<p><strong>ಇಳಕಲ್</strong> : ‘ಹೆಣ್ಣುಮಕ್ಕಳ ಸಬಲೀಕರಣವು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅರಿತು 175 ವರ್ಷಗಳ ಹಿಂದೆಯೇ ಶಾಲೆ ಆರಂಭಿಸಿದ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಭಾ ಫುಲೆ ದಂಪತಿ ಸ್ಮರಣೀಯರು' ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ನಗರದ ದೀಪು ದೀಕ್ಷಾ ಕ್ರೀಡಾ ಮತ್ತು ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ನಗರಸಭೆ ಹತ್ತಿರದ ಅಂಬೇಡ್ಕರ್ ಭವನದಲ್ಲಿ ಈಚೆಗೆ ನಡೆದ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ದೀಪು ದೀಕ್ಷಾ ಸಂಸ್ಥೆ ಸಮಾಜಮುಖಿ ಕಾರ್ಯಗಳಿಗೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿ, ‘ಸಮಾಜದ ಮೇಲ್ವರ್ಗದ ವಿರೋಧದ ನಡುವೆ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲ ಸ್ವಾಭಿಮಾನದ ಬೀಜ ಬಿತ್ತಿದ ಸಾವಿತ್ರಿಬಾಯಿ ಅವರ ಪ್ರಯತ್ನ ಸದಾ ಸ್ಮರಣೀಯವಾದುದು’ ಎಂದರು.</p>.<p>ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಆರ್.ಮೋಹನರಾಜು ಉಪನ್ಯಾಸ ನೀಡಿದರು.</p>.<p>ಸವಿತಾ ಅಶೋಕ ಚಲವಾದಿ ಪ್ರಾಸ್ತಾವಿಕ ಮಾತನಾಡಿ, ದೀಪು ದೀಕ್ಷಾ ಸಂಸ್ಥೆಯ ಸೇವಾ ಕಾರ್ಯಗಳನ್ನು ವಿವರಿಸಿದರು.</p>.<p>ಗುರುಮಹಾಂತ ಶ್ರೀಗಳು, ನಂದವಾಡಗಿಯ ಚೆನ್ನಬಸವ ದೇಶಿಕೇಂದ್ರ ಶಿವಾಚಾರ್ಯರು ಹಾಗೂ ಹಜರತ್ ಸೈಯ್ಯದ್ ಷಾ ಮುರ್ತುಜ ಶಾ ಖಾದ್ರಿ ದರ್ಗಾ ಸಜ್ಜಾದ ನಶೀನ್ ಪೈಸಲ್ ಪಾಶಾ ಅವರು ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.</p>.<p>ದೀಪು ದೀಕ್ಷಾ ಸಂಸ್ಥೆಯ ಅಧ್ಯಕ್ಷ ಅಶೋಕ ಚಲವಾದಿ, ವಿಜಯಮಹಾಂತೇಶ ಗದ್ದನಕೇರಿ, ಪವಾಡೆಪ್ಪ ಚಲವಾದಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಳಕಲ್</strong> : ‘ಹೆಣ್ಣುಮಕ್ಕಳ ಸಬಲೀಕರಣವು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅರಿತು 175 ವರ್ಷಗಳ ಹಿಂದೆಯೇ ಶಾಲೆ ಆರಂಭಿಸಿದ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಭಾ ಫುಲೆ ದಂಪತಿ ಸ್ಮರಣೀಯರು' ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ನಗರದ ದೀಪು ದೀಕ್ಷಾ ಕ್ರೀಡಾ ಮತ್ತು ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ನಗರಸಭೆ ಹತ್ತಿರದ ಅಂಬೇಡ್ಕರ್ ಭವನದಲ್ಲಿ ಈಚೆಗೆ ನಡೆದ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ದೀಪು ದೀಕ್ಷಾ ಸಂಸ್ಥೆ ಸಮಾಜಮುಖಿ ಕಾರ್ಯಗಳಿಗೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿ, ‘ಸಮಾಜದ ಮೇಲ್ವರ್ಗದ ವಿರೋಧದ ನಡುವೆ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲ ಸ್ವಾಭಿಮಾನದ ಬೀಜ ಬಿತ್ತಿದ ಸಾವಿತ್ರಿಬಾಯಿ ಅವರ ಪ್ರಯತ್ನ ಸದಾ ಸ್ಮರಣೀಯವಾದುದು’ ಎಂದರು.</p>.<p>ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಆರ್.ಮೋಹನರಾಜು ಉಪನ್ಯಾಸ ನೀಡಿದರು.</p>.<p>ಸವಿತಾ ಅಶೋಕ ಚಲವಾದಿ ಪ್ರಾಸ್ತಾವಿಕ ಮಾತನಾಡಿ, ದೀಪು ದೀಕ್ಷಾ ಸಂಸ್ಥೆಯ ಸೇವಾ ಕಾರ್ಯಗಳನ್ನು ವಿವರಿಸಿದರು.</p>.<p>ಗುರುಮಹಾಂತ ಶ್ರೀಗಳು, ನಂದವಾಡಗಿಯ ಚೆನ್ನಬಸವ ದೇಶಿಕೇಂದ್ರ ಶಿವಾಚಾರ್ಯರು ಹಾಗೂ ಹಜರತ್ ಸೈಯ್ಯದ್ ಷಾ ಮುರ್ತುಜ ಶಾ ಖಾದ್ರಿ ದರ್ಗಾ ಸಜ್ಜಾದ ನಶೀನ್ ಪೈಸಲ್ ಪಾಶಾ ಅವರು ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.</p>.<p>ದೀಪು ದೀಕ್ಷಾ ಸಂಸ್ಥೆಯ ಅಧ್ಯಕ್ಷ ಅಶೋಕ ಚಲವಾದಿ, ವಿಜಯಮಹಾಂತೇಶ ಗದ್ದನಕೇರಿ, ಪವಾಡೆಪ್ಪ ಚಲವಾದಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>