<p><strong>ರಬಕವಿ ಬನಹಟ್ಟಿ:</strong> ‘ಮತಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೇಡ’ ಎಂದು ಶಾಸಕ ಸಿದ್ದು ಸವದಿ ಹೇಳಿದರು.</p>.<p>ಅವರು ಬುಧವಾರ ಸಮೀಪದ ಕೃಷ್ಣಾ ನದಿಗೆ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.</p>.<p>‘ಕೃಷ್ಣಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಆರಂಭವಾಗಿದ್ದು, ಇನ್ನೊಂದು ವಾರದಲ್ಲಿ ನದಿಯ ಮಧ್ಯದಲ್ಲಿರುವ ಪಿಲ್ಲರ್ ಗಳನ್ನು ಅಳವಡಿಸುವ ಕಾರ್ಯ ನಡೆಯಲಿದೆ. ಮುಂದಿನ ವರ್ಷದ ಮಾರ್ಚ್ ತಿಂಗಳೊಳಗಾಗಿ ಸೇತುವೆ ಕಾಮಗಾರಿ ಮುಕ್ತಾಯಗೊಳಿಸುವ ಭರವಸೆಯನ್ನು ಇಲ್ಲಿನ ಎಂಜಿನಿಯರ್, ಯೋಜನೆಯ ಅಧಿಕಾರಿಗಳು ನೀಡಿದ್ದಾರೆ’ ಎಂದು ತಿಳಿಸಿದರು.</p>.<p>‘2017ರಲ್ಲಿ ಸೇತುವೆ ಕಾಮಗಾರಿ ಭೂಮಿಪೂಜೆ ಮಾತ್ರ ನಡೆಯಿತು. ಈಗ ₹55 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಈ ಸೇತುವೆ ನಿರ್ಮಾಣ ಕಾಮಗಾರಿಗೆ ಮೊದಲು ₹ 20 ಕೋಟಿ ಮತ್ತು ಈಗ ₹10 ಕೋಟಿಯಷ್ಟು ಹಣವನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ. ಸೇತುವೆ ನಿರ್ಮಾಣ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ₹10ರಷ್ಟು ಕೆಲಸ ಮಾಡಿಲ್ಲ. ಸೇತುವೆ ಕಾಮಗಾರಿಯನ್ನು ವಿಳಂಬ ಮಾಡುವುದರಿಂದ ನಮಗೆ ಯಾವುದೇ ಲಾಭವಿಲ್ಲ’ ಎಂದು ತಿಳಿಸಿದರು.</p>.<p>‘ಸೇತುವೆ ನಿರ್ಮಾಣ ಕಾಮಗಾರಿಗಾಗಿ ವಿಧಾನ ಸಭೆಯಲ್ಲಿ ಚರ್ಚಿಸಿದ್ದೇನೆ, ಸಂಬಂಧಪಟ್ಟ ಸಚಿವರ ಮತ್ತು ಅಧಿಕಾರಿಗಳ ಕಚೇರಿಗಳಿಗೆ ತೆರಳಿ ಭೇಟಿಯಾಗಿದ್ದೇನೆ. ಸ್ಥಳೀಯ ಸೇತುವೆ ಕಾಮಗಾರಿ ಯೋಜನೆ ವ್ಯವಸ್ಥಾಪಕ ವೇಣುಗೋಪಾಲ ಜೊತೆಗೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ’ ಎಂದು ತಿಳಿಸಿದರು.</p>.<p>‘ಪಿಲ್ಲರ್ ಅಳವಡಿಕೆ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ದಾವಣಗೆರೆಯಿಂದ 20ಕ್ಕೂ ಹೆಚ್ಚು ಕುಶಲ ಕಾರ್ಮಿಕರನ್ನು ಕರೆದುಕೊಂಡು ಬರಲು ಚರ್ಚಿಸಲಾಗಿದೆ’ ಎಂದು ಸೇತುವೆ ಕಾಮಗಾರಿ ಪ್ರಭಾರ ಸಹಾಯಕ ಎಂಜಿನಿಯರ್ ರಿಜವಾನ್ ಅಹ್ಮದ್ ತಿಳಿಸಿದರು.</p>.<p>ರಬಕವಿ ನಗರದ ಮುಖಂಡರಾದ ಸಂಜಯ ತೆಗ್ಗಿ, ಧರೆಪ್ಪ ಉಳ್ಳಾಗಡ್ಡಿ, ಬಾಬಾಗೌಡ ಪಾಟೀಲ, ಮಹಾದೇವ ದುಪದಾಳ, ಶ್ರೀಶೈಲ ದಲಾಲ, ಶ್ರೀಶೈಲ ಬೀಳಗಿ, ಸುರೇಶ ಅಕ್ಕಿವಾಟ, ಈಶ್ವರ ಕಾಡದೇವರ, ಅಶೋಕ ರಾವಳ, ಪ್ರಭು ಪೂಜಾರಿ, ಪ್ರೊಜೆಕ್ಟ್ ವ್ಯವಸ್ಥಾಪಕ ವೇಣುಗೋಪಾಲ, ಎಂಜಿನಿಯರ್ ಸುನೀಲ ರೊಠೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-19-537464023</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ‘ಮತಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೇಡ’ ಎಂದು ಶಾಸಕ ಸಿದ್ದು ಸವದಿ ಹೇಳಿದರು.