ಮಲಪ್ರಭಾ ನದಿಗೆ ಕೊರತೆಯಾಗುವ ನೀರನ್ನು ಮಹಾದಾಯಿ, ಕಾಳಿ, ಘಟಪ್ರಭಾ ಹಾಗೂ ಕೃಷ್ಣ ನದಿಗಳ ಮೂಲಕ ನೀಗಿಸಬಹುದು. ಎಂ.ಆರ್.ಎನ್ (ನಿರಾಣಿ) ಫೌಂಡೇಷನ್ ಮೂಲಕ 3 ಯೋಜನೆಗಳ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅಮೃತಧಾರೆ ಯೋಜನೆಯಡಿ ಕಾಳಿ ನದಿಯಿಂದ ಮಲಪ್ರಭಾಗೆ ಕಡಿಮೆ ವಿದ್ಯುತ್ ಬಳಸಿ ಕಾಲುವೆ ಮೂಲಕ ಅಥವಾ ರಸ್ತೆ ಬದಿ ಏತ ನೀರಾವರಿ ಪದ್ಧತಿ ಪೈಪಲೈನ್ ಮೂಲಕ 30 ಟಿಎಂಸಿ ಅಡಿ ನೀರು ಹರಿಸಬಹುದು.