<p><strong>ಬಾಗಲಕೋಟೆ:</strong> ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಗೆಲುವು ತಂದುಕೊಡಲು ಮುಖಂಡರು, ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಮಂಗಳವಾರ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಉಪಚುನಾವಣೆ ಕುರಿತು ಸಮಾಲೋಚನೆ ನಡೆಸಿದ ಅವರು, ಟಿಕೆಟ್ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ನೀವು ಗೆಲ್ಲಿಸಲು ಮುಂದಾಗಿ ಎಂದರು.</p>.<p>ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಗರವೂ ಸೇರಿದಂತೆ ಎಷ್ಟು ಹಳ್ಳಿಗಳು ಬರುತ್ತವೆ. ಪಕ್ಷದ ಸಂಘಟನೆ ಹೇಗಿದೆ ಸೇರಿದಂತೆ ವಿವಿಧ ಮಾಹಿತಿಯನ್ನು ಪಡೆದುಕೊಂಡರು.</p>.<p>ಮುಖಂಡ ಚಂದ್ರಶೇಖರ ರಾಠೋಡ ಮಾತನಾಡಿ, ಚುನಾವಣೆಯಲ್ಲಿ ಎದುರಾಳಿ ಪಕ್ಷದ ನಾಯಕರ ವಿರುದ್ಧ ಹೊಡೆದಾಡಿ ಗೆಲ್ಲಿಸಿರುತ್ತವೆ. ಆದರೆ, ಸರ್ಕಾರ ರಚನೆಯಾಗಿ ಎರಡೂವರೆ ವರ್ಷಗಳಾದರೂ ನಾಮನಿರ್ದೇಶನ ಮಾಡಿಲ್ಲ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.</p>.<p>ಮುಖಂಡ ದ್ಯಾಮಣ್ಣ ಗಾಳಿ ಮಾತನಾಡಿ, ಬಹಳ ವರ್ಷಗಳಿಂದ ಬಾಗಲಕೋಟೆ ವಿಧಾನಸಭೆ ಕ್ಷೇತ್ರ ಬಿಜೆಪಿ ಕೋಟೆಯಾಗಿತ್ತು. ಮೇಟಿ ಅವರು ತಮ್ಮ ಅನುಭವ, ಸಂಘಟನೆ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೆಲುವು ಸಾಧಿಸಿದ್ದರು. ಅವರ ಕುಟುಂಬದವರಿಗೇ ಟಿಕೆಟ್ ನೀಡಬೇಕು ಎಂದು ಹೇಳಿದರು.</p>.<p>ಶಾಸಕ ಜೆ.ಟಿ. ಪಾಟೀಲ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಬುಡಾ ಅಧ್ಯಕ್ಷ ರಜಾಕ್ ಬೇನೂರ, ಮಾಜಿ ಸಚಿವ ಅಜಯಕುಮಾರ ಸರನಾಯಕ, ನಾಗರಾಜ ಹದ್ಲಿ, ಎಸ್.ಎನ್. ರಾಂಪುರ, ಶ್ರೀನಿವಾಸ ಬಳ್ಳಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಗೆಲುವು ತಂದುಕೊಡಲು ಮುಖಂಡರು, ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಮಂಗಳವಾರ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಉಪಚುನಾವಣೆ ಕುರಿತು ಸಮಾಲೋಚನೆ ನಡೆಸಿದ ಅವರು, ಟಿಕೆಟ್ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ನೀವು ಗೆಲ್ಲಿಸಲು ಮುಂದಾಗಿ ಎಂದರು.</p>.<p>ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಗರವೂ ಸೇರಿದಂತೆ ಎಷ್ಟು ಹಳ್ಳಿಗಳು ಬರುತ್ತವೆ. ಪಕ್ಷದ ಸಂಘಟನೆ ಹೇಗಿದೆ ಸೇರಿದಂತೆ ವಿವಿಧ ಮಾಹಿತಿಯನ್ನು ಪಡೆದುಕೊಂಡರು.</p>.<p>ಮುಖಂಡ ಚಂದ್ರಶೇಖರ ರಾಠೋಡ ಮಾತನಾಡಿ, ಚುನಾವಣೆಯಲ್ಲಿ ಎದುರಾಳಿ ಪಕ್ಷದ ನಾಯಕರ ವಿರುದ್ಧ ಹೊಡೆದಾಡಿ ಗೆಲ್ಲಿಸಿರುತ್ತವೆ. ಆದರೆ, ಸರ್ಕಾರ ರಚನೆಯಾಗಿ ಎರಡೂವರೆ ವರ್ಷಗಳಾದರೂ ನಾಮನಿರ್ದೇಶನ ಮಾಡಿಲ್ಲ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.</p>.<p>ಮುಖಂಡ ದ್ಯಾಮಣ್ಣ ಗಾಳಿ ಮಾತನಾಡಿ, ಬಹಳ ವರ್ಷಗಳಿಂದ ಬಾಗಲಕೋಟೆ ವಿಧಾನಸಭೆ ಕ್ಷೇತ್ರ ಬಿಜೆಪಿ ಕೋಟೆಯಾಗಿತ್ತು. ಮೇಟಿ ಅವರು ತಮ್ಮ ಅನುಭವ, ಸಂಘಟನೆ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೆಲುವು ಸಾಧಿಸಿದ್ದರು. ಅವರ ಕುಟುಂಬದವರಿಗೇ ಟಿಕೆಟ್ ನೀಡಬೇಕು ಎಂದು ಹೇಳಿದರು.</p>.<p>ಶಾಸಕ ಜೆ.ಟಿ. ಪಾಟೀಲ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಬುಡಾ ಅಧ್ಯಕ್ಷ ರಜಾಕ್ ಬೇನೂರ, ಮಾಜಿ ಸಚಿವ ಅಜಯಕುಮಾರ ಸರನಾಯಕ, ನಾಗರಾಜ ಹದ್ಲಿ, ಎಸ್.ಎನ್. ರಾಂಪುರ, ಶ್ರೀನಿವಾಸ ಬಳ್ಳಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>