<p><strong>ಬೀಳಗಿ</strong>: ‘ಅನೇಕ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಚಿತ್ರಕಲಾ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಮೂಲಕ ಕಲಾವಿದರ ನೆರವಿಗೆ ಸರ್ಕಾರ ಮುಂದಾಗಬೇಕು’ ಎಂದು ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಬೀಳಗಿಯ ರುದ್ರಗೌಡ ಪಾಟೀಲ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕಲಾವಿದೆ ರಂಜಿತಾ ಸಾರಾವರಿ ಅವರ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ಹಾಗೂ ಕಾವ್ಯ ಕುಂಚ ಸಿಂಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರದರ್ಶನ ಉದ್ಘಾಟಿಸಿದ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀದೇವಿ ಪಾಟೀಲ ಮಾತನಾಡಿ, ‘ಕಲೆ ಯಾರೊಬ್ಬರ ಸ್ವತ್ತಲ್ಲ. ಕಲಾವಿದರಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಕಾರ್ಯೋನ್ಮುಖರಾಗಿರುವ ವಿಶ್ವ ವಿನೂತನ ಚಿತ್ರಕಲಾ ಮಹಾವಿದ್ಯಾಲಯದ ಶಿವಾನಂದ ಹಿರೇಮಠರ ಸೇವೆ ಅಭಿನಂದನಿಯ’ ಎಂದು ಹೇಳಿದರು.</p>.<p>ಕಸಾಪ ಬಾಗಲಕೋಟೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಸಿದ್ಧರಾಮ ಶಿರೊಳ ಮಾತನಾಡಿ, ‘ಸರ್ಕಾರ ಕಲಾವಿದರಿಗೆ ಸೂಕ್ತ ಸ್ಥಾನಮಾನ, ಪ್ರೋತ್ಸಾಹ ನೀಡುತ್ತಿಲ್ಲ. ಇದರಿಂದ ಕಲೆ ಅಳಿವಿನಂಚಿನಲ್ಲಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಕಲೆ ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಆದರೆ ಕೆಲವರಿಗೆ ಮಾತ್ರ ಒಲಿಯುತ್ತದೆ’ ಎಂದು ಕಜಾಪ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಂ. ಸಾಹುಕಾರ ಹೇಳಿದರು.</p>.<p>ಪತ್ರಕರ್ತ ವೀರೇಂದ್ರ ಶೀಲವಂತ ಅಧ್ಯಕ್ಷತೆ ವಹಿಸಿದ್ದರು. ಹುಚ್ಚೇಶ್ವರ ಮಠದ ಫಕೀರಯ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಹಿರಿಯ ಸಾಹಿತಿಗಳಾದ ಬಿ.ಎನ್. ಮುಂಡರಗಿ, ಸಿದ್ದಪ್ಪ ಬಿದರಿ, ಸಂತೋಷಕುಮಾರ ವೈದ್ಯ, ಸಿದ್ದು ಸಾರಾವರಿ, ಸಂಗಣ್ಣ ನಾಗರಾಳ ಭಾಗವಹಿಸಿದ್ದರು.</p>.<p>ಬಾಗಲಕೋಟೆಯ ವಿಶ್ವ ವಿನೂತನ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಶಿವಾನಂದ ಹಿರೇಮಠ ಅಭಿನಂದನಾ ನುಡಿ ಹೇಳಿದರು. ಕರ್ನಾಟಕ ಜಾನಪದ ಪರಿಷತ್ ಬೀಳಗಿ ತಾಲ್ಲೂಕು ಸಮಿತಿಯ ಅಧ್ಯಕ್ಷ ಶೇಖರ ಗೊಳಸಂಗಿ ಕಾರ್ಯಕ್ರಮ ನಿರೂಪಿಸಿದರು.</p>.