<p><strong>ಬಾಗಲಕೋಟೆ</strong>: ಶಿಕ್ಷಣದ ಮಹತ್ವ ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಬೇಕು ಎಂಬುದು ಸಂತ ಸೇವಾಲಾಲರ ಆಶಯವಾಗಿತ್ತು. ಸ್ವಾಭಿಮಾನದ ಬದುಕು ಸಾಗಿಸಲು ಶಿಕ್ಷಣವೇ ಮಾರ್ಗ ಎಂದಿದ್ದರು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.</p>.<p>ಶಿವಾನಂದ ಜಿನ್ನಲ್ಲಿರುವ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು. ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವ ಹೊಂದಿರಬೇಕು ಎಂದಿದ್ದರು.</p>.<p>ಡಾ.ಎಂ.ಎಸ್. ದಡ್ಡೆನವರ, ನಗರಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಬಸವರಾಜ ಯಂಕಂಚಿ, ಶಿವಾನಂದ ಟವಳಿ, ಸತ್ಯನಾರಾಯಣ ಹೇಮಾದ್ರಿ, ಗುಂಡುರಾವ್ ಶಿಂದೆ, ಅಂಭಾಜಿ ಜೋಷಿ, ಶಿವಾನಂದ ರಾಠೋಡ, ದೀಲಿಪ್ ರಾಠೋಡ, ಗಂಗಾರಾಮ ಚವ್ಹಾಣ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಶಿಕ್ಷಣದ ಮಹತ್ವ ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಬೇಕು ಎಂಬುದು ಸಂತ ಸೇವಾಲಾಲರ ಆಶಯವಾಗಿತ್ತು. ಸ್ವಾಭಿಮಾನದ ಬದುಕು ಸಾಗಿಸಲು ಶಿಕ್ಷಣವೇ ಮಾರ್ಗ ಎಂದಿದ್ದರು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.</p>.<p>ಶಿವಾನಂದ ಜಿನ್ನಲ್ಲಿರುವ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು. ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವ ಹೊಂದಿರಬೇಕು ಎಂದಿದ್ದರು.</p>.<p>ಡಾ.ಎಂ.ಎಸ್. ದಡ್ಡೆನವರ, ನಗರಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಬಸವರಾಜ ಯಂಕಂಚಿ, ಶಿವಾನಂದ ಟವಳಿ, ಸತ್ಯನಾರಾಯಣ ಹೇಮಾದ್ರಿ, ಗುಂಡುರಾವ್ ಶಿಂದೆ, ಅಂಭಾಜಿ ಜೋಷಿ, ಶಿವಾನಂದ ರಾಠೋಡ, ದೀಲಿಪ್ ರಾಠೋಡ, ಗಂಗಾರಾಮ ಚವ್ಹಾಣ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>