<p><strong>ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ):</strong> ‘ಜಾತಿ, ಧರ್ಮದ ಹೆಸರಿನಲ್ಲಿ ಅಧಿಕಾರ ನಡೆಸಬಾರದು. ಎಲ್ಲರೂ ಒಂದಾಗಿ ಮುನ್ನಡೆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ’ ಎಂದು ಕೇಂದ್ರದ ಮಾಜಿ ಸಚಿವ ಸುಶೀಲ್ಕುಮಾರ ಶಿಂದೆ ಹೇಳಿದರು.</p>.<p>ಕೂಡಲಸಂಗಮದಲ್ಲಿ ಮಂಗಳವಾರ ನಡೆದ 39ನೇ ಶರಣ ಮೇಳದಲ್ಲಿ ಮಾತನಾಡಿದ ಅವರು, ‘ಜಾತಿ, ಮತ, ಪಂಥಗಳನ್ನು ಅಳಿಸಿ ಹಾಕಲು ಬಸವಣ್ಣನವರ ತತ್ವಗಳ ಪ್ರತಿಪಾದನೆಗೆ ಹೆಚ್ಚಿನ ಒತ್ತು ಸಿಗಬೇಕಿದೆ’ ಎಂದರು.</p>.<p>‘ಪ್ರತ್ಯೇಕ ಲಿಂಗಾಯತ ಧರ್ಮ ಬೇಕು ಎನ್ನುವವರೊಂದಿಗೆ ನಾನಿದ್ದೇನೆ. ನಾನು ಕಕ್ಕಯ್ಯನ ಸಮಾಜಕ್ಕೆ ಸೇರಿದವನು. ಲಿಂಗಾಯತ ಧರ್ಮ ಬಿಟ್ಟು ಎಲ್ಲಿ ಹೋಗಲಿ?’ ಎಂದು ಪ್ರಶ್ನಿಸಿದರು.</p>.<p>ಸೋಮವಾರ ರಾತ್ರಿ ನಡೆದ ಮಠಾಧಿಪತಿಗಳ ಧರ್ಮ ಚಿಂತನಗೋಷ್ಠಿಯಲ್ಲಿ ಬಾಗಲಕೋಟೆ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ‘ಕರುಣೆಯ ಧರ್ಮವೇ ಬಸವ ಧರ್ಮ. ಇದು ಜಗತ್ತನ್ನು ಆಳುವ ಏಕೈಕ ಧರ್ಮವಾಗಲಿದೆ’ ಎಂದರು.</p>.<p>‘ಚಾಮರಾಜನಗರ ಜಿಲ್ಲೆ ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮೀಜಿ ಮಾತನಾಡಿ, ‘ಮಠಗಳು ಹಿಂದೆ ಮಾಡಿದ ಸೇವೆಯಿಂದಲೇ ಇಂದು ಜೀವಂತವಾಗಿವೆ. ಸಮಾಜಮುಖಿ ಕಾರ್ಯದಲ್ಲಿ ಎಲ್ಲ ಮಠಗಳು ತೊಡಗಬೇಕು’ ಎಂದರು. ಗೋಷ್ಠಿಯಲ್ಲಿ 30ಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ):</strong> ‘ಜಾತಿ, ಧರ್ಮದ ಹೆಸರಿನಲ್ಲಿ ಅಧಿಕಾರ ನಡೆಸಬಾರದು. ಎಲ್ಲರೂ ಒಂದಾಗಿ ಮುನ್ನಡೆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ’ ಎಂದು ಕೇಂದ್ರದ ಮಾಜಿ ಸಚಿವ ಸುಶೀಲ್ಕುಮಾರ ಶಿಂದೆ ಹೇಳಿದರು.</p>.<p>ಕೂಡಲಸಂಗಮದಲ್ಲಿ ಮಂಗಳವಾರ ನಡೆದ 39ನೇ ಶರಣ ಮೇಳದಲ್ಲಿ ಮಾತನಾಡಿದ ಅವರು, ‘ಜಾತಿ, ಮತ, ಪಂಥಗಳನ್ನು ಅಳಿಸಿ ಹಾಕಲು ಬಸವಣ್ಣನವರ ತತ್ವಗಳ ಪ್ರತಿಪಾದನೆಗೆ ಹೆಚ್ಚಿನ ಒತ್ತು ಸಿಗಬೇಕಿದೆ’ ಎಂದರು.</p>.<p>‘ಪ್ರತ್ಯೇಕ ಲಿಂಗಾಯತ ಧರ್ಮ ಬೇಕು ಎನ್ನುವವರೊಂದಿಗೆ ನಾನಿದ್ದೇನೆ. ನಾನು ಕಕ್ಕಯ್ಯನ ಸಮಾಜಕ್ಕೆ ಸೇರಿದವನು. ಲಿಂಗಾಯತ ಧರ್ಮ ಬಿಟ್ಟು ಎಲ್ಲಿ ಹೋಗಲಿ?’ ಎಂದು ಪ್ರಶ್ನಿಸಿದರು.</p>.<p>ಸೋಮವಾರ ರಾತ್ರಿ ನಡೆದ ಮಠಾಧಿಪತಿಗಳ ಧರ್ಮ ಚಿಂತನಗೋಷ್ಠಿಯಲ್ಲಿ ಬಾಗಲಕೋಟೆ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ‘ಕರುಣೆಯ ಧರ್ಮವೇ ಬಸವ ಧರ್ಮ. ಇದು ಜಗತ್ತನ್ನು ಆಳುವ ಏಕೈಕ ಧರ್ಮವಾಗಲಿದೆ’ ಎಂದರು.</p>.<p>‘ಚಾಮರಾಜನಗರ ಜಿಲ್ಲೆ ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮೀಜಿ ಮಾತನಾಡಿ, ‘ಮಠಗಳು ಹಿಂದೆ ಮಾಡಿದ ಸೇವೆಯಿಂದಲೇ ಇಂದು ಜೀವಂತವಾಗಿವೆ. ಸಮಾಜಮುಖಿ ಕಾರ್ಯದಲ್ಲಿ ಎಲ್ಲ ಮಠಗಳು ತೊಡಗಬೇಕು’ ಎಂದರು. ಗೋಷ್ಠಿಯಲ್ಲಿ 30ಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>