<p><strong>ರಬಕವಿ ಬನಹಟ್ಟಿ:</strong> ‘ನಗರಸಭೆಯ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಾರ್ಯಾಲಯಕ್ಕೆ ಆಗಮಿಸುವುದರ ಜೊತೆಗೆ ನಗರಸಭೆಯ ಸದಸ್ಯರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ರಬಕವಿ ಬನಹಟ್ಟಿ ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ ಹೇಳಿದರು.</p>.<p>ರಬಕವಿ ಬನಹಟ್ಟಿ ನಗರಸಭೆಯ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.</p>.<p> ನಗರಸಭೆಯ ಪೌರಾಯುಕ್ತ ರಮೇಶ ಜಾಧವ ಮಾತನಾಡಿ, ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p>‘ನಗರಸಭೆಯ ವ್ಯಾಪ್ತಿಯಲ್ಲಿ 150 ಕ್ಕೂ ಹೆಚ್ಚು ಉದ್ಯಾನಗಳಿವೆ. ಇವುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ಅತಿಕ್ರಮಣ ಹೊಂದಿದ ಉದ್ಯಾನಗಳ ಕುರಿತು ಪರಿಶೀಲಿಸಬೇಕು. ಅವುಗಳನ್ನು ಮರಳಿ ನಗರಸಭೆ ಪಡೆದುಕೊಳ್ಳಬೇಕು’ ಎಂದು ನಗರಸಭೆಯ ಸದಸ್ಯ ಯಲ್ಲಪ್ಪ ಕಟಗಿ ತಿಳಿಸಿದರು.</p>.<p>ನಗರದಲ್ಲಿ ಬೀದಿ ನಾಯಿಗಳಿಂದ ಜನರಿಗೆ ತೊಂದರೆಯಾಗಿದೆ. ಅವುಗಳ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.</p>.<p>ಈಗಾಗಲೇ ಬೀದಿ ನಾಯಿಗಳ ಕಾಟ ತಪ್ಪಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಹಂತ ಹಂತವಾಗಿ ತೆಗೆದುಕೊಳ್ಳಲಾಗುತ್ತಿದೆ. ಅವುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಒಂದು ಬೀದಿ ನಾಯಿಯ ಸಂತಾನಹರಣಕ್ಕೆ ₹1,600 ದಷ್ಟು ಖರ್ಚಾಗುತ್ತದೆ. ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಆನ್ಲೈನ್ ಮೂಲಕ ಜನರು ಅರ್ಜಿಗಳನ್ನು ಸಲ್ಲಿಸಬಹುದು// </p>.<p>2025-26ನೇ ಸಾಲಿನಲ್ಲಿ ಎಸ್ಎಫ್ಸಿ ಯೋಜನೆ ಅಡಿ ಶೇ 24.10, ಶೇ 7.25// ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ 101 ಅರ್ಜಿಗಳು ಬಂದಿವೆ. ಇದರಲ್ಲಿ 59 ಅರ್ಜಿಗಳು ಅರ್ಹವಾಗಿವೆ. ಆದರೆ ಕೇವಲ ಐವತ್ತು ಫಲಾನುಭವಿಗಳಿಗೆ ಮಾತ್ರ ಯೋಜನೆ ಸೌಲಭ್ಯ ದೊರೆಯಲಿದೆ. ಹೆಚ್ಚುವರಿ ಅರ್ಹ ಫಲಾನುಭವಿಗಳಿಗೆ ಮುಂದಿನ ಬಾರಿ ನೀಡಲು ಸದಸ್ಯರು ತಿಳಿಸಿದರು.</p>.<p>ಸ್ಕ್ರ್ಯಾಪ್ ವಾಹನಗಳು, ಜೀವಿತಾವಧಿ ಮುಗಿದ ವಾಹನಗಳ ಮೌಲೀಕರಣ ಸೇರಿದಂತೆ ಹಲವಾರು ವಿಷಯಗಳಿಗೆ ಟೆಂಡರ್ ಕರೆಯಲು ಮತ್ತು ಬೇರೆ ವಿಷಯಗಳಿಗೆ ಸದಸ್ಯರು ಅನುಮೋದನೆ ಸೂಚಿಸಿದರು.</p>.<p>ನಗರಸಭಾ ಸದಸ್ಯರಾದ ಸಂಜಯ ತೆಗ್ಗಿ, ಶ್ರೀಶೈಲ ಬೀಳಗಿ, ಅರುಣ ಬುದ್ನಿ, ಬಸವರಾಜ ಗುಡೋಡಗಿ, ಚಿದಾನಂದ ಹೊರಟ್ಟಿ, ಪ್ರಭಾಕರ ಮುಳೆದ, ಶಶಿಕಲಾ ಸಾರವಾಡ ಸೇರಿದಂತೆ ಅನೇಕರು ಮಾತನಾಡಿದರು.</p>.<p>ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ, ಸುನೀಲ ಬಬಲಾದಿ, ಬಾಬುರಾವ ಕಮತಗಿ, ಶೋಭಾ ಹೊಸಮನಿ, ಪ್ರಶಾಂತ ಪಾಟೀಲ, ಸುನೀಲ ಬಾಗೇವಾಡಿ, ಅಮಿರಖಾನ ಖಲೀಫಾ, ಮಹಾವೀರ ದೈಗೊಂಡ, ಭೀಮು ಬಾಡಗಿ, ಅಭಿನಂದನ ಸೋನಾರ, ಲಕ್ಷ್ಮಿ ತೊನಶ್ಯಾಳ, ಬಸವರಾಜ ಚಿಂಚಖಂಡಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ‘ನಗರಸಭೆಯ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಾರ್ಯಾಲಯಕ್ಕೆ ಆಗಮಿಸುವುದರ ಜೊತೆಗೆ ನಗರಸಭೆಯ ಸದಸ್ಯರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ರಬಕವಿ ಬನಹಟ್ಟಿ ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ ಹೇಳಿದರು.