ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಸಂಸ್ಕೃತಿ ಮುಂದುವರಿಸಿ: ಪಿಎಸ್‌ಐ ಕೃಷ್ಣವೇಣಿ ಗುರ್ಲಹೊಸುರ

Published 9 ಆಗಸ್ಟ್ 2023, 13:47 IST
Last Updated 9 ಆಗಸ್ಟ್ 2023, 13:47 IST
ಅಕ್ಷರ ಗಾತ್ರ

ಇಳಕಲ್: ‘ಭಾರತೀಯ ಸಂಸ್ಕೃತಿಯು ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ಮರುಳಾಗದೇ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು’ ಎಂದು ನಗರ ಪೊಲೀಸ್‌ ಠಾಣೆಯ ಪಿಎಸ್‌ಐ ಕೃಷ್ಣವೇಣಿ ಗುರ್ಲಹೊಸುರ ಸಲಹೆ ನೀಡಿದರು.

ಇಲ್ಲಿಯ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಭಾರತೀಯ ಸಂಸ್ಕೃತಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕಾಲೇಜು ಕಮಿಟಿ ಚೇರಮನ್ ಬಿ.ಎಂ. ಕಬ್ಬಿಣದ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಬಿ.ಬಿ. ಸುಗ್ಗಮದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಠ್ಯೇತರ ಚಟುಚಟಿಕೆಯ ಸಂಚಾಲಕ ಎಸ್.ಎಸ್ .ಪಾಟೀಲ, ವಿದ್ಯಾರ್ಥಿ ಒಕ್ಕೂಟದ ಸಂಚಾಲಕಿ ಎಸ್.ಆರ್. ಕಲ್ಯಾಣಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಮಧು ಮಾದರ, ಶಶಿಕಲಾ ಪೂಜಾರ, ಸ್ಫೂರ್ತಿ ಗೋಟುರ, ಅನುರಾಧಾ ಜಂಬಲದಿನ್ನಿ, ಪವಿತ್ರಾ ಗೌಡರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT