‘ಅವೈಜ್ಞಾನಿಕ ಗಟಾರ ನಿರ್ಮಾಣ, ಕಸ ವಿಲೇವಾರಿ ಮಾಡದಿರುವುದು, ಸ್ವಚ್ಛತೆ ಕೊರತೆಯಿಂದ ಸಮಸ್ಯೆಯಾಗುತ್ತಿದೆ. ನಗರಸಭೆ ಮಳಿಗೆಗಳ ನಿರ್ವಹಣೆ ಮಾಡುತ್ತಿಲ್ಲ. ಮಳೆಗಾಲ ಆರಂಭವಾಗಿದ್ದು, ವಾಣಿಜ್ಯ ಮಳಿಗೆಗಳಲ್ಲಿರುವ ಬೆಲೆಬಾಳುವ ವಸ್ತುಗಳು, ಪೀಠೋಪಕರಣಗಳು ಹಾಳಾಗುತ್ತಿವೆ. ದಯವಿಟ್ಟು ಮಳೆ ನೀರು ಸಾರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕು’ ಎಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ.