<p><strong>ರಬಕವಿ ಬನಹಟ್ಟಿ:</strong> ‘ಇಂದಿನ ದಿನಗಳಲ್ಲಿ ವ್ಯಾಪಾರಸ್ಥರಲ್ಲಿ ಆರೋಗ್ಯಕರ ಪೈಪೋಟಿ ಅಗತ್ಯವಾಗಿದ್ದು, ಇದರಿಂದ ಗ್ರಾಹಕರಿಗೂ ಅನುಕೂಲವಾಗುತ್ತದೆ. ವ್ಯಾಪಾರಸ್ಥರು ಸಂಘಟಿತರಾದರೆ ಮಾತ್ರ ತಮ್ಮ ಹಕ್ಕುಗಳನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಇಲ್ಲಿನ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬದ್ರಿನಾರಾಯಣ ಭಟ್ಟಡ ತಿಳಿಸಿದರು.</p>.<p>ಅವರು ಶನಿವಾರ ಸ್ಥಳೀಯ ಜೇಡರ ದಾಸಿಮಯ್ಯ ಸಭಾಭವನದಲ್ಲಿ ನಡೆದ ವ್ಯಾಪಾರಸ್ಥರ ಸಂಘದ ದ್ವಿತೀಯ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.</p>.<p>ಸಂಘದ ಉಪಾಧ್ಯಕ್ಷ ಗಿರೀಶ ಕಾಡದೇವರ ಮಾತನಾಡಿ, ‘ಮಾರುಕಟ್ಟೆಯಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಗ್ರಾಹಕರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕ್ ಮಾಡುತ್ತಿದ್ದಾರೆ. ಅಂಗಡಿಕಾರರು ತಮ್ಮ ಅಂಗಡಿಗಳ ಮುಂದೆ ವಾಹನಗಳು ಸರಿಯಾಗಿ ನಿಲ್ಲುವಷ್ಟು ಸ್ಥಳದ ಅವಕಾಶ ಮಾಡಿಕೊಳ್ಳಬೇಕು’ ಎಂದರು.</p>.<p>ವಿಆರ್ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ಬಸಯ್ಯ ವಸ್ತ್ರದ ಮಾತನಾಡಿದರು. ಸಂಘದ ಕಾರ್ಯದರ್ಶಿ ಈರಣ್ಣ ಬಾಣಕಾರ, ಹಿರಿಯ ವ್ಯಾಪಾರಸ್ಥರಾದ ಸೋಮು ಗೊಂಬಿ, ಶಂಕ್ರಯ್ಯ ಕಾಡದೇವರ, ಪ್ರಕಾಶ ಮಂಡಿ, ಮುರಳಿ ಕಾಬರಾ, ಅಶೋಕ ಮಹಾಜನ, ರವಿ ಪತ್ತಾರ, ಚಿದಾನಂದ ಪತ್ತಾರ, ಶಂಕರ ಕೆಸರಗೊಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ‘ಇಂದಿನ ದಿನಗಳಲ್ಲಿ ವ್ಯಾಪಾರಸ್ಥರಲ್ಲಿ ಆರೋಗ್ಯಕರ ಪೈಪೋಟಿ ಅಗತ್ಯವಾಗಿದ್ದು, ಇದರಿಂದ ಗ್ರಾಹಕರಿಗೂ ಅನುಕೂಲವಾಗುತ್ತದೆ. ವ್ಯಾಪಾರಸ್ಥರು ಸಂಘಟಿತರಾದರೆ ಮಾತ್ರ ತಮ್ಮ ಹಕ್ಕುಗಳನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಇಲ್ಲಿನ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬದ್ರಿನಾರಾಯಣ ಭಟ್ಟಡ ತಿಳಿಸಿದರು.</p>.<p>ಅವರು ಶನಿವಾರ ಸ್ಥಳೀಯ ಜೇಡರ ದಾಸಿಮಯ್ಯ ಸಭಾಭವನದಲ್ಲಿ ನಡೆದ ವ್ಯಾಪಾರಸ್ಥರ ಸಂಘದ ದ್ವಿತೀಯ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.</p>.<p>ಸಂಘದ ಉಪಾಧ್ಯಕ್ಷ ಗಿರೀಶ ಕಾಡದೇವರ ಮಾತನಾಡಿ, ‘ಮಾರುಕಟ್ಟೆಯಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಗ್ರಾಹಕರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕ್ ಮಾಡುತ್ತಿದ್ದಾರೆ. ಅಂಗಡಿಕಾರರು ತಮ್ಮ ಅಂಗಡಿಗಳ ಮುಂದೆ ವಾಹನಗಳು ಸರಿಯಾಗಿ ನಿಲ್ಲುವಷ್ಟು ಸ್ಥಳದ ಅವಕಾಶ ಮಾಡಿಕೊಳ್ಳಬೇಕು’ ಎಂದರು.</p>.<p>ವಿಆರ್ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ಬಸಯ್ಯ ವಸ್ತ್ರದ ಮಾತನಾಡಿದರು. ಸಂಘದ ಕಾರ್ಯದರ್ಶಿ ಈರಣ್ಣ ಬಾಣಕಾರ, ಹಿರಿಯ ವ್ಯಾಪಾರಸ್ಥರಾದ ಸೋಮು ಗೊಂಬಿ, ಶಂಕ್ರಯ್ಯ ಕಾಡದೇವರ, ಪ್ರಕಾಶ ಮಂಡಿ, ಮುರಳಿ ಕಾಬರಾ, ಅಶೋಕ ಮಹಾಜನ, ರವಿ ಪತ್ತಾರ, ಚಿದಾನಂದ ಪತ್ತಾರ, ಶಂಕರ ಕೆಸರಗೊಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>