<p>ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ ಹಾಗೂ ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಅವಿರೋಧವಾಗಿ ಆಯ್ಕೆಯಾದರು.</p>.<p>ಹಿಂದಿನ ಅಧ್ಯಕ್ಷ ಚಿನ್ನಪ್ಪ ಪೂಜೇರಿ, ಉಪಾಧ್ಯಕ್ಷ ಶಿವಯ್ಯಾ ಮೆಟಗುಡ್ಡ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಗಳ ಆಯ್ಕೆಗೆ ಸಂಘದ ಸಭಾಭವನದಲ್ಲಿ ಈಚೆಗೆ ಚುನಾವಣೆ ನಡೆಯಿತು.</p>.<p>ಎರಡೂ ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಎಸ್.ಕೆ. ಸಾರವಾಡ ಘೋಷಿಸಿದರು. ಐದು ವರ್ಷದ ಅಧಿಕಾರ ಅವಧಿಯಲ್ಲಿ ಎರಡುವರೆ ವರ್ಷ ಮುಗಿದಿದ್ದು, ಬಾಕಿ ಉಳಿದ ಆಡಳಿತ ಮಂಡಳಿ ಅವಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.</p>.<p>ನಿರ್ದೇಶಕರಾದ ಚಿನ್ನಪ್ಪ ಪೂಜೇರಿ, ಶಿವಯ್ಯಾ ಮೆಟಗುಡ್ಡ, ಗಿರೀಶ ಶಿರೋಳ, ಪರಮಾನಂದ ಸನಹಟ್ಟಿ, ಶಂಕರ ಆರೇನಾಡ, ರುಕ್ಮವ್ವ ಲಾಗದವರ, ಲಕ್ಷ್ಮೀ ಹುನ್ನೂರ, ಸಂತಪ್ಪ ಮಲಾವಡಿ, ಭೀಮವ್ವ ನ್ಯಾಮಗೌಡ, ಹನಮಂತ ದೊಡಹಟ್ಟಿ, ಮುಖ್ಯ ಕಾರ್ಯನಿರ್ವಾಹಕ ಬಸವರಾಜ ಹಿಕಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-19-1573956565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ ಹಾಗೂ ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಅವಿರೋಧವಾಗಿ ಆಯ್ಕೆಯಾದರು.</p>.<p>ಹಿಂದಿನ ಅಧ್ಯಕ್ಷ ಚಿನ್ನಪ್ಪ ಪೂಜೇರಿ, ಉಪಾಧ್ಯಕ್ಷ ಶಿವಯ್ಯಾ ಮೆಟಗುಡ್ಡ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಗಳ ಆಯ್ಕೆಗೆ ಸಂಘದ ಸಭಾಭವನದಲ್ಲಿ ಈಚೆಗೆ ಚುನಾವಣೆ ನಡೆಯಿತು.</p>.<p>ಎರಡೂ ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಎಸ್.ಕೆ. ಸಾರವಾಡ ಘೋಷಿಸಿದರು. ಐದು ವರ್ಷದ ಅಧಿಕಾರ ಅವಧಿಯಲ್ಲಿ ಎರಡುವರೆ ವರ್ಷ ಮುಗಿದಿದ್ದು, ಬಾಕಿ ಉಳಿದ ಆಡಳಿತ ಮಂಡಳಿ ಅವಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.</p>.<p>ನಿರ್ದೇಶಕರಾದ ಚಿನ್ನಪ್ಪ ಪೂಜೇರಿ, ಶಿವಯ್ಯಾ ಮೆಟಗುಡ್ಡ, ಗಿರೀಶ ಶಿರೋಳ, ಪರಮಾನಂದ ಸನಹಟ್ಟಿ, ಶಂಕರ ಆರೇನಾಡ, ರುಕ್ಮವ್ವ ಲಾಗದವರ, ಲಕ್ಷ್ಮೀ ಹುನ್ನೂರ, ಸಂತಪ್ಪ ಮಲಾವಡಿ, ಭೀಮವ್ವ ನ್ಯಾಮಗೌಡ, ಹನಮಂತ ದೊಡಹಟ್ಟಿ, ಮುಖ್ಯ ಕಾರ್ಯನಿರ್ವಾಹಕ ಬಸವರಾಜ ಹಿಕಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-19-1573956565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>