<p><strong>ರಬಕವಿ ಬನಹಟ್ಟಿ</strong>: ಅಕ್ಟೋಬರ್ 22ರಂದು ನಡೆಯುವ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವಕ್ಕೆ ಸೋಮವಾರ ಸಂಜೆ ಉಚ್ಛಾಯಿ ರಥೋತ್ಸವ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.</p>.<p>ಈ ಸಂದರ್ಭದಲ್ಲಿ ಸಮಸ್ತ ಸೋಮವಾರಪೇಟೆಯ ದೈವ ಮಂಡಳಿಯ ಅಧ್ಯಕ್ಷ ಮಲ್ಲಿಕಾರ್ಜುನ ತುಂಗಳ ಮಾತನಾಡಿ, ‘22ರಂದು ಮಲ್ಲಿಕಾರ್ಜುನ ದೇವರ ಜಾತ್ರೆ ಅಂಗವಾಗಿ ಬೆಳಿಗ್ಗೆ ದೇವಸ್ಥಾನದಲ್ಲಿಅಭಿಷೇಕ ಮತ್ತು ವಿಶೇಷ ಪೂಜೆ ನಡೆಯಲಿದೆ. ನೂರಾರು ಭಕ್ತರು ದೀರ್ಘದಂಡ ನಮಸ್ಕಾರದ ಮೂಲಕ ಹರಕೆ ತೀರಿಸಲಿದ್ದಾರೆ’ ಎಂದರು.</p>.<p>‘ಸಂಜೆ 7 ಗಂಟೆಗೆ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಕರಡಿ ಮತ್ತು ಸಂಬಾಳ ವಾದನಗಳ ಪ್ರದರ್ಶನ ನಡೆಯಲಿದೆ. ರಾತ್ರಿ 8ಕ್ಕೆ ಮಲ್ಲಿಕಾರ್ಜುನ ದೇವರ ರಥೋತ್ಸವ ಜರುಗಲಿದೆ. ಹಳೆಯ ಗ್ರಂಥಾಲಯದಿಂದ ಆರಂಭಗೊಳ್ಳುವ ರಥೋತ್ಸವವು ಸೋಮವಾರಪೇಟೆಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜುಂಜಪ್ಪನವರ ಮನೆಯವರೆಗೆ ಸಾಗಲಿದೆ’ ಎಂದು ಹೇಳಿದರು.</p>.<p>‘23ರಂದು ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. 24ರಂದು ಕಳಸೋತ್ಸವದೊಂದಿಗೆ ಜಾತ್ರಾ ಮಹೋತ್ಸವವು ಸಂಪನ್ನಗೊಳ್ಳಲಿದೆ. 20ಕ್ಕೂ ಹೆಚ್ಚು ಸಮುದಾಯಗಳು ಒಗ್ಗಟ್ಟಾಗಿ ಜಾತ್ರೆ ನಡೆಸುತ್ತಿರುವುದು ವಿಶೇಷ’ ಎಂದು ತಿಳಿಸಿದರು.</p>.<p>ಚರಂತಯ್ಯ ಹಿರೇಮಠ, ರಾಚಯ್ಯ ಮಠಪತಿ, ಚನಬಸಯ್ಯ ಮಠಪತಿ, ಶಾಸಕ ಸಿದ್ದು ಸವದಿ, ಸಿದ್ದನಗೌಡ ಪಾಟೀಲ, ಮಹಾಶಾಂತ ಶೆಟ್ಟಿ, ಪ್ರಶಾಂತ ಕೊಳಕಿ, ಕಿರಣ ಆಳಗಿ, ಮಲ್ಲಿಕಾರ್ಜುನ ಬಾವಲತ್ತಿ, ಬ್ರಿಜ್ಮೋಮನ ಡಾಗಾ, ಚನ್ನಪ್ಪ ಗುಣಕಿ, ಚಿದಾನಂದ ಹೊರಟ್ಟಿ, ಗಂಗಪ್ಪ ಹಾದಿಮನಿ, ಮಲ್ಲಪ್ಪ ಜನವಾಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ</strong>: ಅಕ್ಟೋಬರ್ 22ರಂದು ನಡೆಯುವ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವಕ್ಕೆ ಸೋಮವಾರ ಸಂಜೆ ಉಚ್ಛಾಯಿ ರಥೋತ್ಸವ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.