<p><strong>ಹುನಗುಂದ: ‘</strong>ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ, ರಾಮದುರ್ಗ-ಮಾನ್ವಿ ರಾಜ್ಯ ಹೆದ್ದಾರಿ 14ರಲ್ಲಿನ ಅಪೂರ್ಣ ಕಾಮಗಾರಿಯನ್ನು ಪೂರ್ಣ ಗೊಳಿಸಲಾಗುತ್ತಿದೆ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಶನಿವಾರ ತಾಲ್ಲೂಕಿನ ನಾಗೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ತಾಲ್ಲೂಕಿನಲ್ಲಿ ರಾಮದುರ್ಗ-ಮಾನ್ವಿ ರಾಜ್ಯ ಹೆದ್ದಾರಿಯಲ್ಲಿ ₹5 ಕೋಟಿ ವೆಚ್ಚದ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ರಾಜ್ಯ ಹೆದ್ದಾರಿಯಲ್ಲಿ ಬರುವ ತಾಲ್ಲೂಕಿನ ಹಗೇದಾಳ, ರಾಮವಾಡಗಿ ಕ್ರಾಸ್, ಹಿರೇಬಾದವಾಡಗಿ, ಚಿತ್ತವಾಡಗಿ ಕ್ರಾಸ್, ನಾಗೂರ, ಗುಡೂರ, ಚಿಕನಾಳ ಹಾಗೂ ಭೀಮನಗಡ ಗ್ರಾಮಗಳಲ್ಲಿ ಒಟ್ಟು 13.26 ಕಿ.ಮೀ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈಗಾಗಲೇ ಈ ಮಾರ್ಗವನ್ನು 3 ಮೀಟರ್ ದಿಂದ 5 ಮೀಟರ್ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದರು</p>.<p>‘ರಾಜ್ಯ ಸರ್ಕಾರ ಮತಕ್ಷೇತ್ರದ ಎಲ್ಲ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹ 50 ಕೋಟಿ ಅನುದಾನ ಮಂಜೂರು’ ಮಾಡಿದೆ ಎಂದರು.</p>.<p>ಮುಖಂಡರಾದ ಶಿವಾನಂದ ಕಂಠಿ, ಬಸವರಾಜ ಗದ್ದಿ, ಸಂಗಣ್ಣ ಗಂಜೀಹಾಳ, ನಾಗೂರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹುಲಗವ್ವ ಮಾದರ, ಎಸ್. ಜಿ. ಆನಂದಪ್ಪನವರ, ತಾಲ್ಲೂಕು ಪಂಚಾಯ್ತಿ ಇಒ ಮುರುಳಿ ದೇಶಪಾಂಡೆ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಐ. ಜಿ. ಹಿರೇಮಠ ಇತರರಿದ್ದರು.</p>.<div><blockquote>ತಾಲ್ಲೂಕಿನ ವಿವಿಧಡೆ ಲೋಕೋಪಯೋಗಿ ಇಲಾಖೆ ವತಿಯಿಂದ ₹ 15 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ </blockquote><span class="attribution">ವಿಜಯಾನಂದ ಕಾಶಪ್ಪನವರ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ: ‘</strong>ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ, ರಾಮದುರ್ಗ-ಮಾನ್ವಿ ರಾಜ್ಯ ಹೆದ್ದಾರಿ 14ರಲ್ಲಿನ ಅಪೂರ್ಣ ಕಾಮಗಾರಿಯನ್ನು ಪೂರ್ಣ ಗೊಳಿಸಲಾಗುತ್ತಿದೆ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಶನಿವಾರ ತಾಲ್ಲೂಕಿನ ನಾಗೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ತಾಲ್ಲೂಕಿನಲ್ಲಿ ರಾಮದುರ್ಗ-ಮಾನ್ವಿ ರಾಜ್ಯ ಹೆದ್ದಾರಿಯಲ್ಲಿ ₹5 ಕೋಟಿ ವೆಚ್ಚದ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ರಾಜ್ಯ ಹೆದ್ದಾರಿಯಲ್ಲಿ ಬರುವ ತಾಲ್ಲೂಕಿನ ಹಗೇದಾಳ, ರಾಮವಾಡಗಿ ಕ್ರಾಸ್, ಹಿರೇಬಾದವಾಡಗಿ, ಚಿತ್ತವಾಡಗಿ ಕ್ರಾಸ್, ನಾಗೂರ, ಗುಡೂರ, ಚಿಕನಾಳ ಹಾಗೂ ಭೀಮನಗಡ ಗ್ರಾಮಗಳಲ್ಲಿ ಒಟ್ಟು 13.26 ಕಿ.ಮೀ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈಗಾಗಲೇ ಈ ಮಾರ್ಗವನ್ನು 3 ಮೀಟರ್ ದಿಂದ 5 ಮೀಟರ್ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದರು</p>.<p>‘ರಾಜ್ಯ ಸರ್ಕಾರ ಮತಕ್ಷೇತ್ರದ ಎಲ್ಲ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹ 50 ಕೋಟಿ ಅನುದಾನ ಮಂಜೂರು’ ಮಾಡಿದೆ ಎಂದರು.</p>.<p>ಮುಖಂಡರಾದ ಶಿವಾನಂದ ಕಂಠಿ, ಬಸವರಾಜ ಗದ್ದಿ, ಸಂಗಣ್ಣ ಗಂಜೀಹಾಳ, ನಾಗೂರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹುಲಗವ್ವ ಮಾದರ, ಎಸ್. ಜಿ. ಆನಂದಪ್ಪನವರ, ತಾಲ್ಲೂಕು ಪಂಚಾಯ್ತಿ ಇಒ ಮುರುಳಿ ದೇಶಪಾಂಡೆ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಐ. ಜಿ. ಹಿರೇಮಠ ಇತರರಿದ್ದರು.</p>.<div><blockquote>ತಾಲ್ಲೂಕಿನ ವಿವಿಧಡೆ ಲೋಕೋಪಯೋಗಿ ಇಲಾಖೆ ವತಿಯಿಂದ ₹ 15 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ </blockquote><span class="attribution">ವಿಜಯಾನಂದ ಕಾಶಪ್ಪನವರ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>