<p>ರಬಕವಿ ಬನಹಟ್ಟಿ: ನಮ್ಮಿಂದ ದೂರ ಆಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಪ್ರತಿಯೊಬ್ಬರು ಪ್ರೋತ್ಸಾಹಿಸಬೇಕು. ಇಂದಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿವೆ. ಗ್ರಾಮೀಣ ಪ್ರದೇಶಗಳು ಸಂಸ್ಕೃತಿ ಪ್ರತೀಕವಾಗಿವೆ ಎಂದು ಹನುಮಾನ ದೇವಸ್ಥಾನ ಟ್ರಸ್ಟ್ ಸಮಿತಿಯ ಅಧ್ಯಕ್ಷ ಎಂ.ಆರ್.ವಾಲಿ ತಿಳಿಸಿದರು.</p>.<p>ಗುರುವಾರ ಸಮೀಪದ ನಾವಲಗಿ ಗ್ರಾಮದಲ್ಲಿ ಮಾರುತೇಶ್ವರ ಜಯಂತ್ಯುತ್ಸವದ ಅಂಗವಾಗಿ ಹಮ್ಮಿ ಕೊಂಡ ಹಾಲೋಕಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಗ್ರಾಮದ ಮಧ್ಯ ಭಾಗದಲ್ಲಿರುವ ಹನುಮಂತ ದೇವಸ್ಥಾನದ ಮುಂಭಾಗದಲ್ಲಿ 60 ಅಡಿ ಎತ್ತರದ ಬೃಹತ್ ಕಂಬವನ್ನು ಏರುವಲ್ಲಿ ಯುವಕರ ಸಾಹಸ ಗಮನ ಸೆಳೆಯಿತು. ನಾವಲಗಿ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಜನರು ಹಲೋಕಳಿಯಲ್ಲಿ ಭಾಗವಹಿಸಿದ್ದರು.</p>.<p>ಹಾಲೋಕಳಿಯ ಕಾರ್ಯಕ್ರಮದ ನಂತರ ಕರಡಿ, ಸಂಬಾಳ, ಖಣಿ ಮತ್ತು ಶಹನಾಯಿ ವಾದನದ ಪ್ರದರ್ಶನ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.</p>.<p>ನಂತರ ಶ್ರೀಕೃಷ್ಣ ಪಾರಿಜಾತ ಬಯಲಾಟ ಪ್ರದರ್ಶನ ನಡೆಯಿತು.</p>.<p>ಶ್ರೀಶೈಲ ಪಟ್ಟಣಶೆಟ್ಟಿ, ಸುಭಾಸ ಕಂಪು, ಹಣಮಂತ ಕಾಂತಿ, ಸಂಗಣ್ಣ ಹಳ್ಳಿ, ಗುರು ಮರಡಿಮಠ, ಕಾಡಯ್ಯ ಕಾಡದೇವರ, ದಾನಪ್ಪ ಆಸಂಗಿ, ಆನಂದ ಕಂಪು, ಹಣಮಂತ ಮಗದುಮ್, ಮಹೇಶ ಚಿಂಚಖಂಡಿ ಬಸವರಾಜ ಗಣಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-19-1745320217</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ನಮ್ಮಿಂದ ದೂರ ಆಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಪ್ರತಿಯೊಬ್ಬರು ಪ್ರೋತ್ಸಾಹಿಸಬೇಕು. ಇಂದಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿವೆ. ಗ್ರಾಮೀಣ ಪ್ರದೇಶಗಳು ಸಂಸ್ಕೃತಿ ಪ್ರತೀಕವಾಗಿವೆ ಎಂದು ಹನುಮಾನ ದೇವಸ್ಥಾನ ಟ್ರಸ್ಟ್ ಸಮಿತಿಯ ಅಧ್ಯಕ್ಷ ಎಂ.ಆರ್.ವಾಲಿ ತಿಳಿಸಿದರು.</p>.<p>ಗುರುವಾರ ಸಮೀಪದ ನಾವಲಗಿ ಗ್ರಾಮದಲ್ಲಿ ಮಾರುತೇಶ್ವರ ಜಯಂತ್ಯುತ್ಸವದ ಅಂಗವಾಗಿ ಹಮ್ಮಿ ಕೊಂಡ ಹಾಲೋಕಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಗ್ರಾಮದ ಮಧ್ಯ ಭಾಗದಲ್ಲಿರುವ ಹನುಮಂತ ದೇವಸ್ಥಾನದ ಮುಂಭಾಗದಲ್ಲಿ 60 ಅಡಿ ಎತ್ತರದ ಬೃಹತ್ ಕಂಬವನ್ನು ಏರುವಲ್ಲಿ ಯುವಕರ ಸಾಹಸ ಗಮನ ಸೆಳೆಯಿತು. ನಾವಲಗಿ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಜನರು ಹಲೋಕಳಿಯಲ್ಲಿ ಭಾಗವಹಿಸಿದ್ದರು.</p>.<p>ಹಾಲೋಕಳಿಯ ಕಾರ್ಯಕ್ರಮದ ನಂತರ ಕರಡಿ, ಸಂಬಾಳ, ಖಣಿ ಮತ್ತು ಶಹನಾಯಿ ವಾದನದ ಪ್ರದರ್ಶನ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.</p>.<p>ನಂತರ ಶ್ರೀಕೃಷ್ಣ ಪಾರಿಜಾತ ಬಯಲಾಟ ಪ್ರದರ್ಶನ ನಡೆಯಿತು.</p>.<p>ಶ್ರೀಶೈಲ ಪಟ್ಟಣಶೆಟ್ಟಿ, ಸುಭಾಸ ಕಂಪು, ಹಣಮಂತ ಕಾಂತಿ, ಸಂಗಣ್ಣ ಹಳ್ಳಿ, ಗುರು ಮರಡಿಮಠ, ಕಾಡಯ್ಯ ಕಾಡದೇವರ, ದಾನಪ್ಪ ಆಸಂಗಿ, ಆನಂದ ಕಂಪು, ಹಣಮಂತ ಮಗದುಮ್, ಮಹೇಶ ಚಿಂಚಖಂಡಿ ಬಸವರಾಜ ಗಣಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-19-1745320217</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>