<p><strong>ಬಾದಾಮಿ:</strong> ‘ಎರಡು ವರ್ಷದ ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ, ಶಾಸಕರ ಆಂತರಿಕ ಕಚ್ಚಾಟ ಮತ್ತು ಕೋಮು ಗಲಭೆಗಳಿಂದ ಜನ ಬೇಸತ್ತು ಹೋಗಿದ್ದಾರೆ’ ಎಂದು ಜಿಲ್ಲಾ ಘಟಕದ ಜೆಡಿಎಸ್ ಅಧ್ಯಕ್ಷ ಹನುಮಂತ ಮಾವಿನಮರದ ಆರೋಪಿಸಿದರು.</p>.<p>ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ರ್ಯಾಲಿಯ ನಂತರ ಇಲ್ಲಿನ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಕಾಂಗ್ರೆಸ್ ಪಕ್ಷದ ಆಡಳಿತದ ವಿರುದ್ಧ ಟೀಕಿಸಿದರು.</p>.<p>ಜೆಡಿಎಸ್ ಮುಖಂಡರಾದ ಎಂ.ಎಸ್.ಹಿರೇಹಾಳ, ಅಜೀಜ್ ಮುಲ್ಲಾ, ತೋಯಿಬಾ ಖಲೀಫ್, ಬಾಳು ಹುನಗುಂಡಿ, ಚಂದ್ರಕಾಂತ ಶೇಖಾ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಮಾತನಾಡಿದರು.</p>.<p>ಬಸವೇಶ್ವರ ವೃತ್ತದಿಂದ ಬಿ.ಅರ್.ಅಂಬೇಡ್ಕರ್ ವೃತ್ತದವರೆಗೆ ಮುಖ್ಯ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ಎರಡು ವರ್ಷದ ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ, ಶಾಸಕರ ಆಂತರಿಕ ಕಚ್ಚಾಟ ಮತ್ತು ಕೋಮು ಗಲಭೆಗಳಿಂದ ಜನ ಬೇಸತ್ತು ಹೋಗಿದ್ದಾರೆ’ ಎಂದು ಜಿಲ್ಲಾ ಘಟಕದ ಜೆಡಿಎಸ್ ಅಧ್ಯಕ್ಷ ಹನುಮಂತ ಮಾವಿನಮರದ ಆರೋಪಿಸಿದರು.</p>.<p>ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ರ್ಯಾಲಿಯ ನಂತರ ಇಲ್ಲಿನ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಕಾಂಗ್ರೆಸ್ ಪಕ್ಷದ ಆಡಳಿತದ ವಿರುದ್ಧ ಟೀಕಿಸಿದರು.</p>.<p>ಜೆಡಿಎಸ್ ಮುಖಂಡರಾದ ಎಂ.ಎಸ್.ಹಿರೇಹಾಳ, ಅಜೀಜ್ ಮುಲ್ಲಾ, ತೋಯಿಬಾ ಖಲೀಫ್, ಬಾಳು ಹುನಗುಂಡಿ, ಚಂದ್ರಕಾಂತ ಶೇಖಾ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಮಾತನಾಡಿದರು.</p>.<p>ಬಸವೇಶ್ವರ ವೃತ್ತದಿಂದ ಬಿ.ಅರ್.ಅಂಬೇಡ್ಕರ್ ವೃತ್ತದವರೆಗೆ ಮುಖ್ಯ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>