ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡಲಸಂಗಮ ಅಭಿವೃದ್ಧಿ ಕಾಮಗಾರಿ ಬೇಗ ಮುಗಿಸಲು ಸಿಎಂಗೆ ಮನವಿ

Published 1 ಜೂನ್ 2023, 11:36 IST
Last Updated 1 ಜೂನ್ 2023, 11:36 IST
ಅಕ್ಷರ ಗಾತ್ರ

ಕೂಡಲಸಂಗಮ: ಸ್ಥಳೀಯ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ, ಬೆಂಗಳೂರು ವಿಶ್ವಕಲ್ಯಾಣ ಮಿಷನ್‌ನ ಬಸವಯೋಗಿ ಸ್ವಾಮೀಜಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸನ್ಮಾನಿಸಿದರು.

’ಕೂಡಲಸಂಗಮವನ್ನು ದೆಹಲಿ ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಬಿಡುಗಡೆಯಾದ ₹140 ಕೋಟಿ ವೆಚ್ಚದ ಕಾಮಗಾರಿ 5 ವರ್ಷದಿಂದ ಆಮೆಗತಿಯಲ್ಲಿ ನಡೆಯುತ್ತಿದೆ. ಕೂಡಲೇ ಕಾಮಗಾರಿ ಪರಿಶೀಲಿಸಿ, ಕಾಮಗಾರಿ ಬೇಗ ಮುಗಿಸುವಂತೆ ಮಾಡಿ’ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಸಮಗ್ರ ಮಾಹಿತಿ ಪಡೆದು, ಬೇಗ ಕಾಮಗಾರಿ ಮುಗಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ ಎಂದು ಮಹಾದೇಶ್ವರ ಸ್ವಾಮೀಜಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT