<p>ಬಾಗಲಕೋಟೆ: ಮೊಣಕಾಲು, ಕೀಲು ಸಮಸ್ಯೆಗಳನ್ನು ನಿರ್ಲಕ್ಷಿಸದೇ, ಆರಂಭದಲ್ಲಿಯೇ ಲಭ್ಯವಿರುವ ಅತ್ಯಾಧುನಿಕ ಚಿಕಿತ್ಸೆಗಳ ಲಾಭ ಪಡೆದುಕೊಳ್ಳಬೇಕು ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಮೂಳೆಚಿಕಿತ್ಸೆ ಮತ್ತು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಸುನಿಲ್ ಕಿಣಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕೀರ್ಣವಾದ ಮೊಣಕಾಲು, ಸೊಂಟದ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಮೆಕೊ ಮತ್ತು ಕ್ಯೂವಿಸ್ನಂತಹ ಮುಂದುವರಿದ ತಂತ್ರಜ್ಞಾನದ ರೋಬೋಟಿಕ್ ಚಾಲಿತ ಜಾಯಿಂಟ್ ರಿಪ್ಲೇಸ್ಮೆಂಟ್ ವ್ಯವಸ್ಥೆಗಳಿವೆ ಎಂದರು.</p>.<p>ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆ ಎರಡೂವರೆ ವರಷಗಳಿಂದ ರೋಬೋಟಿಕ್ ಚಾಲಿತ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದೆ. ನಿಖರವಾದ ಚಿಕಿತ್ಸೆ ಲಭಿಸುತ್ತದೆ. ಹಾಗೆಯೇ ಶೀಘ್ರವೇ ಚೇತರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.</p>.<p>ನಿರಂತರ ಕೀಲು ನೋವನ್ನು ನಿರ್ಲಕ್ಷಿಸಬಾರದು. ಶಸ್ತ್ರಚಿಕಿತ್ಸೆಗೆ ಒಳಗಾಗಲು ವಯಸ್ಸಿನ ಮಿತಿ ಇರುವುದಿಲ್ಲ. ಜೀವನದ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಮೊಣಕಾಲು, ಕೀಲು ಸಮಸ್ಯೆಗಳನ್ನು ನಿರ್ಲಕ್ಷಿಸದೇ, ಆರಂಭದಲ್ಲಿಯೇ ಲಭ್ಯವಿರುವ ಅತ್ಯಾಧುನಿಕ ಚಿಕಿತ್ಸೆಗಳ ಲಾಭ ಪಡೆದುಕೊಳ್ಳಬೇಕು ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಮೂಳೆಚಿಕಿತ್ಸೆ ಮತ್ತು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಸುನಿಲ್ ಕಿಣಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕೀರ್ಣವಾದ ಮೊಣಕಾಲು, ಸೊಂಟದ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಮೆಕೊ ಮತ್ತು ಕ್ಯೂವಿಸ್ನಂತಹ ಮುಂದುವರಿದ ತಂತ್ರಜ್ಞಾನದ ರೋಬೋಟಿಕ್ ಚಾಲಿತ ಜಾಯಿಂಟ್ ರಿಪ್ಲೇಸ್ಮೆಂಟ್ ವ್ಯವಸ್ಥೆಗಳಿವೆ ಎಂದರು.</p>.<p>ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆ ಎರಡೂವರೆ ವರಷಗಳಿಂದ ರೋಬೋಟಿಕ್ ಚಾಲಿತ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದೆ. ನಿಖರವಾದ ಚಿಕಿತ್ಸೆ ಲಭಿಸುತ್ತದೆ. ಹಾಗೆಯೇ ಶೀಘ್ರವೇ ಚೇತರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.</p>.<p>ನಿರಂತರ ಕೀಲು ನೋವನ್ನು ನಿರ್ಲಕ್ಷಿಸಬಾರದು. ಶಸ್ತ್ರಚಿಕಿತ್ಸೆಗೆ ಒಳಗಾಗಲು ವಯಸ್ಸಿನ ಮಿತಿ ಇರುವುದಿಲ್ಲ. ಜೀವನದ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>