<p><strong>ಬಾಗಲಕೋಟೆ</strong>: ‘ಮನೆ ಮುಳುಗಡೆಯಾಗಿ ಸಂತ್ರಸ್ತರಾಗಿದ್ದೇವೆ. ಬಾಡಿಗೆಯಲ್ಲಿದ್ದ ಮನೆ ಮುಳುಗಡೆಯಾಗಿ ಅತಂತ್ರರಾಗಿದ್ದೇವೆ. ನಿವೇಶನಕ್ಕಾಗಿ ಬಿಟಿಡಿಎಗೆ ಅಲೆದಾಡುವುದೇ ಆಗಿದೆ. ಕೂಡಲೇ ನಿವೇಶನ ಕೊಡಿಸಬೇಕು’ ಎಂದು ಜನಸ್ಪಂದನಕ್ಕೆ ಬಂದಿದ್ದ ಅರ್ಧಕ್ಕೂ ಹೆಚ್ಚು ಜನರು ಮನವಿ ಸಲ್ಲಿಸಿದರು.</p>.<p>ನವನಗರದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು ಸ್ವೀಕೃತವಾದ 40 ಅರ್ಜಿಗಳಲ್ಲಿ 29 ಅರ್ಜಿಗಳು ನಿವೇಶನಕ್ಕೆ ಸಂಬಂಧಿಸಿದವೇ ಆಗಿದ್ದವು.</p>.<p>‘ಹಲವಾರು ವರ್ಷಗಳಿಂದ ದಾಖಲೆ ಹಿಡಿದುಕೊಂಡು ಬಿಟಿಡಿಎಗೆ ಅಲೆದಾಡುತ್ತಿದ್ದೇವೆ. ಅರ್ಜಿಯನ್ನೂ ಸಲ್ಲಿದಿದ್ದೇವೆ. ಆದರೆ, ಅವುಗಳು ಇತ್ಯರ್ಥವಾಗಿಲ್ಲ’ ಎಂದು ದೂರಿದರು.</p>.<p>ಶಾಸಕ ಎಚ್.ವೈ. ಮೇಟಿ ಮಾತನಾಡಿ, ‘ಸೂಕ್ತ ದಾಖಲೆಗಳೊಂದಿಗೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಕೆ ಮಾಡಿ. ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ನಿವೇಶನ ನೀಡಲು ಕ್ರಮಕೈಗೊಳ್ಳಲಾಗುವುದು. ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ’ ಎಂದರು.</p>.<p>‘ಅರ್ಜಿ ಸಲ್ಲಿಸಿದವರಿಗೆ ಯಾವ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಲಾಗಿದೆ. ಅವರು ದಾಖಲೆಗಳನ್ನು ಸಲ್ಲಿಸಿದರೆ, ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದು ಬಿಟಿಡಿಎ ಅಧಿಕಾರಿ ಭರವಸೆ ನೀಡಿದರು.</p>.<p>ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ‘ಸಾರ್ವಜನಿಕರು ಹೊತ್ತು ತಂದ ಕುಂದು-ಕೊರತೆ ಹಾಗೂ ಅಹವಾಲುಗಳಿಗೆ ಸ್ಪಂದಿಸುವ ಕೆಲಸವಾಗಬೇಕು.ಮೊದಲ ಹಂತದಲ್ಲಿ ತಾಲ್ಲೂಕಿನ ರಾಂಪುರ ಮತ್ತು ಸೀಮಿಕೇರಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿದ್ದು, ಸ್ವೀಕೃತಗೊಂಡ ಎಲ್ಲ ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ, ‘ತಾಲ್ಲೂಕು ಹಂತದಲ್ಲಿ ಬಂದ ಅರ್ಜಿಗಳ ಮೇಲೆ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ಕಾರ್ಯಾಲಯದಿಂದ ಪರಿಶೀಲನೆ ಮಾಡಲಾಗುತ್ತಿದ್ದು, ಅರ್ಜಿಗಳಿಗೆ ತುರ್ತಾಗಿ ಇತ್ಯರ್ಥಗೊಳಿಸಬೇಕು’ ಎಂದು ಹೇಳಿದರು.</p>.<p>‘ಪದ್ಮನಯನ ನಗರದ ಬಸ್ ನಿಲ್ಲಿಸಬೇಕು ಎಂದು ಆದೇಶವಾಗಿದೆ. ಆದರೆ, ಯಾವುದೇ ಬಸ್ಗಳು ನಿಲುಗಡೆ ಮಾಡುವುದಿಲ್ಲ. ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಪಾರ್ಕ್ ಅಭಿವೃದ್ಧಿ ಮಾಡಲಾಗಿದ್ದು, ಕಾಮಗಾರಿ ಕಳಪೆಯಾಗಿದೆ’ ಎಂದು ಅಲ್ಲಿನ ನಿವಾಸಿಗಳು ದೂರಿದರು.</p>.<p>ಬಿಟಿಡಿಎಗೆ ಸಂಬಂಧಿಸಿದ ವಿವಿಧ ಸಂತ್ರಸ್ತರಿಂದ ನಿವೇಶನಕ್ಕಾಗಿ 29 ಅರ್ಜಿಗಳು ಬಂದಿದ್ದರೆ, ನಗರಸಭೆಗೆ 4, ಕೆ.ಪಿ.ಟಿ.ಸಿ.ಎಲ್, ಸಾರಿಗೆ ಸಂಸ್ಥೆ, ಉಪವಿಭಾಗಾಧಿಕಾರಿ ಕಚೇರಿ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಣ್ಣ ನೀರಾವರಿ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ತಲಾ ಒಂದು ಅರ್ಜಿಗಳು ಸಲ್ಲಿಕೆಯಾಗಿವೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ್ ಅಮರೇಶ ಪಮ್ಮಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಮನೆ ಮುಳುಗಡೆಯಾಗಿ ಸಂತ್ರಸ್ತರಾಗಿದ್ದೇವೆ. ಬಾಡಿಗೆಯಲ್ಲಿದ್ದ ಮನೆ ಮುಳುಗಡೆಯಾಗಿ ಅತಂತ್ರರಾಗಿದ್ದೇವೆ. ನಿವೇಶನಕ್ಕಾಗಿ ಬಿಟಿಡಿಎಗೆ ಅಲೆದಾಡುವುದೇ ಆಗಿದೆ. ಕೂಡಲೇ ನಿವೇಶನ ಕೊಡಿಸಬೇಕು’ ಎಂದು ಜನಸ್ಪಂದನಕ್ಕೆ ಬಂದಿದ್ದ ಅರ್ಧಕ್ಕೂ ಹೆಚ್ಚು ಜನರು ಮನವಿ ಸಲ್ಲಿಸಿದರು.