ನಗರಸಭೆಯ ಪೌರಾಯುಕ್ತ ರಾಜಾರಾಮ ಪವಾರ, ನಗರಸಭೆ ಸದಸ್ಯೆ ರೇಶ್ಮಾ ಮಾರನಬಸರಿ, ಸುರೇಶ ಜಂಗ್ಲಿ ಅಮೃತ ಬಿಜ್ಜಳ, ಮೌಲಪ್ಪ ಬಂಡಿವಡ್ಡರ ಮತ್ತಿತರರು ಸ್ಥಳಕ್ಕೆ ಬಂದು ಮಹಿಳೆಯರ ಅಹವಾಲು ಆಲಿಸಿದರು. ‘ಬಯಲಿನಲ್ಲಿ ಬಹಿರ್ದೆಸೆಗೆ ಹೋಗುವುದು ಸರಿಯಲ್ಲ. ಇಲ್ಲಿ ಅಗತ್ಯ ಸಾರ್ವಜನಿಕ ಸುಲಭ ಶೌಚಾಲಯ ಹಾಗೂ ಪ್ರತಿ ಮನೆಗೂ ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.