<p><strong>ಬಾಗಲಕೋಟೆ</strong>: ‘ಸಿದ್ದರಾಮಯ್ಯ ನಂತರ ನೀವೇ ಮುಂದಿನ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರಿಂದ ಹೇಳಿಸಿ. ಅದು ಬಿಟ್ಟು ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಮತ ನೀಡಿ ಎಂದು ಯಾಕೆ ಸುಳ್ಳು ಹೇಳಿಸುತ್ತಿದ್ದೀರಿ‘ ಎಂದು ಮಾಜಿ ಶಾಸಕ ರಾಜುಗೌಡ ಪ್ರಶ್ನಿಸಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ. ಕಾಂಗ್ರೆಸ್ಸಿಗೆ ಮತ ಹಾಕಿ ಎಂದು ಅವರ ಬೆಂಬಲಿಗರು ಕೇಳುತ್ತಿದ್ದಾರೆ‘ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ನೀವೇ ಮುಖ್ಯಮಂತ್ರಿ ಎಂದು ಹೇಳಿದರೆ ನಾವೂ ಖುಷಿ ಪಡುತ್ತೇವೆ. ನಮ್ಮನ್ನು ಪಕ್ಷದಿಂದ ಹೊರ ಹಾಕಿದರೂ ಚಿಂತೆಯಿಲ್ಲ. ನಿಮಗೆ ಮತ ಹಾಕಿ ಎಂದು ಹೇಳುತ್ತೇವೆ’ ಎಂದರು.</p>.<p>‘ಒಳಮೀಸಲಾತಿ ಪ್ರಮಾಣ ತಗ್ಗಿಸಿದಾಗ ಜಾರಕಿಹೊಳಿ ಏಕೆ ಮಾತನಾಡಲಿಲ್ಲ. ರಾಜಣ್ಣ ಅವರನ್ನು ಸಂಪುಟದಿಂದ ಬಿಟ್ಟಾಗ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಆದಾಗ ಏಕೆ ಮಾತನಾಡಲಿಲ್ಲ’ ಎಂದರು.</p>.<p>‘ಬಿಜೆಪಿ ಸರ್ಕಾರ ಹೆಚ್ಚಿಸಿದ್ದ ಮೀಸಲಾತಿಯನ್ನು ಉಳಿಸಿಕೊಳ್ಳದ ಕಾಂಗ್ರೆಸ್ಸಿಗರಿಗೆ ಪಾಠ ಕಲಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಸಿದ್ದರಾಮಯ್ಯ ನಂತರ ನೀವೇ ಮುಂದಿನ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರಿಂದ ಹೇಳಿಸಿ. ಅದು ಬಿಟ್ಟು ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಮತ ನೀಡಿ ಎಂದು ಯಾಕೆ ಸುಳ್ಳು ಹೇಳಿಸುತ್ತಿದ್ದೀರಿ‘ ಎಂದು ಮಾಜಿ ಶಾಸಕ ರಾಜುಗೌಡ ಪ್ರಶ್ನಿಸಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ. ಕಾಂಗ್ರೆಸ್ಸಿಗೆ ಮತ ಹಾಕಿ ಎಂದು ಅವರ ಬೆಂಬಲಿಗರು ಕೇಳುತ್ತಿದ್ದಾರೆ‘ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ನೀವೇ ಮುಖ್ಯಮಂತ್ರಿ ಎಂದು ಹೇಳಿದರೆ ನಾವೂ ಖುಷಿ ಪಡುತ್ತೇವೆ. ನಮ್ಮನ್ನು ಪಕ್ಷದಿಂದ ಹೊರ ಹಾಕಿದರೂ ಚಿಂತೆಯಿಲ್ಲ. ನಿಮಗೆ ಮತ ಹಾಕಿ ಎಂದು ಹೇಳುತ್ತೇವೆ’ ಎಂದರು.</p>.<p>‘ಒಳಮೀಸಲಾತಿ ಪ್ರಮಾಣ ತಗ್ಗಿಸಿದಾಗ ಜಾರಕಿಹೊಳಿ ಏಕೆ ಮಾತನಾಡಲಿಲ್ಲ. ರಾಜಣ್ಣ ಅವರನ್ನು ಸಂಪುಟದಿಂದ ಬಿಟ್ಟಾಗ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಆದಾಗ ಏಕೆ ಮಾತನಾಡಲಿಲ್ಲ’ ಎಂದರು.</p>.<p>‘ಬಿಜೆಪಿ ಸರ್ಕಾರ ಹೆಚ್ಚಿಸಿದ್ದ ಮೀಸಲಾತಿಯನ್ನು ಉಳಿಸಿಕೊಳ್ಳದ ಕಾಂಗ್ರೆಸ್ಸಿಗರಿಗೆ ಪಾಠ ಕಲಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>