<p>ಶ್ರೀಶೈಲ ಜತ್ತಿ, ಜ್ಯೋತಿಬಾ ಅವತಾಡೆ ಇದ್ದರು. ರಂಜಿತಾ ಸಾರಾವರಿ ಚಿತ್ರಿಸಿದ ಚಿತ್ರಕಲಾ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ‘ಅನೇಕ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಚಿತ್ರಕಲಾ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಮೂಲಕ ಕಲಾವಿದರ ನೆರವಿಗೆ ಸರ್ಕಾರ ಮುಂದಾಗಬೇಕು’ ಎಂದು ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಬೀಳಗಿಯ ರುದ್ರಗೌಡ ಪಾಟೀಲ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕಲಾವಿದೆ ರಂಜಿತಾ ಸಾರಾವರಿ ಅವರ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ಹಾಗೂ ಕಾವ್ಯ ಕುಂಚ ಸಿಂಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರದರ್ಶನ ಉದ್ಘಾಟಿಸಿದ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀದೇವಿ ಪಾಟೀಲ ಮಾತನಾಡಿ, ‘ಕಲೆ ಯಾರೊಬ್ಬರ ಸ್ವತ್ತಲ್ಲ. ಕಲಾವಿದರಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಕಾರ್ಯೋನ್ಮುಖರಾಗಿರುವ ವಿಶ್ವ ವಿನೂತನ ಚಿತ್ರಕಲಾ ಮಹಾವಿದ್ಯಾಲಯದ ಶಿವಾನಂದ ಹಿರೇಮಠರ ಸೇವೆ ಅಭಿನಂದನಿಯ’ ಎಂದು ಹೇಳಿದರು.</p>.<p>ಕಸಾಪ ಬಾಗಲಕೋಟೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಸಿದ್ಧರಾಮ ಶಿರೊಳ ಮಾತನಾಡಿ, ‘ಸರ್ಕಾರ ಕಲಾವಿದರಿಗೆ ಸೂಕ್ತ ಸ್ಥಾನಮಾನ, ಪ್ರೋತ್ಸಾಹ ನೀಡುತ್ತಿಲ್ಲ. ಇದರಿಂದ ಕಲೆ ಅಳಿವಿನಂಚಿನಲ್ಲಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಕಲೆ ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಆದರೆ ಕೆಲವರಿಗೆ ಮಾತ್ರ ಒಲಿಯುತ್ತದೆ’ ಎಂದು ಕಜಾಪ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಂ. ಸಾಹುಕಾರ ಹೇಳಿದರು.</p>.<p>ಪತ್ರಕರ್ತ ವೀರೇಂದ್ರ ಶೀಲವಂತ ಅಧ್ಯಕ್ಷತೆ ವಹಿಸಿದ್ದರು. ಹುಚ್ಚೇಶ್ವರ ಮಠದ ಫಕೀರಯ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಹಿರಿಯ ಸಾಹಿತಿಗಳಾದ ಬಿ.ಎನ್. ಮುಂಡರಗಿ, ಸಿದ್ದಪ್ಪ ಬಿದರಿ, ಸಂತೋಷಕುಮಾರ ವೈದ್ಯ, ಸಿದ್ದು ಸಾರಾವರಿ, ಸಂಗಣ್ಣ ನಾಗರಾಳ ಭಾಗವಹಿಸಿದ್ದರು.</p>.<p>ಬಾಗಲಕೋಟೆಯ ವಿಶ್ವ ವಿನೂತನ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಶಿವಾನಂದ ಹಿರೇಮಠ ಅಭಿನಂದನಾ ನುಡಿ ಹೇಳಿದರು. ಕರ್ನಾಟಕ ಜಾನಪದ ಪರಿಷತ್ ಬೀಳಗಿ ತಾಲ್ಲೂಕು ಸಮಿತಿಯ ಅಧ್ಯಕ್ಷ ಶೇಖರ ಗೊಳಸಂಗಿ ಕಾರ್ಯಕ್ರಮ ನಿರೂಪಿಸಿದರು.</p>.<p>ಶ್ರೀಶೈಲ ಜತ್ತಿ, ಜ್ಯೋತಿಬಾ ಅವತಾಡೆ ಇದ್ದರು. ರಂಜಿತಾ ಸಾರಾವರಿ ಚಿತ್ರಿಸಿದ ಚಿತ್ರಕಲಾ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>