ನಾಲ್ಕೈದು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಎಲ್ಲಾ ರಸ್ತೆಗಳು ಕೆಸರಿನಿಂದ ತುಂಬಿಕೊಂಡಿದ್ದು, ಜನರಿಗೆ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಜಮೀನಿಗೆ ತೆರಳುವ ರಸ್ತೆಯಂತೆ ಕಾಣುವ ರಾಜ್ಯ ಹೆದ್ದಾರಿ ಎಂದರೆ ಆಶ್ಚರ್ಯವಾದೀತು! ಹೌದು, ಇದು ಯಡ್ರಾಮಿಯಿಂದ ಮಳ್ಳಿ ಮಾರ್ಗವಾಗಿ ಮಹಾರಾಷ್ಟ್ರ, ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ದುಸ್ಥಿತಿ.