ಕಟಾವಿಗೆ ಬಂದಿರುವ ಮೆಕ್ಕೆಜೋಳವನ್ನು ಮಳೆ ಬರುವ ಸಂದರ್ಭದಲ್ಲಿ ಕಿತ್ತರೆ ಸಂಕಷ್ಟ ಇನ್ನಷ್ಟು ಹೆಚ್ಚಲಿದೆ. ರೈತರು ತೀವ್ರ ತೊಂದರೆ ಎದುರಿಸಬೇಕಾಗುತ್ತದೆ. ಜೊತೆಗೆ ತೊಗರಿ ಹೂ ಬಿಟ್ಟು ಕಾಯಿ ಹಿಡಿಯುವ ಸಂದರ್ಭ ಇದಾಗಿದ್ದು, ಮಳೆಗೆ ಎಲ್ಲ ಹೂ ನೆಲಕಚ್ಚಿವೆ. ಜೊತೆಗೆ ಅರಿಷಿಣ ಬೆಳೆಗೆ ಬೆಂಕಿ ರೋಗ ಕಾಣಿಸಿಕೊಂಡಿದೆ.