<p><strong>ರಾಂಪುರ:</strong> ಸ್ಥಳೀಯ ಬಸ್ ನಿಲ್ದಾಣದ ಜಾಗ ಅತಿಕ್ರಮಣದಾರರಿಗೆ ಮತ್ತೆ ನೋಟಿಸ್ ನೀಡಲು ಬುಧವಾರ ಬಾಗಲಕೋಟೆಯಲ್ಲಿ ನಡೆದ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.<p>ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸದ್ಯದಲ್ಲೇ ಪುನರ್ವಸತಿ ಇಲಾಖೆಯ ಅಧಿಕಾರಿಗಳು ಎರಡನೇ ನೋಟಿಸ್ ಜಾರಿ ಮಾಡಲಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ ತಿಳಿಸಿದರು.</p>.<p>ನಿಗದಿಗೊಳಿಸಲಾದ ಜಾಗದ ಅತಿಕ್ರಮಣದಿಂದಾಗಿ ಬಸ್ ನಿಲ್ದಾಣ ನಿರ್ಮಾಣ ಕಾರ್ಯ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅತಿಕ್ರಮಣದಾರರು ಜಾಗ ತೆರವುಗೊಳಿಸದ ಹಿನ್ನೆಲೆಯಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.</p>.<p>ಸದ್ಯ ಎರಡನೇ ನೋಟಿಸ್ ಜಾರಿಗೊಳಿಸಿ ತಿಳಿವಳಿಕೆ ನೀಡುವುದು, ನಂತರ ಮೂರನೇ ಬಾರಿ ನೋಟಿಸ್ ಜಾರಿ ಮಾಡುವುದಕ್ಕೆ ತೀರ್ಮಾನವಾಗಿದ್ದು, ಇದಕ್ಕೆ ಸ್ಪಂದಿಸಿ ಅತಿಕ್ರಮಣದಾರರು ಸ್ಥಳ ತೆರವುಗೊಳಿಸಿದರೆ ಸರಿ. ಇಲ್ಲದಿದ್ದರೆ ಮುಂದಿನ ಕ್ರಮ ಜರುಗಿಸಲು ನಿರ್ಧರಿಸಲಾಗಿದೆ ಎಂದು ಇಒ ತಿಳಿಸಿದರು.</p>.<p>ಅತಿಕ್ರಮಣ ತೆರವುಗೊಳಿಸುವಂತೆ ಕೋರಿ ಸಾರ್ವಜನಿಕರೊಬ್ಬರು ಬಾಗಲಕೋಟೆ ಲೋಕಾಯುಕ್ತ ಪೋಲಿಸರಿಗೆ ದೂರು ಸಲ್ಲಿಸಿದ್ದು, ಅವರು ಈ ಸಮಸ್ಯೆ ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಇಲಾಖೆ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಇಒ ಮತ್ತು ಮತ್ತು ರಾಂಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ:</strong> ಸ್ಥಳೀಯ ಬಸ್ ನಿಲ್ದಾಣದ ಜಾಗ ಅತಿಕ್ರಮಣದಾರರಿಗೆ ಮತ್ತೆ ನೋಟಿಸ್ ನೀಡಲು ಬುಧವಾರ ಬಾಗಲಕೋಟೆಯಲ್ಲಿ ನಡೆದ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.<p>ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸದ್ಯದಲ್ಲೇ ಪುನರ್ವಸತಿ ಇಲಾಖೆಯ ಅಧಿಕಾರಿಗಳು ಎರಡನೇ ನೋಟಿಸ್ ಜಾರಿ ಮಾಡಲಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ ತಿಳಿಸಿದರು.</p>.<p>ನಿಗದಿಗೊಳಿಸಲಾದ ಜಾಗದ ಅತಿಕ್ರಮಣದಿಂದಾಗಿ ಬಸ್ ನಿಲ್ದಾಣ ನಿರ್ಮಾಣ ಕಾರ್ಯ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅತಿಕ್ರಮಣದಾರರು ಜಾಗ ತೆರವುಗೊಳಿಸದ ಹಿನ್ನೆಲೆಯಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.</p>.<p>ಸದ್ಯ ಎರಡನೇ ನೋಟಿಸ್ ಜಾರಿಗೊಳಿಸಿ ತಿಳಿವಳಿಕೆ ನೀಡುವುದು, ನಂತರ ಮೂರನೇ ಬಾರಿ ನೋಟಿಸ್ ಜಾರಿ ಮಾಡುವುದಕ್ಕೆ ತೀರ್ಮಾನವಾಗಿದ್ದು, ಇದಕ್ಕೆ ಸ್ಪಂದಿಸಿ ಅತಿಕ್ರಮಣದಾರರು ಸ್ಥಳ ತೆರವುಗೊಳಿಸಿದರೆ ಸರಿ. ಇಲ್ಲದಿದ್ದರೆ ಮುಂದಿನ ಕ್ರಮ ಜರುಗಿಸಲು ನಿರ್ಧರಿಸಲಾಗಿದೆ ಎಂದು ಇಒ ತಿಳಿಸಿದರು.</p>.<p>ಅತಿಕ್ರಮಣ ತೆರವುಗೊಳಿಸುವಂತೆ ಕೋರಿ ಸಾರ್ವಜನಿಕರೊಬ್ಬರು ಬಾಗಲಕೋಟೆ ಲೋಕಾಯುಕ್ತ ಪೋಲಿಸರಿಗೆ ದೂರು ಸಲ್ಲಿಸಿದ್ದು, ಅವರು ಈ ಸಮಸ್ಯೆ ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಇಲಾಖೆ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಇಒ ಮತ್ತು ಮತ್ತು ರಾಂಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>