ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆಂದೂರು ತಾಂಡಾದ ನಿವಾಸಿಗಳು ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಹೊರಗಿನವರು ಯಾರೂ ಊರೊಳಗೆ ಬಾರದಂತೆ ತಡೆಯಲು ಮುಳ್ಳಿನ ಬೇಲಿ ಹಾಕಿದ್ದಾರೆ.
ಗ್ರಾಮವನ್ನು ಸಂಪರ್ಕಿಸುವ ಮುಖ್ಯ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ಸ್ವಯಂ ರಕ್ಷಣೆಗೆ ಈ ಕ್ರಮಕ್ಕೆ ಮುಂದಾಗಿದ್ದಾರೆ.
ಬೇರೆ ಬೇರೆ ಊರುಗಳಿಂದ ಯಾರೂ ನಮ್ಮೂರಿಗೆ ಈಗ ಬರಲೇಬೇಡಿ ಎಂದು ಮನವಿ ಮಾಡುತ್ತಿದ್ದಾರೆ.