<p><strong>ಬಾಗಲಕೋಟೆ</strong>: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಇತ್ತೀಚೆಗೆ ನಡೆದ ಸಹನಾ ಶಿಕ್ಷಣ ಸಂಸ್ಥೆಯ ಅರುಂಧತಿ ಇಂಗ್ಲಿಷ್ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣದ ಜೊತೆಗೆ ಈ ಸಂಸ್ಥೆ ಶೈಕ್ಷಣಿಕ ವಾತಾವರಣ ವೃದ್ಧಿಸುವ ಸುಸಜ್ಜಿತ ಕಟ್ಟಡ ಹೊಂದಿರುವುದು ಆಶಾದಾಯಕ ಬೆಳವಣಿಗೆ ಎಂದರು.</p>.<p>ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಮಾತನಾಡಿ, ಶಿಸ್ತು, ಗುಣಮಟ್ಟದ ಶಿಕ್ಷಣ ನೀಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದು ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ನಿಜಲಿಂಗಪ್ಪ ಮಟ್ಟಿಹಾಳ ಮಾತನಾಡಿ, ಮಕ್ಕಳ ಭವಿಷ್ಯಕ್ಕೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಷ್ಟೇ ಅಗತ್ಯ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಲಕ್ಷ್ಮಣ ಯಂಕಂಚಿ ಅವರು, ಸಂಸ್ಥೆ ಬೆಳೆದು ಬಂದ ಯಶೋಗಾಥೆ, ಪಟ್ಟ ಶ್ರಮ, ಉದ್ದೇಶಗಳನ್ನು ವಿವರಿಸಿದರು.</p>.<p>ಹಂಪಿ ಮಾತಂಗ ಪೀಠದ ಪೂರ್ಣಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಅಧ್ಯಕ್ಷೆ ಚಂದ್ರಮ್ಮ ಯಂಕಂಚಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಉಮೇಶ ಕಾರಜೋಳ, ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ, ಜಿಲ್ಲಾಸ್ಪತ್ರೆ ಸಹಾಯಕ ಆಡಳಿತಾಧಿಕಾರಿ ಎಚ್.ವಿ. ಲಿಂಗಣ್ಣವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಇತ್ತೀಚೆಗೆ ನಡೆದ ಸಹನಾ ಶಿಕ್ಷಣ ಸಂಸ್ಥೆಯ ಅರುಂಧತಿ ಇಂಗ್ಲಿಷ್ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣದ ಜೊತೆಗೆ ಈ ಸಂಸ್ಥೆ ಶೈಕ್ಷಣಿಕ ವಾತಾವರಣ ವೃದ್ಧಿಸುವ ಸುಸಜ್ಜಿತ ಕಟ್ಟಡ ಹೊಂದಿರುವುದು ಆಶಾದಾಯಕ ಬೆಳವಣಿಗೆ ಎಂದರು.</p>.<p>ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಮಾತನಾಡಿ, ಶಿಸ್ತು, ಗುಣಮಟ್ಟದ ಶಿಕ್ಷಣ ನೀಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದು ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ನಿಜಲಿಂಗಪ್ಪ ಮಟ್ಟಿಹಾಳ ಮಾತನಾಡಿ, ಮಕ್ಕಳ ಭವಿಷ್ಯಕ್ಕೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಷ್ಟೇ ಅಗತ್ಯ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಲಕ್ಷ್ಮಣ ಯಂಕಂಚಿ ಅವರು, ಸಂಸ್ಥೆ ಬೆಳೆದು ಬಂದ ಯಶೋಗಾಥೆ, ಪಟ್ಟ ಶ್ರಮ, ಉದ್ದೇಶಗಳನ್ನು ವಿವರಿಸಿದರು.</p>.<p>ಹಂಪಿ ಮಾತಂಗ ಪೀಠದ ಪೂರ್ಣಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಅಧ್ಯಕ್ಷೆ ಚಂದ್ರಮ್ಮ ಯಂಕಂಚಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಉಮೇಶ ಕಾರಜೋಳ, ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ, ಜಿಲ್ಲಾಸ್ಪತ್ರೆ ಸಹಾಯಕ ಆಡಳಿತಾಧಿಕಾರಿ ಎಚ್.ವಿ. ಲಿಂಗಣ್ಣವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>