<p><strong>ಮಹಾಲಿಂಗಪುರ</strong>: ‘ಕರ್ನಾಟಕದಲ್ಲಿ ಕೇಂದ್ರ ಸರ್ಕಾರದಿಂದ ಧನಸಹಾಯ ಪಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ಸಹಾಯವನ್ನು ಒದಗಿಸುತ್ತದೆ’ ಎಂದು ಜಿಲ್ಲಾ ಆಸ್ಪತ್ರೆಯ ಸಖಿ ಒನ್ ಸ್ಟಾಪ್ ಕೇಂದ್ರದ ಆಡಳಿತಾಧಿಕಾರಿ ಶಂಕ್ರಮ್ಮ ಜುಮ್ಮನಕಟ್ಟಿ ಹೇಳಿದರು.</p>.<p>ಸಮೀಪದ ರನ್ನಬೆಳಗಲಿಯ ಸಿದ್ಧಾರೂಢ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯ ಸಖಿ ಒನ್ ಸ್ಟಾಪ್ ಕೇಂದ್ರದಿಂದ ಬುಧವಾರ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಿಂಸಾಚಾರವನ್ನು ಅನುಭವಿಸಿದ ಅಥವಾ ಎದುರಿಸುತ್ತಿರುವ ಮಹಿಳೆಯರಿಗೆ ಸಮಗ್ರ ಬೆಂಬಲವನ್ನು ಒದಗಿಸುವುದು ಸಖಿ ಕೇಂದ್ರಗಳ ಪ್ರಾಥಮಿಕ ಉದ್ದೇಶವಾಗಿದೆ’ ಎಂದರು.</p>.<p>ಪ್ರಭಾರ ಮುಖ್ಯಶಿಕ್ಷಕಿ ಎಸ್.ಎಸ್.ಉದಪುಡಿ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಸಲಹೆಗಾರ್ತಿ ಸೀಮಾ ಇದ್ದಲಗಿ, ರೇಖಾ ನರಹಟ್ಟಿ, ಎಂ.ಬಿ.ಮುರಗೋಡ, ಪಿ.ಕೆ.ಪವಾರ, ವಿ.ಎಂ.ಹೊಸೂರ, ಎಲ್.ವೈ.ಶಾಸ್ತ್ರಿ, ಎಲ್.ಕೆ.ಮಂಟೂರ, ಎಸ್.ಎಂ.ಮೇಘಾಡಿ, ಸುಜಾತ ಬಿಸ್ಟನ್ನವರ, ಶ್ರೀಶೈಲ ಕಾಡದೇವರ, ಕಿರಣ ಪವಾರ, ರವಿ ಹಿರೇಕಲ್ಮಠ, ಬಾಲಕೃಷ್ಣ ಚೋಪಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ‘ಕರ್ನಾಟಕದಲ್ಲಿ ಕೇಂದ್ರ ಸರ್ಕಾರದಿಂದ ಧನಸಹಾಯ ಪಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ಸಹಾಯವನ್ನು ಒದಗಿಸುತ್ತದೆ’ ಎಂದು ಜಿಲ್ಲಾ ಆಸ್ಪತ್ರೆಯ ಸಖಿ ಒನ್ ಸ್ಟಾಪ್ ಕೇಂದ್ರದ ಆಡಳಿತಾಧಿಕಾರಿ ಶಂಕ್ರಮ್ಮ ಜುಮ್ಮನಕಟ್ಟಿ ಹೇಳಿದರು.</p>.<p>ಸಮೀಪದ ರನ್ನಬೆಳಗಲಿಯ ಸಿದ್ಧಾರೂಢ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯ ಸಖಿ ಒನ್ ಸ್ಟಾಪ್ ಕೇಂದ್ರದಿಂದ ಬುಧವಾರ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಿಂಸಾಚಾರವನ್ನು ಅನುಭವಿಸಿದ ಅಥವಾ ಎದುರಿಸುತ್ತಿರುವ ಮಹಿಳೆಯರಿಗೆ ಸಮಗ್ರ ಬೆಂಬಲವನ್ನು ಒದಗಿಸುವುದು ಸಖಿ ಕೇಂದ್ರಗಳ ಪ್ರಾಥಮಿಕ ಉದ್ದೇಶವಾಗಿದೆ’ ಎಂದರು.</p>.<p>ಪ್ರಭಾರ ಮುಖ್ಯಶಿಕ್ಷಕಿ ಎಸ್.ಎಸ್.ಉದಪುಡಿ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಸಲಹೆಗಾರ್ತಿ ಸೀಮಾ ಇದ್ದಲಗಿ, ರೇಖಾ ನರಹಟ್ಟಿ, ಎಂ.ಬಿ.ಮುರಗೋಡ, ಪಿ.ಕೆ.ಪವಾರ, ವಿ.ಎಂ.ಹೊಸೂರ, ಎಲ್.ವೈ.ಶಾಸ್ತ್ರಿ, ಎಲ್.ಕೆ.ಮಂಟೂರ, ಎಸ್.ಎಂ.ಮೇಘಾಡಿ, ಸುಜಾತ ಬಿಸ್ಟನ್ನವರ, ಶ್ರೀಶೈಲ ಕಾಡದೇವರ, ಕಿರಣ ಪವಾರ, ರವಿ ಹಿರೇಕಲ್ಮಠ, ಬಾಲಕೃಷ್ಣ ಚೋಪಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>