ಕೂಡಲಸಂಗಮ: ಸ್ಥಳೀಯ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ, ಬೆಂಗಳೂರು ವಿಶ್ವಕಲ್ಯಾಣ ಮಿಷನ್ನ ಬಸವಯೋಗಿ ಸ್ವಾಮೀಜಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸನ್ಮಾನಿಸಿದರು.
’ಕೂಡಲಸಂಗಮವನ್ನು ದೆಹಲಿ ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಬಿಡುಗಡೆಯಾದ ₹140 ಕೋಟಿ ವೆಚ್ಚದ ಕಾಮಗಾರಿ 5 ವರ್ಷದಿಂದ ಆಮೆಗತಿಯಲ್ಲಿ ನಡೆಯುತ್ತಿದೆ. ಕೂಡಲೇ ಕಾಮಗಾರಿ ಪರಿಶೀಲಿಸಿ, ಕಾಮಗಾರಿ ಬೇಗ ಮುಗಿಸುವಂತೆ ಮಾಡಿ’ ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಸಮಗ್ರ ಮಾಹಿತಿ ಪಡೆದು, ಬೇಗ ಕಾಮಗಾರಿ ಮುಗಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ ಎಂದು ಮಹಾದೇಶ್ವರ ಸ್ವಾಮೀಜಿ ಹೇಳಿದರು.