<p><strong>ರಬಕವಿ ಬನಹಟ್ಟಿ:</strong> ರಬಕವಿ ರಾಮಪುರ ಮಧ್ಯದಲ್ಲಿಯ ಹಳ್ಳಕ್ಕೆ ನಿರ್ಮಾಣ ಮಾಡಲಾದ ಸೇತುವೆಯಿಂದ ಬನಹಟ್ಟಿಯ ಪೊಲೀಸ್ ಠಾಣೆಯವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಪ್ರತಿ ಅಡಿಗೆ ಒಂದು ತೆಗ್ಗು ಇಲ್ಲವೆ ದಿಣ್ಣೆಗಳು ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದೆ.</p>.<p>ವಿಧಾನ ಸಭೆಯ ಚುನಾವಣೆಗಿಂತ ಅರು ತಿಂಗಳ ಮೊದಲು ರಸ್ತೆ ಅಭಿವೃದ್ಧಿ ಕಾಮಗಾರಿ ₹2 ಕೋಟಿಗೆ ಟೆಂಡರ್ ಆಗಿದ್ದು, ನಂತರ ಸ್ಥಳೀಯ ಶಾಸಕ ಸಿದ್ದು ಸವದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ಟೆಂಡರ್ ಆಗಿ ಒಂದು ವರ್ಷವಾದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ.</p>.<p>ಇದು ರಬಕವಿ ರಾಮಪುರ ಮತ್ತು ಬನಹಟ್ಟಿಯ ನಗರದ ಪ್ರಮುಖ ರಸ್ತೆ. ದಿನನಿತ್ಯ ಸಾವಿರಾರು ಜನರು, ವಿವಿಧ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಆಸ್ಪತ್ರೆಗಳಿಗೆ ತೆರಳುವ ರೋಗಿಗಳು ನಿರಂತರವಾಗಿ ಈ ರಸ್ತೆ ಮೂಲಕ ಸಂಚರಿಸುತ್ತಾರೆ. ಸೈಕಲ್ ಮೇಲೆ ಸಂಚಾರ ಮಾಡುವ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗಿದೆ. ತೆಗ್ಗು ದಿಣ್ಣೆಗಳಿಂದ ಕೂಡಿದ ರಸ್ತೆಯಲ್ಲಿ ವಾಹನ ಸವಾರರು ದಿನನಿತ್ಯ ಚಿಕ್ಕಪುಟ್ಟ ಅಪಘಾತಗಳಿಗೆ ಒಳಗಾಗುತ್ತಿದ್ದಾರೆ. ರಸ್ತೆ ಹದಗೆಟ್ಟಿದ್ದರಿಂದ ಹಾಗೂ ಸವಾರರು ಬೇಕಾಬಿಟ್ಟಿ ವಾಹನ ಚಲಾಯಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.</p>.<p>ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಆದಷ್ಟು ಬೇಗನೆ ಇಲ್ಲಿಯ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದು ಸ್ಥಳೀಯರಾದ ಬಸವರಾಜ ಪುಟಾಣಿ, ವೆಂಕಟೇಶ ನಿಂಗಸಾನಿ, ವಿಕಾಸ ಹೂಗಾರ, ರಾಘವೇಂದ್ರ ಗೊಳಸಂಗಿ, ಬಸಪ್ರಭು ಹಟ್ಟಿ ಆಗ್ರಹಿಸಿದ್ದಾರೆ.</p>.<p>ಇಲ್ಲಿಯ ಬೀದಿ ದೀಪಗಳು ಸಾಕಷ್ಟು ಬೆಳಕನ್ನು ನೀಡದೆ ಇರುವುದರಿಂದ ರಾತ್ರಿ ತೊಂದರೆ ಆಗುತ್ತಿದೆ. ರಸ್ತೆಯ ಮಧ್ಯದಲ್ಲಿಯ ಯುಜಿಡಿ ಯೋಜನೆಯ ಮ್ಯಾನ್ ಹೋಲ್ಗಳಿಂದಲೂ ಸಮಸ್ಯೆಯಾಗಿದೆ. ಇವು ಕೂಡಾ ರಸ್ತೆಯನ್ನು ಹದಗೆಡಿಸಿವೆ ಎನ್ನುತ್ತಾರೆ ಸಾರ್ವಜನಿಕರು.</p>.<div><blockquote>ಇಲ್ಲಿ ಅಳವಡಿಸಲಾದ ಬೀದಿದೀಪಗಳ ಕುರಿತು ಪರಿಶೀಲನೆ ನಡೆಸಿ ಸಮರ್ಪಕ ಬೆಳಕು ನೀಡುವ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ತೆಗೆದುಕೊಳ್ಳಲಾಗುವುದು</blockquote><span class="attribution"> –ಜಗದೀಶ ಈಟಿ ಪಾರಾಯುಕ್ತ ರಬಕವಿ ಬನಹಟ್ಟಿ</span></div>.