<p>ರಾಂಪುರ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಅಗತ್ಯ ಆರ್ಥಿಕ ನೆರವು ನೀಡಲಾಗುತ್ತಿದೆ’ ಎಂದು ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚನ್ನಕೇಶವ ಹೇಳಿದರು.</p>.<p>ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದ ರುದ್ರಭೂಮಿಯಲ್ಲಿ ಅಳವಡಿಸಿದ ಶವದಹನ ಪೆಟ್ಟಿಗೆ (ಸಿಲಿಕಾನ್ ಛೇಂಬರ್) ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯದಾದ್ಯಂತ ಅನೇಕ ರುದ್ರಭೂಮಿಗಳ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಲಾಗಿದೆ. ಮರಣ ಹೊಂದಿದ ವ್ಯಕ್ತಿಯ ಶವ ಸಂಸ್ಕಾರವನ್ನು ವ್ಯವಸ್ಥಿತ ಮತ್ತು ಗೌರವಯುತವಾಗಿ ನೆರವೇರಿಸಲು ಮಾನವೀಯ ಉದ್ದೇಶದಿಂದ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ’ ಎಂದರು.</p>.<p>‘ಕಾರ್ಯಕ್ರಮದ ಅನ್ವಯ ಬಾಗಲಕೋಟೆ ಜಿಲ್ಲೆಯ 10ಕ್ಕೂ ಹೆಚ್ಚು ರುದ್ರಭೂಮಿಗಳಲ್ಲಿ ಸಿಲಿಕಾನ್ ಛೇಂಬರ್ ಅಳವಡಿಸಲಾಗಿದೆ. 3–4 ರುದ್ರಭೂಮಿಗಳಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>ಶೇಖರಯ್ಯಸ್ವಾಮಿ ಘಂಟಿಮಠ, ನೀಲಪ್ಪ ಪೆಟ್ಲೂರ, ತಿಮ್ಮಣ್ಣ ಸನ್ನಪ್ಪನವರ, ಶಂಕರ ಕುದರಿ, ಹನಮಂತ ಸನ್ನಪ್ಪನವರ, ಅಶೋಕ ದಾಸಪ್ಪನವರ, ಮುತ್ತಪ್ಪ ಬಾಳಕ್ಕನವರ, ಮುತ್ತುರಾಜ ಅರಕೇರಿ, ರವಿ ಅರಿಷಿಣಗೋಡಿ, ನೀಲಪ್ಪ ಬಾಳಕ್ಕನವರ, ನಿಂಗಪ್ಪ ಹುಡೇದಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-19-1889164907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಂಪುರ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಅಗತ್ಯ ಆರ್ಥಿಕ ನೆರವು ನೀಡಲಾಗುತ್ತಿದೆ’ ಎಂದು ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚನ್ನಕೇಶವ ಹೇಳಿದರು.</p>.<p>ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದ ರುದ್ರಭೂಮಿಯಲ್ಲಿ ಅಳವಡಿಸಿದ ಶವದಹನ ಪೆಟ್ಟಿಗೆ (ಸಿಲಿಕಾನ್ ಛೇಂಬರ್) ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯದಾದ್ಯಂತ ಅನೇಕ ರುದ್ರಭೂಮಿಗಳ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಲಾಗಿದೆ. ಮರಣ ಹೊಂದಿದ ವ್ಯಕ್ತಿಯ ಶವ ಸಂಸ್ಕಾರವನ್ನು ವ್ಯವಸ್ಥಿತ ಮತ್ತು ಗೌರವಯುತವಾಗಿ ನೆರವೇರಿಸಲು ಮಾನವೀಯ ಉದ್ದೇಶದಿಂದ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ’ ಎಂದರು.</p>.<p>‘ಕಾರ್ಯಕ್ರಮದ ಅನ್ವಯ ಬಾಗಲಕೋಟೆ ಜಿಲ್ಲೆಯ 10ಕ್ಕೂ ಹೆಚ್ಚು ರುದ್ರಭೂಮಿಗಳಲ್ಲಿ ಸಿಲಿಕಾನ್ ಛೇಂಬರ್ ಅಳವಡಿಸಲಾಗಿದೆ. 3–4 ರುದ್ರಭೂಮಿಗಳಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>ಶೇಖರಯ್ಯಸ್ವಾಮಿ ಘಂಟಿಮಠ, ನೀಲಪ್ಪ ಪೆಟ್ಲೂರ, ತಿಮ್ಮಣ್ಣ ಸನ್ನಪ್ಪನವರ, ಶಂಕರ ಕುದರಿ, ಹನಮಂತ ಸನ್ನಪ್ಪನವರ, ಅಶೋಕ ದಾಸಪ್ಪನವರ, ಮುತ್ತಪ್ಪ ಬಾಳಕ್ಕನವರ, ಮುತ್ತುರಾಜ ಅರಕೇರಿ, ರವಿ ಅರಿಷಿಣಗೋಡಿ, ನೀಲಪ್ಪ ಬಾಳಕ್ಕನವರ, ನಿಂಗಪ್ಪ ಹುಡೇದಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-19-1889164907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>