<p><strong>ಬಾಗಲಕೋಟೆ</strong>: ‘ಹೊಸ ಪಡಿತರ ಚೀಟಿಗಳನ್ನು ವಿತರಿಸಿದಷ್ಟೇ ಪ್ರಮಾಣದಲ್ಲಿ ಹಳೆಯ ಪಡಿತರ ಚೀಟಿಗಳನ್ನು ರದ್ದುಪಡಿಸಬೇಕು. ಒಟ್ಟಾರೆ ಈಗಿರುವ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಿಸುವಂತಿಲ್ಲ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶವು ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.</p>.<p>ರಾಜ್ಯದಲ್ಲಿ 10.88 ಲಕ್ಷ ಅಂತ್ಯೋದಯ ಮತ್ತು 1.16 ಕೋಟಿ ಬಿಪಿಎಲ್ ಕಾರ್ಡ್ದಾರರು ಇದ್ದಾರೆ. ‘ಹೊಸ ಬಿಪಿಎಲ್ ಪಡಿತರ ಚೀಟಿಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ’ ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಇಲಾಖೆಯ ಆದೇಶ ಹೊರಬಂದಿದೆ.</p>.<p>ಒಟ್ಟು 2.95 ಲಕ್ಷ ಪೈಕಿ 2.78 ಲಕ್ಷ ಅರ್ಜಿಗಳ ಸ್ಥಳ ಪರಿಶೀಲನೆ ನಡೆದಿದೆ. 2.28 ಲಕ್ಷ ಅರ್ಜಿಗಳು ಅರ್ಹವೆಂದು ಕಂಡು ಬಂದಿವೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 27,486 ಅರ್ಜಿ ಸಲ್ಲಿಕೆಯಾಗಿವೆ.</p>.<p>ಯಾರದ್ದು ರದ್ದು: ಸತತ 6 ತಿಂಗಳಿನಿಂದ ಪಡಿತರ ಪಡೆಯದ ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಆದ್ಯತೆ ಮೇರೆಗೆ ಸೂಚಿಸಲಾಗಿದೆ. ಅನರ್ಹರೂ ಪಡಿತರ ಚೀಟಿಗಳನ್ನು ಪಡೆದ ಬಗ್ಗೆ ದೂರುಗಳಿದ್ದು, ಪರಿಶೀಲಿಸಿ ಅಂತಹವರ ಕಾರ್ಡ್ಗಳನ್ನು ರದ್ದುಪಡಿಸಲು ತಿಳಿಸಲಾಗಿದೆ.</p>.<p>ರಾಜ್ಯದಲ್ಲಿರುವ ಒಟ್ಟು ಪಡಿತರ ಚೀಟಿದಾರರ ಪೈಕಿ 14,826 ಅಂತ್ಯೋದಯ ಮತ್ತು 3.32 ಲಕ್ಷ ಬಿಪಿಎಲ್ ಕಾರ್ಡ್ ಹೊಂದಿದವರು ಸತತ 6 ತಿಂಗಳಿಂದ ಆಹಾರ ಧಾನ್ಯ ಪಡೆಯದಿರುವುದು ಗೊತ್ತಾಗಿದೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ ಪಡಿತರ ಪಡೆಯದಿರುವವರ ಸಂಖ್ಯೆ 37,880 ಇದೆ.</p>.<p>ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಗಳ ಆಧಾರದ ಮೇಲೆಯೇ ಗೃಹಲಕ್ಷ್ಮಿ, ಆಯುಷ್ಮಾನ್ ಆರೋಗ್ಯ ಚಿಕಿತ್ಸೆಯ ₹5 ಲಕ್ಷ ವೆಚ್ಚ, ವಿವಿಧ ಇಲಾಖೆ, ನಿಗಮಗಳ ಫಲಾನುಭವಿಗಳ ಆಯ್ಕೆ, ಸಾಲ ಸೌಲಭ್ಯ ನೀಡಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ ಹೆಚ್ಚಳವಾದರೆ, ಸರ್ಕಾರಕ್ಕೂ ಹೊರೆಯಾಗುವ ಕಾರಣ ಪಡಿತರ ಕಾರ್ಡ್ಗಳ ಸಂಖ್ಯೆ ಹೆಚ್ಚಳವಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.</p>.