</p>.<p>ಈ ಸಂದರ್ಭದಲ್ಲಿ ಸಮಸ್ತ ಸೋಮವಾರಪೇಟೆಯ ದೈವ ಮಂಡಳಿಯ ಅಧ್ಯಕ್ಷ ಮಲ್ಲಿಕಾರ್ಜುನ ತುಂಗಳ ಮಾತನಾಡಿ, ‘22ರಂದು ಮಲ್ಲಿಕಾರ್ಜುನ ದೇವರ ಜಾತ್ರೆ ಅಂಗವಾಗಿ ಬೆಳಿಗ್ಗೆ ದೇವಸ್ಥಾನದಲ್ಲಿಅಭಿಷೇಕ ಮತ್ತು ವಿಶೇಷ ಪೂಜೆ ನಡೆಯಲಿದೆ. ನೂರಾರು ಭಕ್ತರು ದೀರ್ಘದಂಡ ನಮಸ್ಕಾರದ ಮೂಲಕ ಹರಕೆ ತೀರಿಸಲಿದ್ದಾರೆ’ ಎಂದರು.</p>.<p>‘ಸಂಜೆ 7 ಗಂಟೆಗೆ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಕರಡಿ ಮತ್ತು ಸಂಬಾಳ ವಾದನಗಳ ಪ್ರದರ್ಶನ ನಡೆಯಲಿದೆ. ರಾತ್ರಿ 8ಕ್ಕೆ ಮಲ್ಲಿಕಾರ್ಜುನ ದೇವರ ರಥೋತ್ಸವ ಜರುಗಲಿದೆ. ಹಳೆಯ ಗ್ರಂಥಾಲಯದಿಂದ ಆರಂಭಗೊಳ್ಳುವ ರಥೋತ್ಸವವು ಸೋಮವಾರಪೇಟೆಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜುಂಜಪ್ಪನವರ ಮನೆಯವರೆಗೆ ಸಾಗಲಿದೆ’ ಎಂದು ಹೇಳಿದರು.</p>.<p>‘23ರಂದು ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. 24ರಂದು ಕಳಸೋತ್ಸವದೊಂದಿಗೆ ಜಾತ್ರಾ ಮಹೋತ್ಸವವು ಸಂಪನ್ನಗೊಳ್ಳಲಿದೆ. 20ಕ್ಕೂ ಹೆಚ್ಚು ಸಮುದಾಯಗಳು ಒಗ್ಗಟ್ಟಾಗಿ ಜಾತ್ರೆ ನಡೆಸುತ್ತಿರುವುದು ವಿಶೇಷ’ ಎಂದು ತಿಳಿಸಿದರು.</p>.<p>ಚರಂತಯ್ಯ ಹಿರೇಮಠ, ರಾಚಯ್ಯ ಮಠಪತಿ, ಚನಬಸಯ್ಯ ಮಠಪತಿ, ಶಾಸಕ ಸಿದ್ದು ಸವದಿ, ಸಿದ್ದನಗೌಡ ಪಾಟೀಲ, ಮಹಾಶಾಂತ ಶೆಟ್ಟಿ, ಪ್ರಶಾಂತ ಕೊಳಕಿ, ಕಿರಣ ಆಳಗಿ, ಮಲ್ಲಿಕಾರ್ಜುನ ಬಾವಲತ್ತಿ, ಬ್ರಿಜ್ಮೋಮನ ಡಾಗಾ, ಚನ್ನಪ್ಪ ಗುಣಕಿ, ಚಿದಾನಂದ ಹೊರಟ್ಟಿ, ಗಂಗಪ್ಪ ಹಾದಿಮನಿ, ಮಲ್ಲಪ್ಪ ಜನವಾಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>