<p><strong>ರಬಕವಿ ಬನಹಟ್ಟಿ</strong>: ಸಮೀಪದ ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ದರ್ಶನ ಪಾರಿಸನಾಥ ತೇರದಾಳ ಪಿಯು ದ್ವಿತೀಯ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 591 ಅಂಕಗಳನ್ನು ಪಡೆದು, ರಾಜ್ಯಕ್ಕೆ 8 ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.</p>.<p>ದರ್ಶನ ಕನ್ನಡ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ 100 ಕ್ಕೆ 100, ಇಂಗ್ಲಿಷ್:94, ಮತ್ತು ಭೌತ ವಿಜ್ಞಾನ ವಿಷಯದಲ್ಲಿ 97 ಅಂಕಗಳನ್ನು ಪಡೆದುಕೊಂಡಿದ್ದಾನೆ.</p>.<p>ರಾಯಬಾಗ ತಾಲ್ಲೂಕಿನ ಯಲ್ಪಾರಟ್ಟಿ ಗ್ರಾಮದವರಾದ ದರ್ಶನರ ತಂದೆ ತಾಯಿ ಕೃಷಿಕರು. ದರ್ಶನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಶೇ 97.76 ರಷ್ಟು ಅಂಕ ಗಳಿಸಿದ್ದ.</p>.<p>‘ಕಾಲೇಜು ಅವಧಿಯ ನಂತರ ದಿನಾಲೂ ಆರೇಳು ಗಂಟೆಗಳ ಕಾಲ ಓದುತ್ತಿದ್ದೆ, ಮುಂದೆ ವೈದ್ಯಕೀಯ ಪದವಿಯನ್ನು ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವೆ’ ಎಂದು ದರ್ಶನ ಪತ್ರಿಕೆಗೆ ತಿಳಿಸಿದರು.</p>.<p>‘ವಿದ್ಯಾರ್ಥಿಗಳ ಶ್ರಮದೊಂದಿಗೆ ಕಾಲೇಜು ಉಪನ್ಯಾಸಕರ ಸತತ ಪ್ರಯತ್ನದಿಂದ ಕಾಲೇಜಿನ ವಿದ್ಯಾರ್ಥಿ ದರ್ಶನ ರಾಜ್ಯ ಮಟ್ಟದಲ್ಲಿ 8 ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ’ ಎಂದು ಪ್ರಾಚಾರ್ಯ ಬಸವರಾಜ ಕೊಣ್ಣೂರ ತಿಳಿಸಿದರು.</p>.<p>ಆಡಳಿತಾಧಿಕಾರಿ ಶೀತಲ ಕೊಣ್ಣೂರ, ಉಪ ಪ್ರಾಚಾರ್ಯ ಕಂದಗಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ</strong>: ಸಮೀಪದ ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ದರ್ಶನ ಪಾರಿಸನಾಥ ತೇರದಾಳ ಪಿಯು ದ್ವಿತೀಯ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 591 ಅಂಕಗಳನ್ನು ಪಡೆದು, ರಾಜ್ಯಕ್ಕೆ 8 ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.</p>.<p>ದರ್ಶನ ಕನ್ನಡ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ 100 ಕ್ಕೆ 100, ಇಂಗ್ಲಿಷ್:94, ಮತ್ತು ಭೌತ ವಿಜ್ಞಾನ ವಿಷಯದಲ್ಲಿ 97 ಅಂಕಗಳನ್ನು ಪಡೆದುಕೊಂಡಿದ್ದಾನೆ.</p>.<p>ರಾಯಬಾಗ ತಾಲ್ಲೂಕಿನ ಯಲ್ಪಾರಟ್ಟಿ ಗ್ರಾಮದವರಾದ ದರ್ಶನರ ತಂದೆ ತಾಯಿ ಕೃಷಿಕರು. ದರ್ಶನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಶೇ 97.76 ರಷ್ಟು ಅಂಕ ಗಳಿಸಿದ್ದ.</p>.<p>‘ಕಾಲೇಜು ಅವಧಿಯ ನಂತರ ದಿನಾಲೂ ಆರೇಳು ಗಂಟೆಗಳ ಕಾಲ ಓದುತ್ತಿದ್ದೆ, ಮುಂದೆ ವೈದ್ಯಕೀಯ ಪದವಿಯನ್ನು ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವೆ’ ಎಂದು ದರ್ಶನ ಪತ್ರಿಕೆಗೆ ತಿಳಿಸಿದರು.</p>.<p>‘ವಿದ್ಯಾರ್ಥಿಗಳ ಶ್ರಮದೊಂದಿಗೆ ಕಾಲೇಜು ಉಪನ್ಯಾಸಕರ ಸತತ ಪ್ರಯತ್ನದಿಂದ ಕಾಲೇಜಿನ ವಿದ್ಯಾರ್ಥಿ ದರ್ಶನ ರಾಜ್ಯ ಮಟ್ಟದಲ್ಲಿ 8 ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ’ ಎಂದು ಪ್ರಾಚಾರ್ಯ ಬಸವರಾಜ ಕೊಣ್ಣೂರ ತಿಳಿಸಿದರು.</p>.<p>ಆಡಳಿತಾಧಿಕಾರಿ ಶೀತಲ ಕೊಣ್ಣೂರ, ಉಪ ಪ್ರಾಚಾರ್ಯ ಕಂದಗಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>