<p><strong>ರಬಕವಿ ಬನಹಟ್ಟಿ:</strong> ನಗರದಲ್ಲಿ ಭಾನುವಾರ ಭಾರತ ಹುಣ್ಣಿಮೆಯ ದಿನದಂದು ಹಳೇ ನೀರಿನ ಟ್ಯಾಂಕ್ ಹತ್ತಿರದ ಬನಶಂಕರಿ ದೇವಿಯ ಜಾತ್ರೆ ಅಂಗವಾಗಿ ದೇವಿಯ ಮೂರ್ತಿ ಮೆರವಣಿಗೆ, ಪಲ್ಲಕ್ಕಿ ಉತ್ಸವ ಮತ್ತು ಕಳಸೋತ್ಸವ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ಅಭಿಷೇಕ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ನಂತರ ಚಂಡಿಕಾ ಹೋಮ ನೆರವೇರಿಸಲಾಯಿತು.</p>.<p>ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನವನ್ನು ತಲುಪಿತು. ನೂರಾರು ಮಹಿಳೆಯರು ಆರತಿ ಮತ್ತು ಕುಂಭವನ್ನು ಹೊತ್ತುಕೊಂಡು ಮೆರವಣಿಗೆಯಲ್ಲಿ ಸಾಗಿದರು.</p>.<p>ದೇವಸ್ಥಾದಲ್ಲಿ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ದೇವಸ್ಥಾನ ಟ್ರಸ್ಟ್ ಸಮಿತಿಯ ಅಧ್ಯಕ್ಷ ಶ್ರೀಶೈಲ ಗೊಂಬಿ, ರಾಜು ಶೀಲವಂತ, ಮಹಾಂತೇಶ ಕೊಕಟನೂರ, ಬಸವರಾಜ ನುಚ್ಚಿ, ಶ್ರೀಶೈಲ ಅಥಣಿ, ಕಾಡಪ್ಪ ಪಾಟೀಲ, ಈರಪ್ಪ ಮನವಾಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ನಗರದಲ್ಲಿ ಭಾನುವಾರ ಭಾರತ ಹುಣ್ಣಿಮೆಯ ದಿನದಂದು ಹಳೇ ನೀರಿನ ಟ್ಯಾಂಕ್ ಹತ್ತಿರದ ಬನಶಂಕರಿ ದೇವಿಯ ಜಾತ್ರೆ ಅಂಗವಾಗಿ ದೇವಿಯ ಮೂರ್ತಿ ಮೆರವಣಿಗೆ, ಪಲ್ಲಕ್ಕಿ ಉತ್ಸವ ಮತ್ತು ಕಳಸೋತ್ಸವ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ಅಭಿಷೇಕ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ನಂತರ ಚಂಡಿಕಾ ಹೋಮ ನೆರವೇರಿಸಲಾಯಿತು.</p>.<p>ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನವನ್ನು ತಲುಪಿತು. ನೂರಾರು ಮಹಿಳೆಯರು ಆರತಿ ಮತ್ತು ಕುಂಭವನ್ನು ಹೊತ್ತುಕೊಂಡು ಮೆರವಣಿಗೆಯಲ್ಲಿ ಸಾಗಿದರು.</p>.<p>ದೇವಸ್ಥಾದಲ್ಲಿ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ದೇವಸ್ಥಾನ ಟ್ರಸ್ಟ್ ಸಮಿತಿಯ ಅಧ್ಯಕ್ಷ ಶ್ರೀಶೈಲ ಗೊಂಬಿ, ರಾಜು ಶೀಲವಂತ, ಮಹಾಂತೇಶ ಕೊಕಟನೂರ, ಬಸವರಾಜ ನುಚ್ಚಿ, ಶ್ರೀಶೈಲ ಅಥಣಿ, ಕಾಡಪ್ಪ ಪಾಟೀಲ, ಈರಪ್ಪ ಮನವಾಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>