<p>ರಬಕವಿ ಬನಹಟ್ಟಿ: ತಾಲ್ಲೂಕಿನ ನಾವಲಗಿ ಗ್ರಾಮದಲ್ಲಿ ನಾವಲಗಿ– ಮುಧೋಳ ರಸ್ತೆ ಮಾರ್ಗದಲ್ಲಿ ದ್ವಿಚಕ್ರ ವಾಹನದ ಮೇಲೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಗಿನ ಜಾವ 1.30 ಗಂಟೆಗೆ ಬಂಧಿಸಿದ್ದಾರೆ.</p>.<p>ಗ್ರಾಮದ ಹನಮಂತ ಬಿಸನಾಳ ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅದೇ ರೀತಿಯಾಗಿ ಸುನೀಲ ಕದಂ, ವಾಹನ ಮಾಲೀಕರು, ಮದ್ಯ ಮಾರಾಟ ಮಾಡಿದ ಅಬಕಾರಿ ಸನ್ನದುದಾರರು, ಬಸವರಾಜ: ಆರೋಪಿ 1 ಕಾರಿನಲ್ಲಿ ಮದ್ಯ ಸರಬರಾಜು ಮಾಡಿದವರ ಮೇಲೆ ಜಮಖಂಡಿ ವಲಯದ ಅಬಕಾರಿ ನಿರೀಕ್ಷಕಿ ಗೀತಾ ತೆಗ್ಯಾಳ ಪ್ರಕರಣ ದಾಖಲಿಸಿರುತ್ತಾರೆ.</p>.<p>ಆರೋಪಿಯಿಂದ 103.680 ಲೀಟರ್ ಮದ್ಯ, ಒಂದು ಹೀರೋ ಹೊಂಡಾ ದ್ವಿಚಕ್ರ ವಾಹನ, ಒಂದು ಮೊಬೈಲ್ ಜಪ್ತು ಮಾಡಿಕೊಂಡಿದ್ದು ಅವುಗಳ ಅಂದಾಜು ಮೊತ್ತ ₹ 1,26, 000 ಆಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕಚೇರಿ ಸಿಬ್ಬಂದಿಗಳಾದ ಆನಂದ ಬಾಗಿ, ಮೌನೇಶ ಬಡಿಗೇರ, ಹನಮಂತ ಹಸರೆಡ್ಡಿ, ವಾಹನ ಚಾಲಕ ಕಿರಣಕುಮಾರ ಒಡೆಯರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-19-250377794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ತಾಲ್ಲೂಕಿನ ನಾವಲಗಿ ಗ್ರಾಮದಲ್ಲಿ ನಾವಲಗಿ– ಮುಧೋಳ ರಸ್ತೆ ಮಾರ್ಗದಲ್ಲಿ ದ್ವಿಚಕ್ರ ವಾಹನದ ಮೇಲೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಗಿನ ಜಾವ 1.30 ಗಂಟೆಗೆ ಬಂಧಿಸಿದ್ದಾರೆ.</p>.<p>ಗ್ರಾಮದ ಹನಮಂತ ಬಿಸನಾಳ ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅದೇ ರೀತಿಯಾಗಿ ಸುನೀಲ ಕದಂ, ವಾಹನ ಮಾಲೀಕರು, ಮದ್ಯ ಮಾರಾಟ ಮಾಡಿದ ಅಬಕಾರಿ ಸನ್ನದುದಾರರು, ಬಸವರಾಜ: ಆರೋಪಿ 1 ಕಾರಿನಲ್ಲಿ ಮದ್ಯ ಸರಬರಾಜು ಮಾಡಿದವರ ಮೇಲೆ ಜಮಖಂಡಿ ವಲಯದ ಅಬಕಾರಿ ನಿರೀಕ್ಷಕಿ ಗೀತಾ ತೆಗ್ಯಾಳ ಪ್ರಕರಣ ದಾಖಲಿಸಿರುತ್ತಾರೆ.</p>.<p>ಆರೋಪಿಯಿಂದ 103.680 ಲೀಟರ್ ಮದ್ಯ, ಒಂದು ಹೀರೋ ಹೊಂಡಾ ದ್ವಿಚಕ್ರ ವಾಹನ, ಒಂದು ಮೊಬೈಲ್ ಜಪ್ತು ಮಾಡಿಕೊಂಡಿದ್ದು ಅವುಗಳ ಅಂದಾಜು ಮೊತ್ತ ₹ 1,26, 000 ಆಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕಚೇರಿ ಸಿಬ್ಬಂದಿಗಳಾದ ಆನಂದ ಬಾಗಿ, ಮೌನೇಶ ಬಡಿಗೇರ, ಹನಮಂತ ಹಸರೆಡ್ಡಿ, ವಾಹನ ಚಾಲಕ ಕಿರಣಕುಮಾರ ಒಡೆಯರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-19-250377794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>