<p>‘6 ತಿಂಗಳಿನಿಂದ ಪಡಿತರ ಪಡೆಯದ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಹೊಸ ಪಡಿತರ ಚೀಟಿಗಳನ್ನು ವಿತರಿಸಿದಷ್ಟೇ ಪ್ರಮಾಣದಲ್ಲಿ ಹಳೆಯ ಪಡಿತರ ಚೀಟಿಗಳನ್ನು ರದ್ದುಪಡಿಸಬೇಕು. ಒಟ್ಟಾರೆ ಈಗಿರುವ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಿಸುವಂತಿಲ್ಲ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶವು ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.</p>.<p>ರಾಜ್ಯದಲ್ಲಿ 10.88 ಲಕ್ಷ ಅಂತ್ಯೋದಯ ಮತ್ತು 1.16 ಕೋಟಿ ಬಿಪಿಎಲ್ ಕಾರ್ಡ್ದಾರರು ಇದ್ದಾರೆ. ‘ಹೊಸ ಬಿಪಿಎಲ್ ಪಡಿತರ ಚೀಟಿಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ’ ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಇಲಾಖೆಯ ಆದೇಶ ಹೊರಬಂದಿದೆ.</p>.<p>ಒಟ್ಟು 2.95 ಲಕ್ಷ ಪೈಕಿ 2.78 ಲಕ್ಷ ಅರ್ಜಿಗಳ ಸ್ಥಳ ಪರಿಶೀಲನೆ ನಡೆದಿದೆ. 2.28 ಲಕ್ಷ ಅರ್ಜಿಗಳು ಅರ್ಹವೆಂದು ಕಂಡು ಬಂದಿವೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 27,486 ಅರ್ಜಿ ಸಲ್ಲಿಕೆಯಾಗಿವೆ.</p>.<p>ಯಾರದ್ದು ರದ್ದು: ಸತತ 6 ತಿಂಗಳಿನಿಂದ ಪಡಿತರ ಪಡೆಯದ ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಆದ್ಯತೆ ಮೇರೆಗೆ ಸೂಚಿಸಲಾಗಿದೆ. ಅನರ್ಹರೂ ಪಡಿತರ ಚೀಟಿಗಳನ್ನು ಪಡೆದ ಬಗ್ಗೆ ದೂರುಗಳಿದ್ದು, ಪರಿಶೀಲಿಸಿ ಅಂತಹವರ ಕಾರ್ಡ್ಗಳನ್ನು ರದ್ದುಪಡಿಸಲು ತಿಳಿಸಲಾಗಿದೆ.</p>.<p>ರಾಜ್ಯದಲ್ಲಿರುವ ಒಟ್ಟು ಪಡಿತರ ಚೀಟಿದಾರರ ಪೈಕಿ 14,826 ಅಂತ್ಯೋದಯ ಮತ್ತು 3.32 ಲಕ್ಷ ಬಿಪಿಎಲ್ ಕಾರ್ಡ್ ಹೊಂದಿದವರು ಸತತ 6 ತಿಂಗಳಿಂದ ಆಹಾರ ಧಾನ್ಯ ಪಡೆಯದಿರುವುದು ಗೊತ್ತಾಗಿದೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ ಪಡಿತರ ಪಡೆಯದಿರುವವರ ಸಂಖ್ಯೆ 37,880 ಇದೆ.</p>.<p>ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಗಳ ಆಧಾರದ ಮೇಲೆಯೇ ಗೃಹಲಕ್ಷ್ಮಿ, ಆಯುಷ್ಮಾನ್ ಆರೋಗ್ಯ ಚಿಕಿತ್ಸೆಯ ₹5 ಲಕ್ಷ ವೆಚ್ಚ, ವಿವಿಧ ಇಲಾಖೆ, ನಿಗಮಗಳ ಫಲಾನುಭವಿಗಳ ಆಯ್ಕೆ, ಸಾಲ ಸೌಲಭ್ಯ ನೀಡಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ ಹೆಚ್ಚಳವಾದರೆ, ಸರ್ಕಾರಕ್ಕೂ ಹೊರೆಯಾಗುವ ಕಾರಣ ಪಡಿತರ ಕಾರ್ಡ್ಗಳ ಸಂಖ್ಯೆ ಹೆಚ್ಚಳವಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.</p>.<p>‘6 ತಿಂಗಳಿನಿಂದ ಪಡಿತರ ಪಡೆಯದ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>