<p><strong>ಬಾಗಲಕೋಟೆ:</strong> ಬಿಜೆಪಿ ಹೈಕಮಾಂಡ್ ರಾಜಾಹುಲಿಯನ್ನು (ಸಿಎಂ ಬಿ.ಎಸ್.ಯಡಿಯೂರಪ್ಪ) ಬೋನಿನಿಂದ ಹೊರಬಿಡುತ್ತಿಲ್ಲ. ಹೀಗಾಗಿಯೇ ಸಂಪುಟ ಪುನಾರಚನೆ ವಿಚಾರ ಕಗ್ಗಂಟಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಶುಕ್ರವಾರ ಇಲ್ಲಿ ವ್ಯಂಗ್ಯವಾಡಿದರು.</p>.<p>‘ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತೆ’ ಎಂದು ಹಿಂದೆ ಜನ ಮಾತಾಡುತ್ತಿದ್ರು. ಆದರೆ ಈಗ ಯಾಕೆ ಯಡಿಯೂರಪ್ಪ ಹೈಕಮಾಂಡ್ ಮರ್ಜಿ ಕಾಯುತ್ತಿದ್ದಾರೋ ಗೊತ್ತಿಲ್ಲ ಎಂದು ಛೇಡಿಸಿದರು.</p>.<p>ಯಡಿಯೂರಪ್ಪಗೆ ರಾಜಾಹುಲಿ ಎಂದು ಕರೆಯುತ್ತಾರೆ. ಅವರು ಹಿರಿಯರಿದ್ದಾರೆ. ನನಗೂ ಅವರ ಬಗ್ಗೆ ಗೌರವವಿದೆ. ನಿಜಲಿಂಗಪ್ಪನವರ ಹಾಗೆ ನಾಲ್ಕು ಬಾರಿ ಸಿಎಂ ಆಗಿದ್ದಾರೆ. ಆದರೆ ಕೆಲಸ ಮಾಡಲು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಅವಕಾಶ ಕೊಡುತ್ತಿಲ್ಲ. ಹಾಗೆಂದು ನಾನು ಯಡಿಯೂರಪ್ಪ ಸಲುವಾಗಿ ಮರುಕ ಪಡೋದಿಲ್ಲ.</p>.<p>ರಾಜ್ಯದ ಜನತೆ ಹಿತ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಬೇಗನೇ ಮಂತ್ರಿಮಂಡಲ ರಚನೆ ಮಾಡಲು ಬಿಜೆಪಿಯವರು ಯಡಿಯೂರಪ್ಪಗೆ ಅವಕಾಶ ಮಾಡಿಕೊಡಬೇಕು ಎಂದರು.</p>.<p><strong>ರಾಜ್ಯದ ಖಜಾನೆ ಖಾಲಿಯಾಗಿದೆ</strong></p>.<p>ರಾಜ್ಯದ ಹಣಕಾಸು ಪರಿಸ್ಥಿತಿ ಸರಿಯಿಲ್ಲ. ಕೆಳಮನೆ, ಮೇಲ್ಮನೆ ಶಾಸಕರು 300 ಜನರಿದ್ದೇವೆ.ವರ್ಷಕ್ಕೆ ₹ 2 ಕೋಟಿ ಪ್ರದೇಶಾಭಿವೃದ್ಧಿ ನಿಧಿ ಕೊಡಬೇಕು ಎಂದು ಒತ್ತಾಯಿಸಿದರು.</p>.<p>2019-20ನೇ ಸಾಲಿನ ಹಣಕಾಸು ವರ್ಷದ 10 ತಿಂಗಳು ಈಗಾಗಲೇ ಗತಿಸಿದೆ. ಹಣಕಾಸು ವರ್ಷ ಮುಗಿಯುವುದಕ್ಕೆ ಎರಡು ತಿಂಗಳು ಬಾಕಿ ಉಳಿದಿದೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ₹ 2 ಕೋಟಿಯಲ್ಲಿ ₹ 50 ಲಕ್ಷ ಮಾತ್ರ ಕೊಟ್ಟಿದ್ದಾರೆ. ಉಳಿದ ಹಣ ಇನ್ನೂ ಕೊಟ್ಟಿಲ್ಲ ಎಂದು ನುಡಿದರು.</p>.<p>ಹಿಂದಿನ ಸಾಲಿನ ₹ 39 ಲಕ್ಷ ಹಣ ಇನ್ನು ಬಂದಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ ಅನ್ನೋದಕ್ಕೆ ಇದೊಂದೇ ನಿದರ್ಶನ ಸಾಕಲ್ಲವೇ? ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಿಜೆಪಿ ಹೈಕಮಾಂಡ್ ರಾಜಾಹುಲಿಯನ್ನು (ಸಿಎಂ ಬಿ.ಎಸ್.ಯಡಿಯೂರಪ್ಪ) ಬೋನಿನಿಂದ ಹೊರಬಿಡುತ್ತಿಲ್ಲ. ಹೀಗಾಗಿಯೇ ಸಂಪುಟ ಪುನಾರಚನೆ ವಿಚಾರ ಕಗ್ಗಂಟಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಶುಕ್ರವಾರ ಇಲ್ಲಿ ವ್ಯಂಗ್ಯವಾಡಿದರು.</p>.<p>‘ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತೆ’ ಎಂದು ಹಿಂದೆ ಜನ ಮಾತಾಡುತ್ತಿದ್ರು. ಆದರೆ ಈಗ ಯಾಕೆ ಯಡಿಯೂರಪ್ಪ ಹೈಕಮಾಂಡ್ ಮರ್ಜಿ ಕಾಯುತ್ತಿದ್ದಾರೋ ಗೊತ್ತಿಲ್ಲ ಎಂದು ಛೇಡಿಸಿದರು.</p>.<p>ಯಡಿಯೂರಪ್ಪಗೆ ರಾಜಾಹುಲಿ ಎಂದು ಕರೆಯುತ್ತಾರೆ. ಅವರು ಹಿರಿಯರಿದ್ದಾರೆ. ನನಗೂ ಅವರ ಬಗ್ಗೆ ಗೌರವವಿದೆ. ನಿಜಲಿಂಗಪ್ಪನವರ ಹಾಗೆ ನಾಲ್ಕು ಬಾರಿ ಸಿಎಂ ಆಗಿದ್ದಾರೆ. ಆದರೆ ಕೆಲಸ ಮಾಡಲು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಅವಕಾಶ ಕೊಡುತ್ತಿಲ್ಲ. ಹಾಗೆಂದು ನಾನು ಯಡಿಯೂರಪ್ಪ ಸಲುವಾಗಿ ಮರುಕ ಪಡೋದಿಲ್ಲ.</p>.<p>ರಾಜ್ಯದ ಜನತೆ ಹಿತ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಬೇಗನೇ ಮಂತ್ರಿಮಂಡಲ ರಚನೆ ಮಾಡಲು ಬಿಜೆಪಿಯವರು ಯಡಿಯೂರಪ್ಪಗೆ ಅವಕಾಶ ಮಾಡಿಕೊಡಬೇಕು ಎಂದರು.</p>.<p><strong>ರಾಜ್ಯದ ಖಜಾನೆ ಖಾಲಿಯಾಗಿದೆ</strong></p>.<p>ರಾಜ್ಯದ ಹಣಕಾಸು ಪರಿಸ್ಥಿತಿ ಸರಿಯಿಲ್ಲ. ಕೆಳಮನೆ, ಮೇಲ್ಮನೆ ಶಾಸಕರು 300 ಜನರಿದ್ದೇವೆ.ವರ್ಷಕ್ಕೆ ₹ 2 ಕೋಟಿ ಪ್ರದೇಶಾಭಿವೃದ್ಧಿ ನಿಧಿ ಕೊಡಬೇಕು ಎಂದು ಒತ್ತಾಯಿಸಿದರು.</p>.<p>2019-20ನೇ ಸಾಲಿನ ಹಣಕಾಸು ವರ್ಷದ 10 ತಿಂಗಳು ಈಗಾಗಲೇ ಗತಿಸಿದೆ. ಹಣಕಾಸು ವರ್ಷ ಮುಗಿಯುವುದಕ್ಕೆ ಎರಡು ತಿಂಗಳು ಬಾಕಿ ಉಳಿದಿದೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ₹ 2 ಕೋಟಿಯಲ್ಲಿ ₹ 50 ಲಕ್ಷ ಮಾತ್ರ ಕೊಟ್ಟಿದ್ದಾರೆ. ಉಳಿದ ಹಣ ಇನ್ನೂ ಕೊಟ್ಟಿಲ್ಲ ಎಂದು ನುಡಿದರು.</p>.<p>ಹಿಂದಿನ ಸಾಲಿನ ₹ 39 ಲಕ್ಷ ಹಣ ಇನ್ನು ಬಂದಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ ಅನ್ನೋದಕ್ಕೆ ಇದೊಂದೇ ನಿದರ್ಶನ ಸಾಕಲ್ಲವೇ? ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>