</p>.<p>ರಬಕವಿ ಬನಹಟ್ಟಿ ನಗರಸಭೆಯ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.</p>.<p> ನಗರಸಭೆಯ ಪೌರಾಯುಕ್ತ ರಮೇಶ ಜಾಧವ ಮಾತನಾಡಿ, ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p>‘ನಗರಸಭೆಯ ವ್ಯಾಪ್ತಿಯಲ್ಲಿ 150 ಕ್ಕೂ ಹೆಚ್ಚು ಉದ್ಯಾನಗಳಿವೆ. ಇವುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ಅತಿಕ್ರಮಣ ಹೊಂದಿದ ಉದ್ಯಾನಗಳ ಕುರಿತು ಪರಿಶೀಲಿಸಬೇಕು. ಅವುಗಳನ್ನು ಮರಳಿ ನಗರಸಭೆ ಪಡೆದುಕೊಳ್ಳಬೇಕು’ ಎಂದು ನಗರಸಭೆಯ ಸದಸ್ಯ ಯಲ್ಲಪ್ಪ ಕಟಗಿ ತಿಳಿಸಿದರು.</p>.<p>ನಗರದಲ್ಲಿ ಬೀದಿ ನಾಯಿಗಳಿಂದ ಜನರಿಗೆ ತೊಂದರೆಯಾಗಿದೆ. ಅವುಗಳ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.</p>.<p>ಈಗಾಗಲೇ ಬೀದಿ ನಾಯಿಗಳ ಕಾಟ ತಪ್ಪಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಹಂತ ಹಂತವಾಗಿ ತೆಗೆದುಕೊಳ್ಳಲಾಗುತ್ತಿದೆ. ಅವುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಒಂದು ಬೀದಿ ನಾಯಿಯ ಸಂತಾನಹರಣಕ್ಕೆ ₹1,600 ದಷ್ಟು ಖರ್ಚಾಗುತ್ತದೆ. ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಆನ್ಲೈನ್ ಮೂಲಕ ಜನರು ಅರ್ಜಿಗಳನ್ನು ಸಲ್ಲಿಸಬಹುದು// </p>.<p>2025-26ನೇ ಸಾಲಿನಲ್ಲಿ ಎಸ್ಎಫ್ಸಿ ಯೋಜನೆ ಅಡಿ ಶೇ 24.10, ಶೇ 7.25// ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ 101 ಅರ್ಜಿಗಳು ಬಂದಿವೆ. ಇದರಲ್ಲಿ 59 ಅರ್ಜಿಗಳು ಅರ್ಹವಾಗಿವೆ. ಆದರೆ ಕೇವಲ ಐವತ್ತು ಫಲಾನುಭವಿಗಳಿಗೆ ಮಾತ್ರ ಯೋಜನೆ ಸೌಲಭ್ಯ ದೊರೆಯಲಿದೆ. ಹೆಚ್ಚುವರಿ ಅರ್ಹ ಫಲಾನುಭವಿಗಳಿಗೆ ಮುಂದಿನ ಬಾರಿ ನೀಡಲು ಸದಸ್ಯರು ತಿಳಿಸಿದರು.</p>.<p>ಸ್ಕ್ರ್ಯಾಪ್ ವಾಹನಗಳು, ಜೀವಿತಾವಧಿ ಮುಗಿದ ವಾಹನಗಳ ಮೌಲೀಕರಣ ಸೇರಿದಂತೆ ಹಲವಾರು ವಿಷಯಗಳಿಗೆ ಟೆಂಡರ್ ಕರೆಯಲು ಮತ್ತು ಬೇರೆ ವಿಷಯಗಳಿಗೆ ಸದಸ್ಯರು ಅನುಮೋದನೆ ಸೂಚಿಸಿದರು.</p>.<p>ನಗರಸಭಾ ಸದಸ್ಯರಾದ ಸಂಜಯ ತೆಗ್ಗಿ, ಶ್ರೀಶೈಲ ಬೀಳಗಿ, ಅರುಣ ಬುದ್ನಿ, ಬಸವರಾಜ ಗುಡೋಡಗಿ, ಚಿದಾನಂದ ಹೊರಟ್ಟಿ, ಪ್ರಭಾಕರ ಮುಳೆದ, ಶಶಿಕಲಾ ಸಾರವಾಡ ಸೇರಿದಂತೆ ಅನೇಕರು ಮಾತನಾಡಿದರು.</p>.<p>ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ, ಸುನೀಲ ಬಬಲಾದಿ, ಬಾಬುರಾವ ಕಮತಗಿ, ಶೋಭಾ ಹೊಸಮನಿ, ಪ್ರಶಾಂತ ಪಾಟೀಲ, ಸುನೀಲ ಬಾಗೇವಾಡಿ, ಅಮಿರಖಾನ ಖಲೀಫಾ, ಮಹಾವೀರ ದೈಗೊಂಡ, ಭೀಮು ಬಾಡಗಿ, ಅಭಿನಂದನ ಸೋನಾರ, ಲಕ್ಷ್ಮಿ ತೊನಶ್ಯಾಳ, ಬಸವರಾಜ ಚಿಂಚಖಂಡಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>