<p>ಲೋಕಾಪುರ: ಇಲ್ಲಿನ 6ನೇ ವಾರ್ಡ್ನಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಪರದಾಡುವಂತಾಗಿದೆ.</p>.<p>ಚರಂಡಿಗಳು ಕಟ್ಟಿಕೊಂಡಿದ್ದು, ಅವುಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡಿಲ್ಲ. ಕೆಲವು ಕಡೆಗಳಲ್ಲಿ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ವಾಸನೆ ಬಡಿಯುತ್ತಿದೆ. ಮತ್ತೂ ಕೆಲವುಕ ಕಡೆಗಳಲ್ಲಿ ಚರಂಡಿಗಳೇ ಇಲ್ಲ. ಯಾವುದೇ ಮೂಲ ಸೌಲಭ್ಯ ಇಲ್ಲವಾಗಿದೆ ಎಂದು ಜನರು ದೂರಿದ್ದಾರೆ.</p>.<p>ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಮಲೇರಿಯಾ, ಚಿಕೂನ್ ಗುನ್ಯ, ಡೆಂಗಿ ಜ್ವರ ಮುಂತಾದ ಸಾಂಕ್ರಾಮಿಕ ರೋಗಗಳು ಕಾಡುತ್ತಿವೆ. ಮಳೆಗಾಲದಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗುವುದು ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.</p>.<p>ರಸ್ತೆಗಳು ಸಹ ಸಮರ್ಪಕವಾಗಿಲ್ಲ. ಸುತ್ತಮುತ್ತಲೂ ಗಿಡ ಗಂಟೆ ಬೆಳೆದಿರುವುದರಿಂದ ಮಕ್ಕಳನ್ನು ಸಹ ಹೊರಗೆ ಬಿಡಲು ಇಲ್ಲಿನ ಪಾಲಕರು ಹೆದರುವಂತಾಗಿದೆ.</p>.<p>ಒಳಚರಂಡಿ ನಿರ್ಮಾಣ ಮಾಡಬೇಕು. ಸಿ.ಸಿ.ರಸ್ತೆ ಮಾಡಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳುತ್ತಾರೆ.</p>.<p>ಸಿ.ಸಿ.ರಸ್ತೆ ಮಾಡಲು ಒಪ್ಪಿಗೆ ಸಿಕ್ಕಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆರ್.ಕೆ.ಮಹೇದ್ರಕರ ’ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲೋಕಾಪುರ: ಇಲ್ಲಿನ 6ನೇ ವಾರ್ಡ್ನಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಪರದಾಡುವಂತಾಗಿದೆ.</p>.<p>ಚರಂಡಿಗಳು ಕಟ್ಟಿಕೊಂಡಿದ್ದು, ಅವುಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡಿಲ್ಲ. ಕೆಲವು ಕಡೆಗಳಲ್ಲಿ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ವಾಸನೆ ಬಡಿಯುತ್ತಿದೆ. ಮತ್ತೂ ಕೆಲವುಕ ಕಡೆಗಳಲ್ಲಿ ಚರಂಡಿಗಳೇ ಇಲ್ಲ. ಯಾವುದೇ ಮೂಲ ಸೌಲಭ್ಯ ಇಲ್ಲವಾಗಿದೆ ಎಂದು ಜನರು ದೂರಿದ್ದಾರೆ.</p>.<p>ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಮಲೇರಿಯಾ, ಚಿಕೂನ್ ಗುನ್ಯ, ಡೆಂಗಿ ಜ್ವರ ಮುಂತಾದ ಸಾಂಕ್ರಾಮಿಕ ರೋಗಗಳು ಕಾಡುತ್ತಿವೆ. ಮಳೆಗಾಲದಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗುವುದು ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.</p>.<p>ರಸ್ತೆಗಳು ಸಹ ಸಮರ್ಪಕವಾಗಿಲ್ಲ. ಸುತ್ತಮುತ್ತಲೂ ಗಿಡ ಗಂಟೆ ಬೆಳೆದಿರುವುದರಿಂದ ಮಕ್ಕಳನ್ನು ಸಹ ಹೊರಗೆ ಬಿಡಲು ಇಲ್ಲಿನ ಪಾಲಕರು ಹೆದರುವಂತಾಗಿದೆ.</p>.<p>ಒಳಚರಂಡಿ ನಿರ್ಮಾಣ ಮಾಡಬೇಕು. ಸಿ.ಸಿ.ರಸ್ತೆ ಮಾಡಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳುತ್ತಾರೆ.</p>.<p>ಸಿ.ಸಿ.ರಸ್ತೆ ಮಾಡಲು ಒಪ್ಪಿಗೆ ಸಿಕ್ಕಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆರ್.ಕೆ.ಮಹೇದ್ರಕರ ’ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>