ್ರಕರಣ ದಾಖಲಿಸುತ್ತಾರೆ. ಇದೆಂತ ಕಾನೂನು?’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಳೇದಗುಡ್ಡದಲ್ಲಿ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗುಳೇದಗುಡ್ಡದಲ್ಲಿ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ 1008 ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಮಾತನಾಡಿ, ‘ಗೋವಿನಲ್ಲಿ ಅಪಾರವಾದ ಶಕ್ತಿ ಇದೆ. ಪ್ರಾಣಿ ಕೊಲ್ಲುವುದು ಧರ್ಮವಲ್ಲ. ಜಾಗೃತಿ ಮೂಡಿಸಬೇಕು. ಧರ್ಮ, ಭಾಷೆ, ಪ್ರಾಂತ್ಯ ಬಿಟ್ಟು ಕಾಮಧೇನು ಕೊಲೆ ನಿಲ್ಲಲಿ. ಗೋ ಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಯಾಗಿ ಜನಾಂಗೀಯ ಗೌರವಕ್ಕೆ ಧಕ್ಕೆ ಆಗದಂತೆ ಸರ್ಕಾರ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.
 
ಮುರುಘಾಮಠದ ಶ್ರೀಕಾಶೀನಾಥ ಸ್ವಾಮೀಜಿ,ಶ್ರೀಕಾಡಸಿದ್ದೇಶ್ವರ ಸ್ವಾಮೀಜಿ ಶ್ರೀಒಪ್ಪತ್ತೇಶ್ವರ ಸ್ವಾಮೀಜಿ,ಶ್ರೀಗುರುಬಸವ ದೇವರು ಮಾತನಾಡಿದರು. 

ಗುಳೇದಗುಡ್ಡದಲ್ಲಿ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಬಸವರಾಜ ಶ್ರೀಗಳು ಮಾತನಾಡಿದರು.
ಗುಳೇದಗುಡ್ಡದಲ್ಲಿ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಬಸವರಾಜ ಶ್ರೀಗಳು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಮಹಾದೇವ ಜಗತಾಪ, ಸಂಪತ್ತಕುಮಾರ ರಾಠಿ, ರಂಗನಾಥ ವಾಲಿಕಾರ ಪುರಸಭೆ ಸದಸ್ಯ ಪ್ರಶಾಂತ ಜವಳಿ,ಬಸವರಾಜ ಬನ್ನಿ, ಗಣೇಶ ಶೀಲವಂತ, ಕಮಲಕಿಶೋರ ಮಾಲಪಾಣಿ, ಭಾಗ್ಯಾ ಉದ್ನೂರ, ಗೋದಾವರಿ ಬಾಪೂರಿ, ರಾಜು ಚಿತ್ತರಗಿ, ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

ಬೃಹತ್ ಮೆರವಣಿಗೆ ಅಂಗಡಿಗಳು ಬಂದ್
ಬೆಳಿಗ್ಗೆ 11 ಗಂಟೆಗೆ ತ್ರೈಂಬಕೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಸರಾಫ್ ಬಜಾರ ಕಂಠಿಪೇಟೆ.ಚೌ ಬಜಾರಪುರಸಭೆ ರಸ್ತೆ ಮೂಲಕ ಪವಾರ್ ಕ್ರಾಸ್ ಭಂಡಾರಿ ಕಾಲೇಜು ಸರ್ಕಲ್ ಮೂಲಕ ಹರದೊಳ್ಳಿಯ ಮಾರುತೇಶ್ವರ ದೇವಸ್ಥಾನದಲ್ಲಿ ಮುಕ್ತಾಯಗೊಂಡು ಬಳಿಕ ಸಾರ್ವಜನಿಕ ಸಭೆ ಮಾಡಲಾಯಿತು. ಸರ್ಕಾರದ ಹಾಗೂ ಗೋ ಹತ್ಯೆ ಮಾಡಿದವರ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಸ್ವ ಇಚ್ಛೆಯಿಂದ ಬಂದ್ ಮಾಡಿ ವ್ಯಾಪಾರ ವಹಿವಾಟುಗಳು ಬೆಳಿಗ್ಗೆಯಿಂದ ಸಾಯಂಕಾಲ 5 ಗಂಟೆಯವರೆಗೆ ಸಂಪೂರ್ಣ ಬಂದ್ ಮಾಡಿದ್ದರು. ಬಸ್ ಸಂಚಾರ ಶಾಲಾ ಕಾಲೇಜುಗಳು ಆಸ್ಪತ್ರೆಗಳು ಔಷಧಿ ಹಾಗೂ ಹಾಲಿನ ಅಂಗಡಿಗಳು ತೆರೆದಿದ್ದವು. ಟಂಟಂ ಆಟೋ ಸೇರಿದಂತೆ ಖಾಸಗಿ ವಾಹನಗಳ ಸಂಚಾರ ಎಂದಿನಂತೆ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT