<p><strong>ರಬಕವಿ ಬನಹಟ್ಟಿ:</strong> ‘ಜೀವನದಲ್ಲಿ ಯಶಸ್ವಿಯಾಗಬೇಕಾದರೆ ನಮ್ಮಲ್ಲಿ ಆತ್ಮ ವಿಶ್ವಾಸ ಮತ್ತು ನಂಬಿಕೆ ಮುಖ್ಯ. ಜೀವನದಲ್ಲಿ ನಿರ್ದಿಷ್ಟವಾದ ಗುರಿ ಹೊಂದಿರಬೇಕು. ಗುರಿ ಸಾಧನೆಗೆ ಸತತ ಪ್ರಯತ್ನ ಮುಖ್ಯವಾಗಿದೆ‘ ಎಂದು ಹುಬ್ಭಳ್ಳಿಯ ಭಾರತೀಯ ಸ್ಟೇಟ್ ಬ್ಯಾಂಕ್ ವಿಭಾಗೀಯ ಕಾರ್ಯಾಲಯದ ಸಹಾಯಕ ವ್ಯವಸ್ಥಾಪಕಿ ರಶ್ಮಿ ಹೊಸಮನಿ ತಿಳಿಸಿದರು.</p>.<p>ಇಲ್ಲಿನ ಎಸ್ ಟಿ ಸಿ ಬಿಬಿಎ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಯಶಸ್ಸಿನ ಹಿಂದಿರುವ ಶಕ್ತಿ ನಮ್ಮ ಗುರುಗಳು. ಪ್ರತಿಯೊಬ್ಬರೂ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಜೀವನದಲ್ಲಿ ನಾವು ಯಶಸ್ವಿಯಾಗುತ್ತೇವೆ. ಕಲಿತ ಶಿಕ್ಷಣ ಸಂಸ್ಥೆ, ಹೆತ್ತ ತಂದೆ ತಾಯಿ ಮತ್ತು ಗುರುಗಳನ್ನು ನಾವು ಗೌರವಿಸಬೇಕು’ ಎಂದು ತಿಳಿಸಿದರು.</p>.<p>ಜೆಎಸ್ಎಸ್ ಸಂಘದ ಆಡಳಿತ ಮಂಡಳಿ ನಿರ್ದೇಶಕ ಭೀಮಶಿ ಮಗದುಮ್ ಮಾತನಾಡಿ, ‘ವಿದ್ಯಾರ್ಥಿಗಳ ಪ್ರಗತಿಗಾಗಿ ಸಂಘವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದುಕೊಂಡು ಇಂದು ಉನ್ನತ ಪದವಿ ಪಡೆದುಕೊಂಡು ಅದೇ ಕಾಲೇಜಿಗೆ ಅತಿಥಿಗಳಾಗಿ ಬರುವುದು ದೊಡ್ಡ ಗೌರವ’ ಎಂದರು.</p>.<p>ಜೆಎಸ್ಎಸ್ ಸಂಘದ ಪಂಡಿತ ಹನಗಂಡಿ, ಬಿಬಿಎ ಸಂಯೋಜಕ ಎಸ್.ಬಿ. ಉಕ್ಕಲಿ, ಮಂಜುನಾಥ ಬೆನ್ನೂರ ಮಾತನಾಡಿದರು. ಶ್ರೀಶೈಲ ಯಾದವಾಡ, ಮಹಾದೇವಿ ಕೊಳಕಿ, ಜಿ.ಎಚ್.ಕಾಬರಾ, ಪ್ರಕಾಶ ಕೆಂಗನಾಳ, ಮನೋಹರ ಶಿರಹಟ್ಟಿ, ಕಾವೇರಿ ಜಗದಾಳ, ಲಕ್ಷ್ಮಿ ಖವಾಸಿ, ಶಿರಶಿ ಹಳೆಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ‘ಜೀವನದಲ್ಲಿ ಯಶಸ್ವಿಯಾಗಬೇಕಾದರೆ ನಮ್ಮಲ್ಲಿ ಆತ್ಮ ವಿಶ್ವಾಸ ಮತ್ತು ನಂಬಿಕೆ ಮುಖ್ಯ. ಜೀವನದಲ್ಲಿ ನಿರ್ದಿಷ್ಟವಾದ ಗುರಿ ಹೊಂದಿರಬೇಕು. ಗುರಿ ಸಾಧನೆಗೆ ಸತತ ಪ್ರಯತ್ನ ಮುಖ್ಯವಾಗಿದೆ‘ ಎಂದು ಹುಬ್ಭಳ್ಳಿಯ ಭಾರತೀಯ ಸ್ಟೇಟ್ ಬ್ಯಾಂಕ್ ವಿಭಾಗೀಯ ಕಾರ್ಯಾಲಯದ ಸಹಾಯಕ ವ್ಯವಸ್ಥಾಪಕಿ ರಶ್ಮಿ ಹೊಸಮನಿ ತಿಳಿಸಿದರು.</p>.<p>ಇಲ್ಲಿನ ಎಸ್ ಟಿ ಸಿ ಬಿಬಿಎ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಯಶಸ್ಸಿನ ಹಿಂದಿರುವ ಶಕ್ತಿ ನಮ್ಮ ಗುರುಗಳು. ಪ್ರತಿಯೊಬ್ಬರೂ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಜೀವನದಲ್ಲಿ ನಾವು ಯಶಸ್ವಿಯಾಗುತ್ತೇವೆ. ಕಲಿತ ಶಿಕ್ಷಣ ಸಂಸ್ಥೆ, ಹೆತ್ತ ತಂದೆ ತಾಯಿ ಮತ್ತು ಗುರುಗಳನ್ನು ನಾವು ಗೌರವಿಸಬೇಕು’ ಎಂದು ತಿಳಿಸಿದರು.</p>.<p>ಜೆಎಸ್ಎಸ್ ಸಂಘದ ಆಡಳಿತ ಮಂಡಳಿ ನಿರ್ದೇಶಕ ಭೀಮಶಿ ಮಗದುಮ್ ಮಾತನಾಡಿ, ‘ವಿದ್ಯಾರ್ಥಿಗಳ ಪ್ರಗತಿಗಾಗಿ ಸಂಘವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದುಕೊಂಡು ಇಂದು ಉನ್ನತ ಪದವಿ ಪಡೆದುಕೊಂಡು ಅದೇ ಕಾಲೇಜಿಗೆ ಅತಿಥಿಗಳಾಗಿ ಬರುವುದು ದೊಡ್ಡ ಗೌರವ’ ಎಂದರು.</p>.<p>ಜೆಎಸ್ಎಸ್ ಸಂಘದ ಪಂಡಿತ ಹನಗಂಡಿ, ಬಿಬಿಎ ಸಂಯೋಜಕ ಎಸ್.ಬಿ. ಉಕ್ಕಲಿ, ಮಂಜುನಾಥ ಬೆನ್ನೂರ ಮಾತನಾಡಿದರು. ಶ್ರೀಶೈಲ ಯಾದವಾಡ, ಮಹಾದೇವಿ ಕೊಳಕಿ, ಜಿ.ಎಚ್.ಕಾಬರಾ, ಪ್ರಕಾಶ ಕೆಂಗನಾಳ, ಮನೋಹರ ಶಿರಹಟ್ಟಿ, ಕಾವೇರಿ ಜಗದಾಳ, ಲಕ್ಷ್ಮಿ ಖವಾಸಿ, ಶಿರಶಿ ಹಳೆಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>