<div><blockquote>ಟೆಂಡರ್ ಆಗಿ ಭೂಮಿಪೂಜೆ ನಡೆದರೂ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು </blockquote><span class="attribution">–ಸಂಜಯ ತೆಗ್ಗಿ ನಗರಸಭೆಯ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ರಬಕವಿ ರಾಮಪುರ ಮಧ್ಯದಲ್ಲಿಯ ಹಳ್ಳಕ್ಕೆ ನಿರ್ಮಾಣ ಮಾಡಲಾದ ಸೇತುವೆಯಿಂದ ಬನಹಟ್ಟಿಯ ಪೊಲೀಸ್ ಠಾಣೆಯವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಪ್ರತಿ ಅಡಿಗೆ ಒಂದು ತೆಗ್ಗು ಇಲ್ಲವೆ ದಿಣ್ಣೆಗಳು ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದೆ.</p>.<p>ವಿಧಾನ ಸಭೆಯ ಚುನಾವಣೆಗಿಂತ ಅರು ತಿಂಗಳ ಮೊದಲು ರಸ್ತೆ ಅಭಿವೃದ್ಧಿ ಕಾಮಗಾರಿ ₹2 ಕೋಟಿಗೆ ಟೆಂಡರ್ ಆಗಿದ್ದು, ನಂತರ ಸ್ಥಳೀಯ ಶಾಸಕ ಸಿದ್ದು ಸವದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ಟೆಂಡರ್ ಆಗಿ ಒಂದು ವರ್ಷವಾದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ.</p>.<p>ಇದು ರಬಕವಿ ರಾಮಪುರ ಮತ್ತು ಬನಹಟ್ಟಿಯ ನಗರದ ಪ್ರಮುಖ ರಸ್ತೆ. ದಿನನಿತ್ಯ ಸಾವಿರಾರು ಜನರು, ವಿವಿಧ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಆಸ್ಪತ್ರೆಗಳಿಗೆ ತೆರಳುವ ರೋಗಿಗಳು ನಿರಂತರವಾಗಿ ಈ ರಸ್ತೆ ಮೂಲಕ ಸಂಚರಿಸುತ್ತಾರೆ. ಸೈಕಲ್ ಮೇಲೆ ಸಂಚಾರ ಮಾಡುವ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗಿದೆ. ತೆಗ್ಗು ದಿಣ್ಣೆಗಳಿಂದ ಕೂಡಿದ ರಸ್ತೆಯಲ್ಲಿ ವಾಹನ ಸವಾರರು ದಿನನಿತ್ಯ ಚಿಕ್ಕಪುಟ್ಟ ಅಪಘಾತಗಳಿಗೆ ಒಳಗಾಗುತ್ತಿದ್ದಾರೆ. ರಸ್ತೆ ಹದಗೆಟ್ಟಿದ್ದರಿಂದ ಹಾಗೂ ಸವಾರರು ಬೇಕಾಬಿಟ್ಟಿ ವಾಹನ ಚಲಾಯಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.</p>.<p>ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಆದಷ್ಟು ಬೇಗನೆ ಇಲ್ಲಿಯ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದು ಸ್ಥಳೀಯರಾದ ಬಸವರಾಜ ಪುಟಾಣಿ, ವೆಂಕಟೇಶ ನಿಂಗಸಾನಿ, ವಿಕಾಸ ಹೂಗಾರ, ರಾಘವೇಂದ್ರ ಗೊಳಸಂಗಿ, ಬಸಪ್ರಭು ಹಟ್ಟಿ ಆಗ್ರಹಿಸಿದ್ದಾರೆ.</p>.<p>ಇಲ್ಲಿಯ ಬೀದಿ ದೀಪಗಳು ಸಾಕಷ್ಟು ಬೆಳಕನ್ನು ನೀಡದೆ ಇರುವುದರಿಂದ ರಾತ್ರಿ ತೊಂದರೆ ಆಗುತ್ತಿದೆ. ರಸ್ತೆಯ ಮಧ್ಯದಲ್ಲಿಯ ಯುಜಿಡಿ ಯೋಜನೆಯ ಮ್ಯಾನ್ ಹೋಲ್ಗಳಿಂದಲೂ ಸಮಸ್ಯೆಯಾಗಿದೆ. ಇವು ಕೂಡಾ ರಸ್ತೆಯನ್ನು ಹದಗೆಡಿಸಿವೆ ಎನ್ನುತ್ತಾರೆ ಸಾರ್ವಜನಿಕರು.</p>.<div><blockquote>ಇಲ್ಲಿ ಅಳವಡಿಸಲಾದ ಬೀದಿದೀಪಗಳ ಕುರಿತು ಪರಿಶೀಲನೆ ನಡೆಸಿ ಸಮರ್ಪಕ ಬೆಳಕು ನೀಡುವ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ತೆಗೆದುಕೊಳ್ಳಲಾಗುವುದು</blockquote><span class="attribution"> –ಜಗದೀಶ ಈಟಿ ಪಾರಾಯುಕ್ತ ರಬಕವಿ ಬನಹಟ್ಟಿ</span></div>.<div><blockquote>ಟೆಂಡರ್ ಆಗಿ ಭೂಮಿಪೂಜೆ ನಡೆದರೂ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು </blockquote><span class="attribution">–ಸಂಜಯ ತೆಗ್ಗಿ ನಗರಸಭೆಯ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>