</p>.<p>ಅವರು ಬುಧವಾರ ಸಮೀಪದ ಕೃಷ್ಣಾ ನದಿಗೆ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.</p>.<p>‘ಕೃಷ್ಣಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಆರಂಭವಾಗಿದ್ದು, ಇನ್ನೊಂದು ವಾರದಲ್ಲಿ ನದಿಯ ಮಧ್ಯದಲ್ಲಿರುವ ಪಿಲ್ಲರ್ ಗಳನ್ನು ಅಳವಡಿಸುವ ಕಾರ್ಯ ನಡೆಯಲಿದೆ. ಮುಂದಿನ ವರ್ಷದ ಮಾರ್ಚ್ ತಿಂಗಳೊಳಗಾಗಿ ಸೇತುವೆ ಕಾಮಗಾರಿ ಮುಕ್ತಾಯಗೊಳಿಸುವ ಭರವಸೆಯನ್ನು ಇಲ್ಲಿನ ಎಂಜಿನಿಯರ್, ಯೋಜನೆಯ ಅಧಿಕಾರಿಗಳು ನೀಡಿದ್ದಾರೆ’ ಎಂದು ತಿಳಿಸಿದರು.</p>.<p>‘2017ರಲ್ಲಿ ಸೇತುವೆ ಕಾಮಗಾರಿ ಭೂಮಿಪೂಜೆ ಮಾತ್ರ ನಡೆಯಿತು. ಈಗ ₹55 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಈ ಸೇತುವೆ ನಿರ್ಮಾಣ ಕಾಮಗಾರಿಗೆ ಮೊದಲು ₹ 20 ಕೋಟಿ ಮತ್ತು ಈಗ ₹10 ಕೋಟಿಯಷ್ಟು ಹಣವನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ. ಸೇತುವೆ ನಿರ್ಮಾಣ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ₹10ರಷ್ಟು ಕೆಲಸ ಮಾಡಿಲ್ಲ. ಸೇತುವೆ ಕಾಮಗಾರಿಯನ್ನು ವಿಳಂಬ ಮಾಡುವುದರಿಂದ ನಮಗೆ ಯಾವುದೇ ಲಾಭವಿಲ್ಲ’ ಎಂದು ತಿಳಿಸಿದರು.</p>.<p>‘ಸೇತುವೆ ನಿರ್ಮಾಣ ಕಾಮಗಾರಿಗಾಗಿ ವಿಧಾನ ಸಭೆಯಲ್ಲಿ ಚರ್ಚಿಸಿದ್ದೇನೆ, ಸಂಬಂಧಪಟ್ಟ ಸಚಿವರ ಮತ್ತು ಅಧಿಕಾರಿಗಳ ಕಚೇರಿಗಳಿಗೆ ತೆರಳಿ ಭೇಟಿಯಾಗಿದ್ದೇನೆ. ಸ್ಥಳೀಯ ಸೇತುವೆ ಕಾಮಗಾರಿ ಯೋಜನೆ ವ್ಯವಸ್ಥಾಪಕ ವೇಣುಗೋಪಾಲ ಜೊತೆಗೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ’ ಎಂದು ತಿಳಿಸಿದರು.</p>.<p>‘ಪಿಲ್ಲರ್ ಅಳವಡಿಕೆ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ದಾವಣಗೆರೆಯಿಂದ 20ಕ್ಕೂ ಹೆಚ್ಚು ಕುಶಲ ಕಾರ್ಮಿಕರನ್ನು ಕರೆದುಕೊಂಡು ಬರಲು ಚರ್ಚಿಸಲಾಗಿದೆ’ ಎಂದು ಸೇತುವೆ ಕಾಮಗಾರಿ ಪ್ರಭಾರ ಸಹಾಯಕ ಎಂಜಿನಿಯರ್ ರಿಜವಾನ್ ಅಹ್ಮದ್ ತಿಳಿಸಿದರು.</p>.<p>ರಬಕವಿ ನಗರದ ಮುಖಂಡರಾದ ಸಂಜಯ ತೆಗ್ಗಿ, ಧರೆಪ್ಪ ಉಳ್ಳಾಗಡ್ಡಿ, ಬಾಬಾಗೌಡ ಪಾಟೀಲ, ಮಹಾದೇವ ದುಪದಾಳ, ಶ್ರೀಶೈಲ ದಲಾಲ, ಶ್ರೀಶೈಲ ಬೀಳಗಿ, ಸುರೇಶ ಅಕ್ಕಿವಾಟ, ಈಶ್ವರ ಕಾಡದೇವರ, ಅಶೋಕ ರಾವಳ, ಪ್ರಭು ಪೂಜಾರಿ, ಪ್ರೊಜೆಕ್ಟ್ ವ್ಯವಸ್ಥಾಪಕ ವೇಣುಗೋಪಾಲ, ಎಂಜಿನಿಯರ್ ಸುನೀಲ ರೊಠೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-19-537464023</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>