<p>ರಬಕವಿ ಬನಹಟ್ಟಿ: ‘ಈ ತಿಂಗಳ ಆರಂಭದಿಂದಲೇ ಪಡಿತರ ವಿತರಣೆಯ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಉಂಟಾಗಿದ್ದು, ಸಾರ್ವಜನಿಕರಿಗೆ ಮತ್ತು ಪಡಿತರ ವಿತರಕರಿಗೆ ತೊಂದರೆಯಾಗಿದೆ, ಈ ಕುರಿತು ಸರ್ಕಾರದ ಗಮನ ಸೆಳೆಯಬೇಕು’ ಎಂದು ಪಡಿತರ ವಿತರಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಖರ ಅಂಗಡಿ ಆಗ್ರಹಿಸಿದರು.</p>.<p>‘ಪಡಿತರ ವಿತರಣೆಯ ಸಂದರ್ಭದಲ್ಲಿ ಒಬ್ಬ ಪಡಿತರದಾರರಿಂದ ಎರೆಡುರಡು ಬಾರಿ ಬೆರಳಚ್ಚು ಪಡೆಯಬೇಕಾಗಿದೆ. ಇದರಿಂದ ಸಮಯ ವ್ಯರ್ಥವಾಗುತ್ತಿದೆ’ ಎಂದರು.</p>.<p>‘ಮುಂದಿನ ತಿಂಗಳಿನಿಂದ ಕೇವಲ ಒಂದು ಬಾರಿ ಬೆರಳಚ್ಚು ಪಡೆಯುವ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ನ್ಯಾಯ ಬೆಲೆ ಅಂಗಡಿಗಳಲ್ಲಿಯ ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಬೇಗ ನಿವಾರಣೆ ಮಾಡಬೇಕು’ ಎಂದು ಸಂಘದ ಸದಸ್ಯರು ತಿಳಿಸಿದರು.</p>.<p>ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಿರೀಶ ಸ್ವಾದಿ ಮಾತನಾಡಿ, ‘ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ಸರ್ವರ್ ಸಮಸ್ಯೆಯ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಜನಾನ ನಾಗರಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-19-1224456041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ‘ಈ ತಿಂಗಳ ಆರಂಭದಿಂದಲೇ ಪಡಿತರ ವಿತರಣೆಯ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಉಂಟಾಗಿದ್ದು, ಸಾರ್ವಜನಿಕರಿಗೆ ಮತ್ತು ಪಡಿತರ ವಿತರಕರಿಗೆ ತೊಂದರೆಯಾಗಿದೆ, ಈ ಕುರಿತು ಸರ್ಕಾರದ ಗಮನ ಸೆಳೆಯಬೇಕು’ ಎಂದು ಪಡಿತರ ವಿತರಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಖರ ಅಂಗಡಿ ಆಗ್ರಹಿಸಿದರು.</p>.<p>‘ಪಡಿತರ ವಿತರಣೆಯ ಸಂದರ್ಭದಲ್ಲಿ ಒಬ್ಬ ಪಡಿತರದಾರರಿಂದ ಎರೆಡುರಡು ಬಾರಿ ಬೆರಳಚ್ಚು ಪಡೆಯಬೇಕಾಗಿದೆ. ಇದರಿಂದ ಸಮಯ ವ್ಯರ್ಥವಾಗುತ್ತಿದೆ’ ಎಂದರು.</p>.<p>‘ಮುಂದಿನ ತಿಂಗಳಿನಿಂದ ಕೇವಲ ಒಂದು ಬಾರಿ ಬೆರಳಚ್ಚು ಪಡೆಯುವ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ನ್ಯಾಯ ಬೆಲೆ ಅಂಗಡಿಗಳಲ್ಲಿಯ ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಬೇಗ ನಿವಾರಣೆ ಮಾಡಬೇಕು’ ಎಂದು ಸಂಘದ ಸದಸ್ಯರು ತಿಳಿಸಿದರು.</p>.<p>ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಿರೀಶ ಸ್ವಾದಿ ಮಾತನಾಡಿ, ‘ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ಸರ್ವರ್ ಸಮಸ್ಯೆಯ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಜನಾನ ನಾಗರಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-19-1224456041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>