</p>.<p>ನವನಗರದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು ಸ್ವೀಕೃತವಾದ 40 ಅರ್ಜಿಗಳಲ್ಲಿ 29 ಅರ್ಜಿಗಳು ನಿವೇಶನಕ್ಕೆ ಸಂಬಂಧಿಸಿದವೇ ಆಗಿದ್ದವು.</p>.<p>‘ಹಲವಾರು ವರ್ಷಗಳಿಂದ ದಾಖಲೆ ಹಿಡಿದುಕೊಂಡು ಬಿಟಿಡಿಎಗೆ ಅಲೆದಾಡುತ್ತಿದ್ದೇವೆ. ಅರ್ಜಿಯನ್ನೂ ಸಲ್ಲಿದಿದ್ದೇವೆ. ಆದರೆ, ಅವುಗಳು ಇತ್ಯರ್ಥವಾಗಿಲ್ಲ’ ಎಂದು ದೂರಿದರು.</p>.<p>ಶಾಸಕ ಎಚ್.ವೈ. ಮೇಟಿ ಮಾತನಾಡಿ, ‘ಸೂಕ್ತ ದಾಖಲೆಗಳೊಂದಿಗೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಕೆ ಮಾಡಿ. ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ನಿವೇಶನ ನೀಡಲು ಕ್ರಮಕೈಗೊಳ್ಳಲಾಗುವುದು. ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ’ ಎಂದರು.</p>.<p>‘ಅರ್ಜಿ ಸಲ್ಲಿಸಿದವರಿಗೆ ಯಾವ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಲಾಗಿದೆ. ಅವರು ದಾಖಲೆಗಳನ್ನು ಸಲ್ಲಿಸಿದರೆ, ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದು ಬಿಟಿಡಿಎ ಅಧಿಕಾರಿ ಭರವಸೆ ನೀಡಿದರು.</p>.<p>ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ‘ಸಾರ್ವಜನಿಕರು ಹೊತ್ತು ತಂದ ಕುಂದು-ಕೊರತೆ ಹಾಗೂ ಅಹವಾಲುಗಳಿಗೆ ಸ್ಪಂದಿಸುವ ಕೆಲಸವಾಗಬೇಕು.ಮೊದಲ ಹಂತದಲ್ಲಿ ತಾಲ್ಲೂಕಿನ ರಾಂಪುರ ಮತ್ತು ಸೀಮಿಕೇರಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿದ್ದು, ಸ್ವೀಕೃತಗೊಂಡ ಎಲ್ಲ ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ, ‘ತಾಲ್ಲೂಕು ಹಂತದಲ್ಲಿ ಬಂದ ಅರ್ಜಿಗಳ ಮೇಲೆ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ಕಾರ್ಯಾಲಯದಿಂದ ಪರಿಶೀಲನೆ ಮಾಡಲಾಗುತ್ತಿದ್ದು, ಅರ್ಜಿಗಳಿಗೆ ತುರ್ತಾಗಿ ಇತ್ಯರ್ಥಗೊಳಿಸಬೇಕು’ ಎಂದು ಹೇಳಿದರು.</p>.<p>‘ಪದ್ಮನಯನ ನಗರದ ಬಸ್ ನಿಲ್ಲಿಸಬೇಕು ಎಂದು ಆದೇಶವಾಗಿದೆ. ಆದರೆ, ಯಾವುದೇ ಬಸ್ಗಳು ನಿಲುಗಡೆ ಮಾಡುವುದಿಲ್ಲ. ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಪಾರ್ಕ್ ಅಭಿವೃದ್ಧಿ ಮಾಡಲಾಗಿದ್ದು, ಕಾಮಗಾರಿ ಕಳಪೆಯಾಗಿದೆ’ ಎಂದು ಅಲ್ಲಿನ ನಿವಾಸಿಗಳು ದೂರಿದರು.</p>.<p>ಬಿಟಿಡಿಎಗೆ ಸಂಬಂಧಿಸಿದ ವಿವಿಧ ಸಂತ್ರಸ್ತರಿಂದ ನಿವೇಶನಕ್ಕಾಗಿ 29 ಅರ್ಜಿಗಳು ಬಂದಿದ್ದರೆ, ನಗರಸಭೆಗೆ 4, ಕೆ.ಪಿ.ಟಿ.ಸಿ.ಎಲ್, ಸಾರಿಗೆ ಸಂಸ್ಥೆ, ಉಪವಿಭಾಗಾಧಿಕಾರಿ ಕಚೇರಿ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಣ್ಣ ನೀರಾವರಿ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ತಲಾ ಒಂದು ಅರ್ಜಿಗಳು ಸಲ್ಲಿಕೆಯಾಗಿವೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ್ ಅಮರೇಶ ಪಮ್ಮಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>