<p><strong>ಗುಳೇದಗುಡ್ಡ</strong>: ‘ಪಟ್ಟಣದಲ್ಲಿ ಆ.30ರಂದು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆ ಸಂದರ್ಭದಲ್ಲಿ ಅಶಾಂತಿ ಹರಡಲು ಮಾರಕಾಸ್ತ್ರ ಸಮೇತ ಬಂದಿದ್ದವರಲ್ಲಿ 4 ಜನರನ್ನು ಬಂಧಿಸಿದ್ದು ಇನ್ನುಳಿದವರನ್ನು ಶೀಘ್ರವೇ ಬಂಧಿಸಬೇಕು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.</p>.<p>ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಹಿಂದೆಂದೂ ಪಟ್ಟಣದಲ್ಲಿ ಇಂತಹ ಘಟನೆ ನಡೆದಿದ್ದಿಲ್ಲ. ಈ ಘಟನೆಯಿಂದ ಪಟ್ಟಣದ ಜನತೆ ತಲೆತಗ್ಗಿಸುವಂತಾಗಿದೆ. ಜನರಲ್ಲಿ ಆತಂಕ ಮೂಡಿದೆ. ಘಟನೆಯ ತನಿಖೆಯಾಗಬೇಕು. ಪಟ್ಟಣದ ಮುಖಂಡರೆಲ್ಲ ಪೊಲೀಸರಿಗೆ ದೂರು ಸಲ್ಲಿಸಲಿದ್ದೇವೆ’ ಎಂದರು.</p>.<p>ಮಾಜಿ ಪುರಸಭೆ ಅಧ್ಯಕ್ಷ ವೈ.ಆರ್.ಹೆಬ್ಬಳ್ಳಿ ಮಾತನಾಡಿ, ‘ಈ ಘಟನೆಯ ಹಿಂದೆ ಷಡ್ಯಂತ್ರ ಇದೆ. ಕಾಣದ ಕೈ ಕೆಲಸ ಮಾಡಿದೆ. ಪೊಲೀಸ್ ಇಲಾಖೆಯವರು ಶೀಘ್ರ ಅವರನ್ನು ಬಂಧಿಸಿ ಕಾನೂನುಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಮುಬಾರಕ ಮಂಗಳೂರ ಮಾತನಾಡಿ, ‘ಪೊಲೀಸ್ ಇಲಾಖೆಯವರು ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸದೇ ಹೋದರೆ ಪೊಲೀಸ್ ಠಾಣೆ ಎದುರಿಗೆ ಹೋರಾಟ ಮಾಡಬೇಕಾಗುತ್ತದೆ’ ಎಂದರು.</p>.<p>ಗೋಪಾಲ ಭಟ್ಟಡ, ಮೂಕಪ್ಪ ಹುನ್ನೂರ, ಫಕೀರಪ್ಪ ತಳವಾರ, ರಾಜು ಸಂಗಮ, ಯಲಗುರ್ದಪ್ಪ ಗೌಡರ, ಶ್ರೀಕಾಂತ ಗುಡ್ಡದ, ಬಸವರಾಜ ದಳವಾಯಿ, ವೈ.ಬಿ.ಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ</strong>: ‘ಪಟ್ಟಣದಲ್ಲಿ ಆ.30ರಂದು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆ ಸಂದರ್ಭದಲ್ಲಿ ಅಶಾಂತಿ ಹರಡಲು ಮಾರಕಾಸ್ತ್ರ ಸಮೇತ ಬಂದಿದ್ದವರಲ್ಲಿ 4 ಜನರನ್ನು ಬಂಧಿಸಿದ್ದು ಇನ್ನುಳಿದವರನ್ನು ಶೀಘ್ರವೇ ಬಂಧಿಸಬೇಕು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.</p>.<p>ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಹಿಂದೆಂದೂ ಪಟ್ಟಣದಲ್ಲಿ ಇಂತಹ ಘಟನೆ ನಡೆದಿದ್ದಿಲ್ಲ. ಈ ಘಟನೆಯಿಂದ ಪಟ್ಟಣದ ಜನತೆ ತಲೆತಗ್ಗಿಸುವಂತಾಗಿದೆ. ಜನರಲ್ಲಿ ಆತಂಕ ಮೂಡಿದೆ. ಘಟನೆಯ ತನಿಖೆಯಾಗಬೇಕು. ಪಟ್ಟಣದ ಮುಖಂಡರೆಲ್ಲ ಪೊಲೀಸರಿಗೆ ದೂರು ಸಲ್ಲಿಸಲಿದ್ದೇವೆ’ ಎಂದರು.</p>.<p>ಮಾಜಿ ಪುರಸಭೆ ಅಧ್ಯಕ್ಷ ವೈ.ಆರ್.ಹೆಬ್ಬಳ್ಳಿ ಮಾತನಾಡಿ, ‘ಈ ಘಟನೆಯ ಹಿಂದೆ ಷಡ್ಯಂತ್ರ ಇದೆ. ಕಾಣದ ಕೈ ಕೆಲಸ ಮಾಡಿದೆ. ಪೊಲೀಸ್ ಇಲಾಖೆಯವರು ಶೀಘ್ರ ಅವರನ್ನು ಬಂಧಿಸಿ ಕಾನೂನುಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಮುಬಾರಕ ಮಂಗಳೂರ ಮಾತನಾಡಿ, ‘ಪೊಲೀಸ್ ಇಲಾಖೆಯವರು ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸದೇ ಹೋದರೆ ಪೊಲೀಸ್ ಠಾಣೆ ಎದುರಿಗೆ ಹೋರಾಟ ಮಾಡಬೇಕಾಗುತ್ತದೆ’ ಎಂದರು.</p>.<p>ಗೋಪಾಲ ಭಟ್ಟಡ, ಮೂಕಪ್ಪ ಹುನ್ನೂರ, ಫಕೀರಪ್ಪ ತಳವಾರ, ರಾಜು ಸಂಗಮ, ಯಲಗುರ್ದಪ್ಪ ಗೌಡರ, ಶ್ರೀಕಾಂತ ಗುಡ್ಡದ, ಬಸವರಾಜ ದಳವಾಯಿ, ವೈ.ಬಿ.ಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>